ಎಲ್ಐಸಿ ಕಚೇರಿ ಎದುರು ಪ್ರತಿಭಟನೆ
Team Udayavani, Feb 5, 2020, 3:17 PM IST
ಹಾವೇರಿ: ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಎಲ್ಐಸಿ ನೌಕರರ ಸಂಘ ಮತ್ತು ಪ್ರತಿನಿಧಿಗಳ ಸಂಘದ ಸದಸ್ಯರು ಮಂಗಳವಾರ ಎಲ್ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್ಐಸಿಯನ್ನು ಶೇರು ಬಂಡವಾಳ ಮಾರುಕಟ್ಟೆಯಲ್ಲಿ ನೋಂದಾಯಿಸಿ ಸ್ವಲ್ಪ ಪ್ರಮಾಣದ ಶೇರನ್ನು ಖಾಸಗಿ ಕಂಪನಿಗಳಿಗೆ ವಿಕ್ರಯಿಸಿ ಬರುವ ಆದಾಯದಿಂದ ತಮ್ಮ ವಿತ್ತೀಯ ಕೊರತೆ ಸರಿದೂಗಿಸುವುದಾಗಿ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಹಂತಹಂತವಾಗಿ ಖಾಸಗಿಯವರ ಕಬಂಧ ಬಾಹುಗಳಿಗೆ ವರ್ಗಾಯಿಸಲು ಹವಣಿಸಿದ್ದಾರೆ. ಇದಕ್ಕೆಲ್ಲ ಕಳೆದ 25 ವರ್ಷಗಳಲ್ಲಿನ ಆರ್ಥಿಕ ನೀತಿ ಮತ್ತು ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿನ ಆರ್ಥಿಕ ನೀತಿಗಳೇ ಕಾರಣವಾಗಿದೆ. ಇದರಿಂದ ದೇಶದ ಆರ್ಥಿಕ ಸ್ಥಿತಿ ಹದಗೆಡುತ್ತ ಬಂದಿದೆ ಎಂದರು.
ಸರ್ಕಾರಕ್ಕೆ ಯೋಜನೆ ರೂಪಿಸಲು ಸರ್ಕಾರದಲ್ಲಿ ಹಣವಿಲ್ಲದಂತಾಗಿದೆ. ಅನೇಕ ಸಾರ್ವಜಿಕ ಉದ್ದಿಮೆಗಳು ನಷ್ಟದಲ್ಲಿರುವುದರಿಂದ ಸುಸೂತ್ರವಾಗಿ ಹೊರಟಿರುವ ಎಲ್ಐಸಿ ಶೇರು ಮಾರಾಟ ಮಾಡಿ ಆ ಹಣದಲ್ಲಿ ಯೋಜನೆ ರೂಪಿಸುವ ದುರಾಲೋಚನೆ ಸರ್ಕಾರದ್ದಾಗಿದೆ. ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು. ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪ ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ