ಪ್ರೋತ್ಸಾಹ ಧನ ಬದಲಿಗೆ ಖರೀದಿ ಮಾಡಿ


Team Udayavani, May 17, 2020, 1:49 PM IST

ಪ್ರೋತ್ಸಾಹ ಧನ ಬದಲಿಗೆ ಖರೀದಿ ಮಾಡಿ

ಹಾವೇರಿ: ಬೆಳೆಗೆ ಯೋಗ್ಯ ಬೆಲೆ ಸಿಗದೆ ಭಾರಿ ಸಂಕಷ್ಟಕ್ಕೆ ಸಿಲುಕಿರುವ ಮೆಕ್ಕೆಜೋಳ ಬೆಳೆಗಾರರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ತಲಾ ಐದು ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಆದರೆ, ಜಿಲ್ಲೆಯ ರೈತರು ಮಾತ್ರ ಪ್ರೋತ್ಸಾಹಧನ ಬದಲಾಗಿ ಸರ್ಕಾರ ಮೆಕ್ಕೆಜೋಳ ಖರೀದಿಸಲು ಮುಂದಾಗಬೇಕು ಎಂದು ಒತ್ತಡ ಹಾಕುತ್ತಿದ್ದಾರೆ.

ಲಾಕ್‌ಡೌನ್‌ ಸೇರಿದಂತೆ ಇನ್ನಿತರ ಕಾರಣಗಳಿಂದ ಈ ಬಾರಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಅರ್ಧಕ್ಕರ್ಧ ಕುಸಿತಕಂಡಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ 1,760 ರೂ. ಸಲಹಾ ಬೆಲೆ ನಿಗದಿಪಡಿಸಿದೆಯಾದರೂ ಖರೀದಿ ಕೇಂದ್ರ ತೆರೆದು ಅದನ್ನು ಖರೀದಿಸುವ ಪ್ರಕ್ರಿಯೆ ಈವರೆಗೆ ನಡೆದಿಲ್ಲ. ಇದು ಮೆಕ್ಕೆಜೋಳ ಬೆಳೆಗಾರರು ಸರ್ಕಾರದ ಮೇಲೆ ಕಿಡಿಕಾರುವಂತೆ ಮಾಡಿತ್ತು. ಪಡಿತರದಲ್ಲಿ ವಿತರಿಸುವ ಆಹಾರಧಾನ್ಯದ ಪಟ್ಟಿಯಿಂದ ಮೆಕ್ಕೆಜೋಳ ಹೊರಗಿಟ್ಟಿದ್ದರಿಂದ ಅದನ್ನು ಬೆಂಬಲಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಬಂದಿದೆ. ರೈತರು ರಾಜ್ಯ ಸರ್ಕಾರವೇ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಡ ಹಾಕುತ್ತಲೇ ಬಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿಸಲು ಈವರೆಗೂ ಮುಂದಾಗಿಲ್ಲ.

ಬದಲಾಗಿ ಈ ಮೊದಲು ಕೆಎಂಎಫ್‌ನಿಂದ ರಾಜ್ಯದಲ್ಲಿ 20 ಸಾವಿರ ಮೆ.ಟನ್‌. ಮೆಕ್ಕೆಜೋಳ ಬೆಂಬಲಬೆಲೆಯಲ್ಲಿ ಖರೀದಿಸಲು ಅನುಕೂಲ ಮಾಡಿಕೊಟ್ಟ ಸರ್ಕಾರ, ಈಗ ಬೆಳೆಗಾರರಿಗೆ ತಲಾ ಐದು ಸಾವಿರ ರೂ. ನೀಡಲು ಮುಂದಾಗಿದೆ. ಹಾವೇರಿ ಜಿಲ್ಲೆಯೊಂದ ರಲ್ಲಿಯೇ ಮುಂಗಾರು ಹಂಗಾಮಿ ನಲ್ಲಿ ಬೆಳೆದ 10 ಲಕ್ಷ ಟನ್‌ ಹಾಗೂ ಹಿಂಗಾರಿನಲ್ಲಿ ಬೆಳೆದ 1.5 ಲಕ್ಷ ಟನ್‌ ಸೇರಿ 11.5 ಲಕ್ಷ ಟನ್‌ ಮೆಕ್ಕೆಜೋಳ ಬೆಳೆ ದಾಸ್ತಾನು ಇದೆ. (ಕೆಎಂಎಫ್‌ನಿಂದ ಶನಿವಾರದವರೆಗೆ 398 ರೈತರಿಂದ ಕೇವಲ 17721 ಕ್ವಿಂಟಾಲ್‌ ಮೆಕ್ಕೆಜೋಳ ಮಾತ್ರ ಖರೀದಿಯಾಗಿದೆ) ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮೆಕ್ಕೆಜೋಳ ಜಿಲ್ಲೆಯಲ್ಲಿರುವುದರಿಂದ ಬೆಳೆಗಾರರು ತಲಾ ಐದು ಸಾವಿರ ರೂ. ಕೊಡುವ ಬದಲಿಗೆ ಬೆಂಬಲಬೆಲೆಯಲ್ಲಿ ಬೆಳೆ ಖರೀದಿಸಲು ಸರ್ಕಾರ ಮುಂದಾಗಬೇಕು ಎಂಬ ಒತ್ತಡ ಮುಂದುವರಿಸಿದ್ದಾರೆ.

ಸರ್ಕಾರಕ್ಕೂ ಪತ್ರ: ಮಳೆಗಾಲದಲ್ಲಿ ಅತಿವೃಷ್ಟಿ, ನೆರೆಯಿಂದ ಕೆಂಗೆಟ್ಟಿದ್ದ ರೈತರು ಈ ನಡುವೆಯೂ ಒಂದಿಷ್ಟು ಮೆಕ್ಕೆಜೋಳ ಬೆಳೆದಿದ್ದಾರೆ. ಜಿಲ್ಲೆಯಲ್ಲಿ ಅರ್ಧದಷ್ಟು ರೈತರು ಮೆಕ್ಕೆಜೋಳವನ್ನೇ ಬೆಳೆಯುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಬೆಲೆಯು ಕಡಿಮೆಯಾಗುತ್ತಿರುವುದರಿಂದ ಕನಿಷ್ಠ ಬೆಂಬಲಬೆಲೆ ಯೋಜನೆ ಅಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿ ಸಹ ರೈತರ ಪರವಾಗಿ ಎರಡು ತಿಂಗಳ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಈವರೆಗೂ ಸ್ಪಂದನೆ ಸಿಕ್ಕಿಲ್ಲ.

ಮೆಕ್ಕೆಜೋಳ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದಾಗಿ ಸಂಸದ ಶಿವಕುಮಾರ ಉದಾಸಿ ಹೇಳಿದ್ದರು. ಇನ್ನು ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮೆಕ್ಕೆಜೋಳ ಬೆಳೆಗಾರರ ಬವಣೆಯನ್ನು ಮುಖ್ಯಮಂತ್ರಿಯವರ ಗಮನಸೆಳೆದಿರುವುದಾಗಿಯೂ ಹೇಳಿದ್ದರು. ಆದರೆ, ಇದ್ಯಾವುದೂ ಈವರೆಗೆ ಫಲ ಕೊಡದೆ ಇರುವುದು ಮೆಕ್ಕೆಜೋಳ ಬೆಳೆಗಾರರನ್ನು ಮತ್ತಷ್ಟು ಕೆರಳಿಸಿದೆ. ಒಟ್ಟಾರೆ ಸರ್ಕಾರದ ಪ್ರೋತ್ಸಾಹಧನಕ್ಕಿಂತ ಮೆಕ್ಕೆಜೋಳವನ್ನು ಸರ್ಕಾರವೇ ಖರೀದಿಸಬೇಕು ಎಂಬ ಒತ್ತಾಸೆ ದಟ್ಟವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕಾದು ನೋಡಬೇಕಿದೆ.

ಬೆಳೆಗಾರರಿಗೆ ಪ್ರೋತ್ಸಾಹಧನ ಕೊಡುವ ಬದಲಿಗೆ ಮೆಕ್ಕೆಜೋಳವನ್ನು ಬೆಂಬಲಬೆಲೆಯಲ್ಲಿ ಖರೀದಿಸಲು ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಆಗ ಮಾತ್ರ ಸರ್ಕಾರ ರೈತರಿಗೆ ನಿಜವಾಗಿಯೂ ಸಹಾಯ ಮಾಡಿದಂತಾಗುತ್ತದೆ. ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಂದರೆ ಅಂದಾಜು ಹತ್ತು ಲಕ್ಷ ಟನ್‌ ಮೆಕ್ಕೆಜೋಳವಿದ್ದು, ಸರ್ಕಾರ ಕೂಡಲೇ ಖರೀದಿಸಲು ಮುಂದಾಗಬೇಕು.  –ಮಲ್ಲಿಕಾರ್ಜುನ ಬಳ್ಳಾರಿ, ರೈತ ಮುಖಂಡ

ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆಗಾರರಿಗೆ ತಲಾ ಐದು ಸಾವಿರ ರೂ.ಗಳ ಪ್ರೋತ್ಸಾಹಧನ ಘೋಷಿಸಿದೆ. ಜಿಲ್ಲೆಯಲ್ಲಿ 1.60 ಲಕ್ಷ ದಿಂದ 1.80 ಲಕ್ಷ ಮೆಕ್ಕೆಜೋಳ ಬೆಳೆಗಾರರಿದ್ದು, ಇವರಿಗೆ ಪ್ರೋತ್ಸಾಹಧನದ ಲಾಭ ದೊರಕಲಿದೆ. ಈಗಷ್ಟೇ ಘೋಷಣೆಯಾಗಿದ್ದು, ಮಾರ್ಗಸೂಚಿಗಳ ನಿರೀಕ್ಷೆಯಲ್ಲಿದ್ದೇವೆ. –ಬಿ. ಮಂಜುನಾಥ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕರು

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.