ಬಂಧಿತ ರೈತ ಶಿವನಗೌಡ ಬಿಡುಗಡೆಗೆ ಆಗ್ರಹಿಸಿ ಧರಣಿ


Team Udayavani, Nov 22, 2019, 12:52 PM IST

hv-tdy-2

ಬಂಕಾಪುರ: ತಹಶೀಲ್ದಾರ್‌ ಚಂದ್ರಶೇಖರ ಗಾಳಿ ಅವರ ಆದೇಶದ ಮೇರೆಗೆ ಕಲ್ಯಾಣದ ರೈತ ಶಿವನಗೌಡ ಪಾಟೀಲರನ್ನು ಬಂಧಿ ಸಿ ಜೈಲಿನಲ್ಲಿರಿಸಿರುವುದನ್ನು ಖಂಡಿಸಿ, ಬಿಡುಗಡೆಗೊಳಿಸುವಂತೆ ಆಗ್ರಹಿಸಿ ತಾಲೂಕು ಅನ್ನದಾತ ರೈತ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಉಪತಹಶೀಲ್ದಾರ್‌ ಕಚೇರಿ ಎದುರು ಧರಣಿ ನಡೆಸಿದರು.

ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಂದು ತಹಶೀಲ್ದಾರ್‌ ಗಾಳಿ ಸುಳ್ಳು ಆರೋಪ ಹೊರಿಸಿ ರೈತ ಶಿವನಗೌಡ ಪಾಟೀಲ ಅವರನ್ನು ಹೊಲದಲ್ಲಿಯೇ ಬಂಧಿಸಿ ಏಳು ದಿನಗಳಿಂದ ಜೈಲಿನಲ್ಲಿರಿಸಿರುವುದು ಖೇದಕರ ಸಂಗತಿ. ತಮ್ಮ ಹಕ್ಕಿಗಾಗಿ ಹೋರಾಡುವ ರೈತರನ್ನು ಬಂಧಿಸಿ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಧರಣಿ ನಿರತರು ಆರೋಪಿಸಿದರು.

ಉಪತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಧರಣಿ ಹಿಂಪಡೆಯುವಂತೆ ಸಿಪಿಐ ಬಸವರಾಜ ಹಳಬಣ್ಣವರ ಮನವಿ ಮಾಡಿದರು. ಮನವಿಗೆ ಸ್ಪಂದಿಸದ ರೈತ ಹೋರಾಟ ಸಮಿತಿಯವರು ಉಪವಿಭಾಗಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಹಾಗೂ ರೈತನನ್ನು ಬಿಡುಗಡೆ ಗೊಳಿಸುವರೆಗೂ ಧರಣಿ ಮುಂದುವರೆಸುವುದಾಗಿ ಪಟ್ಟು ಹಿಡಿದರು. ತಾಲೂಕಾಡಳಿತಕ್ಕೆ ಧಿಕ್ಕಾರದ ಘೋಷಣೆ ಕೂಗುವ ಮೂಲಕ ಧರಣಿ ಮುಂದುವರೆಸಿದರು.

ವಿಷಯ ಅರಿತ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಣ್ಣನವರ ಸ್ಥಳಕ್ಕಾಗಮಿಸಿ ಚರ್ಚಿಸಿದರು. ನಂತರ ಬಂಧಿತ ರೈತನನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆದೇಶಿಸಿದರು. ಈ ವಿಷಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ತಿಳಿಸಲಾಗುವುದು ಎಂದು ಹೇಳಿದ ನಂತರ ಧರಣಿ ನಿರತರು ಧರಣಿ ಹಿಂಪಡೆದರು. ನಂತರ ಧರಣಿ ನಿರತರು ಉಪವಿಬಾಗಾಧಿಕಾರಿ ಅನ್ನಪೂರ್ಣ ಮುದಕಣ್ಣನವರ ಮೂಲಕ ಸರಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.

ರೈತ ಹೋರಾಟ ಸಮಿತಿ ಅಧ್ಯಕ್ಷ ಗಂಗಾಧರ ಗಡ್ಡೆ, ಕಾರ್ಯದರ್ಶಿ ನವೀನ ಸವಣೂರ, ವಿರುಪಾಕ್ಷಗೌಡ ಪಾಟೀಲ, ನಾಗರಾಜ ಪಾಟೀಲ, ಮಲ್ಲೇಶಪ್ಪ ಬೂದಿಹಾಳ, ಚಂದ್ರಶೇಖರ ಮಾನೋಜಿ, ಯಲ್ಲಪ್ಪ ಹೊಸಪೇಟೆ, ಶಂಕರಗೌಡ ಪಾಟೀಲ, ಪಂಚಾಕ್ಷರಿ ಉಪ್ಪಣಸಿ, ನಿಂಗಪ್ಪ ಬನ್ನೂರ, ಉಳವಯ್ಯ ಚಿಗರಿಮಠ, ನಿಂಗಪ್ಪ ಒಡಣ್ಣಿ, ಬಸವರಾಜ ಮೇಳ್ಳಾಗಟ್ಟಿ, ಚನ್ನವೀರಪ್ಪ ಮಲ್ಲಿವಾಡ, ಬೂದಪ್ಪ ಬೂದ್ಯಾಳ, ಪರಸಪ್ಪ ಆರೇರ್‌, ವಿ.ಎಸ್‌.ಚೌಕಿಮಠ, ಬಸಪ್ಪ ಕೋರಿ ಸೇರಿದಂತೆ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.