ರಾಜೀವ್ ಗಾಂಧಿ ವಿವಿ ಕಾಯೆ ತಿದ್ದುಪಡಿಗೆ ವಿರೋಧ
ವಿಶ್ವವಿದ್ಯಾಲಯಕ್ಕೆ ಸ್ವಾಯತ್ತತೆ ರಚನೆ ಈ ವರೆಗೆ ಸರಿಯಾಗಿ ನಡೆದುಬಂದಿದೆ.
Team Udayavani, Dec 18, 2021, 6:08 PM IST
ಹಾವೇರಿ: ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಕಾಯ್ದೆ ತಿದ್ದುಪಡಿ ಯನ್ನು ಖಂಡಿಸಿ ಹಾಗೂ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾವೇರಿ ಶಾಖೆ ವತಿಯಿಂದ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ತಾಲೂಕು ಸಹ ಸಂಚಾಲಕ ಸುದೀಪ್ ಮಾತನಾಡಿ, ರಾಜ್ಯದ ಏಕೈಕ ಹಾಗೂ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾಲಯವಾದ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ದೇಶದ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರ ಸ್ಥಾನದಲ್ಲಿದೆ. ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಿಂದ ಬಂದು ವೈದ್ಯಕೀಯ ಶಿಕ್ಷಣ ಪಡೆಯಲು ವಿವಿಯ ಮೇಲೆ ಅವಲಂಬಿತರಾಗಿದ್ದಾರೆ.
ವಿವಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಹಣಕಾಸಿನ ವಿಷಯಗಳ ಬಗ್ಗೆ ಈಗಿರುವ ರಚನೆಯಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಅಗತ್ಯ ತೀರ್ಮಾನ ತೆಗೆದುಕೊಳ್ಳುವ ವಿಶ್ವವಿದ್ಯಾಲಯಕ್ಕೆ ಸ್ವಾಯತ್ತತೆ ರಚನೆ ಈ ವರೆಗೆ ಸರಿಯಾಗಿ ನಡೆದುಬಂದಿದೆ.
ಪ್ರಸ್ತುತ ರಾಜ್ಯ ಸರ್ಕಾರ ವಿಶ್ವವಿದ್ಯಾಲಯದ ಹಣಕಾಸಿನ ವಿಷಯಗಳನ್ನು ತಮ್ಮ ಹಿಡಿತದಲ್ಲಿರಿಸಿಕೊಳ್ಳುವ ನಿಟ್ಟಿನಲ್ಲಿ ಈಗಿರುವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿರುವುದನ್ನು ಖಂಡನೀಯ ಎಂದರು. ವಿಶ್ವವಿದ್ಯಾಲಯದ ನಿಧಿಯ ಉಪಯೋಗಕ್ಕೆ ವಿಶ್ವವಿದ್ಯಾಲಯದ ಒಪ್ಪಿಗೆ ಇಲ್ಲದೇ ಸರ್ಕಾರವೇ ಏಕಪಕ್ಷೀಯವಾಗಿ ನಿಧಿ ಖರ್ಚು ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲು ಹೊರಟಿರುವುದು ವಿಶ್ವವಿದ್ಯಾಲಯದ ಹಿತದೃಷ್ಟಿಯಿಂದ ಸಮಂಜಸವಲ್ಲ.
ಆದಷ್ಟು ಬೇಗ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಲಿಂಗರಾಜ್ ಬೀದಿಮನಿ, ನಗರ ಸಹಕಾರ್ಯದರ್ಶಿ ಸಿದ್ದರಾಮೇಶ, ಬಸವರಾಜ, ಅರುಣ, ಅಭಿಲಾಷ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು