![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
‘ಕರಾಳ ದಿನ’ಆಚರಿಸಿದ ರೈತರ ಬಂಧನ-ಬಿಡುಗಡೆ
Team Udayavani, Nov 2, 2018, 4:26 PM IST
![2-november-19.gif](https://www.udayavani.com/wp-content/uploads/2018/11/2/2-november-19.gif)
ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಉತ್ತರ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ರಾಜ್ಯೋತ್ಸವ ದಿನವನ್ನು ‘ಕರಾಳ ದಿನ’ವನ್ನಾಗಿ ಆಚರಿಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ ಘಟನೆ ಗುರುವಾರ ನಗರದಲ್ಲಿ ನಡೆಯಿತು. ನಗರದ ಹೊಸ್ಮನಿ ಸಿದ್ದಪ್ಪ ವೃತ್ತದ ರೈತ ಹುತಾತ್ಮ ಸ್ಮಾರಕದ ಬಳಿ ರೈತರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವಿವಿಧ ಧರಣಿ ನಡೆಸುತ್ತಿದ್ದರು. ಸ್ಥಳಕ್ಕೆ ಉಸ್ತುವಾರಿ ಸಚಿವರು ಅಥವಾ ಜಿಲ್ಲಾ ಧಿಕಾರಿಗಳು ಬಂದು ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದರು. ಆದರೆ, ಅವರು ಬರಲು ಸಾಧ್ಯವಾಗುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪಟ್ಟು ಸಡಿಲಿಸದೇ ಪ್ರತಿಭಟನೆ ಮುಂದುವರಿಸಿದಾಗ, ಪೊಲೀಸರು 30ಕ್ಕೂ ಹೆಚ್ಚು ರೈತರನ್ನು ಬಂಧಿಸಿದರು. ಬಳಿಕ ಶಹರ ಪೊಲೀಸ್ ಠಾಣೆಯಲ್ಲಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದರು.
ಬಂಧನಕ್ಕೂ ಮುನ್ನ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಹನುಮಂತಪ್ಪ ದಿವಿಗಿಹಳ್ಳಿ, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಗೊಂಡು ಆರು ತಿಂಗಳು ಕಳೆದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರ್ಕಾರ ಉತ್ತರ ಕರ್ನಾಟಕ ಹಾಗೂ ಈ ಭಾಗದ ರೈತರ ಬೇಡಿಕೆಗಳನ್ನು ಕಡೆಗಣಿಸುವ ಮೂಲಕ ಮಲತಾಯಿ ಧೋರಣೆ ತೋರಲಾಗಿದೆ. ಸರ್ಕಾರ ರಚನೆಗೊಂಡ ಸಂದರ್ಭದಲ್ಲಿ ಮುಖ್ಯಂತ್ರಿಗಳು ತಿಂಗಳಿಗೊಮ್ಮೆ ರೈತರ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಒಂದೇ ಒಂದು ಬಾರಿಯೂ ಸಭೆ ಕರೆದು ಚರ್ಚಿಸಿಲ್ಲ. ಸಮ್ಮಿಶ್ರ ಸರ್ಕಾರ ಕೇವಲ ದಕ್ಷಿಣ ಕರ್ನಾಟಕದ 4 ಜಿಲ್ಲೆಗಳಿಗೆ ಮಾತ್ರ ಸೀಮಿತಗೊಂಡಿದೆ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಈ ಭಾಗದ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕೂಡಲೇ ರೈತರ ಸಭೆ ಕರೆದು ಚರ್ಚಿಸಬೇಕು. ಇಲ್ಲದಿದ್ದರೆ ಮುಂಬರುವ ಚಳಿಗಾಲದ ಅ ವೇಶನದ ಸಂದರ್ಭದಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ 10 ಸಾವಿರಕ್ಕೂ ಹೆಚ್ಚು ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಪ್ರಮುಖ ಬೆಳೆಯಾದ ಮೆಕ್ಕೆಜೋಳ ಕಟಾವಿಗೆ ಬಂದಿದ್ದು ಕನಿಷ್ಟ ಬೆಂಬಲ ಬೆಲೆ ದರದಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು. ಇದಕ್ಕಾಗಿ ತಾಲೂಕಿಗೊಂದು ಖರೀದಿ ಕೇಂದ್ರ ತೆರೆಯಬೇಕು. ಕೇಂದ್ರ ಸರ್ಕಾರ ಘೋಷಿಸಿದಂತೆ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ 1700 ರೂ. ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನ 200 ರೂ. ಸೇರಿ ಒಟ್ಟು ಕ್ವಿಂಟಲ್ ಗೆ 1900 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕು ಪತ್ರ ನೀಡಲು ಅಕ್ರಮ ಸಕ್ರಮ ಸಮಿತಿ ಶೀಘ್ರವೇ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೂದಿಹಳ್ಳಿ, ತಾಲೂಕಾಧ್ಯಕ್ಷ ಫಕ್ಕೀರಗೌಡ ಗಾಜೀಗೌಡ್ರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲೆಗೆ ಸರಿಯಾಗಿ ಭೇಟಿ ಕೊಡುತ್ತಿಲ್ಲ. ಜಿಲ್ಲೆಯ ಸಮಸ್ಯೆಗಳನ್ನು ಸರ್ಕಾರದ ಗಮನಸೆಳೆಯುವ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿದರು. ರೈತ ಮುಖಂಡರಾದ ಫಕ್ಕೀರೇಶ ಕಾಳಿ, ಜಗದೀಶ ಕೂಸಗೂರ, ಹೊನ್ನಪ್ಪ ಸಣ್ಣಬಾರ್ಕಿ, ರಾಮನಗೌಡ ತರ್ಲಘಟ್ಟ, ನಾಗರಾಜ ರಾಮಜ್ಜನವರ ಸೇರಿದಂತೆ ನೂರಾರು ರೈತರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.