ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

•ಕನಿಷ್ಟ ಮಾಸಿಕ ಗೌರವ ಧನ-ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಲು ಒತ್ತಾಯ

Team Udayavani, Jun 20, 2019, 11:12 AM IST

HV-TDY-4..

ಹಾವೇರಿ: ಜಿಲ್ಲಾಡಳಿತ ಕಚೇರಿ ಎದುರು ಬುಧವಾರ ಆಶಾ ಕಾರ್ಯಕರ್ತೆರು ಪ್ರತಿಭಟನೆ ನಡೆಸಿದರು.

ಹಾವೇರಿ: ಕನಿಷ್ಠ ಮಾಸಿಕ ಗೌರವ ಧನ, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮಿತಿ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಬುಧವಾರ ನಗರದ ಜಿಲ್ಲಾಡಳಿತ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು, ಜಿಲ್ಲಾಡಳಿತ ಭವನದ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಆರೋಗ್ಯ ಇಲಾಖೆ ಯೋಜನೆ ಹಾಗೂ ಸೇವೆಗಳನ್ನು ಹಳ್ಳಿ ಹಾಗೂ ನಗರ ಪ್ರದೇಶದ ಬೇರುಮಟ್ಟಕ್ಕೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರು ನಿರಂತರಾಗಿ ಶ್ರಮಿಸುತ್ತಿದ್ದಾರೆ. ಗರ್ಭಿಣಿಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಪೌಷ್ಠಿಕತೆಯ ಅರಿವು ಮೂಡಿಸಿ ಸಾಂಕ್ರಾಮಿಕ ರೋಗಗಳ ತೆಡೆಗಟ್ಟಲು ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಆಶಾ ಕಾರ್ಯಕರ್ತೆಯರಿಗೆ ಸೌಲಭ್ಯಗಳನ್ನು ಕಲ್ಪಿಸದೇ ಶೋಷಣೆ ಮಾಡುತ್ತಿದ್ದು, ಕನಿಷ್ಠ ವೇತನ ಸಹ ನೀಡದೇ ದುಡಿಸಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ಕೇಂದ್ರದ ಪ್ರೋತ್ಸಾಹಧನ ನೀಡುವ ಆಶಾ ಸಾಫ್ಟ್‌ ವೇತನ ಮಾದರಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರು ವರ್ಷಗಳಿಂದ ಆರ್ಥಿಕ ನಷ್ಟವಾಗುತ್ತಿದೆ. ಅಲ್ಲದೇ ರಾಜ್ಯ ಸರ್ಕಾರ ನೀಡುವ 3500 ರೂ. ಗೌರವಧನವನ್ನು ವಿಳಂಬ ಮಾಡಿ ನೀಡುತ್ತಿದ್ದು, ಕಳೆದ 4-5 ತಿಂಗಳಿನಿಂದ ಬಾಕಿ ಇದೆ. ಕಳೆದ 9 ತಿಂಗಳಿನಿಂದ ಕೇಂದ್ರದ ಪ್ರೋತ್ಸಾಹಧನ ಬಾಕಿ ಇದೆ. ಹೊಸ ವೇತನ ವಿಧಾನ ಪದೇ ಪದೇ ಬದಲಾವಣೆ ಮಾಡುತ್ತಿರುವುದರಿಂದ ಆಶಾ ಕಾರ್ಯಕರ್ತೆಯರು ಗೌರವಧನಕ್ಕೂ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಮನವಿಯಲ್ಲಿ ದೂರಿದ್ದಾರೆ.

ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ, ಆಶಾ ಕಾರ್ಯಕರ್ತೆಯರು ಮರಣ ಹೊಂದಿದರೆ ಅವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ನಿವೃತ್ತ ಹೊಂದುವ ಆಶಾಗಳಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು. ಸಾಮಾಜಿಕ ಸುರಕ್ಷಾ ಯೋಜನೆ ವ್ಯಾಪ್ತಿಗೆ ಆಶಾ ಕಾರ್ಯಕರ್ತೆಯರನ್ನು ಸೇರಿಸಿ ಪ್ರಧಾನಮಂತ್ರಿ ಜೀವನಜ್ಯೋತಿ ಯೋಜನೆ ಹಾಗೂ ಸುರಕ್ಷಾ ಬೀಮಾ ಯೋಜನೆ ಕೂಡಲೇ ಜಾರಿಗೊಳಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಹೆರಿಗೆ ರಜೆಯ ಸೌಲಭ್ಯ ಕಲ್ಪಿಸಬೇಕು. ಪ್ರತಿ ತಿಂಗಳು ವೇತನವನ್ನು ನಿಗದಿತ ದಿನಾಂಕದೊಳಗೆ ಬಿಡುಗಡೆಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ, ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪೂರ, ಮುಖಂಡರಾದ ರೂಪಾ ಮಾನೆ, ಮಂಜುಳಾ ಮಾಸೂರ, ವನಜಾಕ್ಷಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.