ನಾಟಿ ರಾಗಿ ಕೃಷಿಕ ಮೂಕಪ್ಪಗೆ ರಾಜ್ಯೋತವ ಗರಿ


Team Udayavani, Nov 29, 2018, 4:08 PM IST

29-november-17.gif

ಹಾವೇರಿ: ರಾಜ್ಯ ಸರ್ಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ‘ನಾಟಿ ರಾಗಿ’ ಕೃಷಿ ಖ್ಯಾತಿಯ ಸಾವಯವ ಕೃಷಿಕ ಬ್ಯಾಡಗಿ ತಾಲೂಕು ಚಿನ್ನಿಕಟ್ಟಿ ಗ್ರಾಮದ ಮೂಕಪ್ಪ ಪೂಜಾರ ಅವರನ್ನು ಆಯ್ಕೆ ಮಾಡಿದೆ. ಮೂಕಪ್ಪ ಪೂಜಾರ ಅವರು ಪಾರಂಪರಿಕ ರಾಗಿ ತಳಿ ಸಂರಕ್ಷಣೆ ಹಾಗೂ ಗುಣಿ ಇಲ್ಲವೇ ನಾಟಿ ಪದ್ಧತಿಯಲ್ಲಿ ರಾಗಿ ಕೃಷಿ ಕುರಿತು ರಾಜ್ಯದಲ್ಲಷ್ಟೇ ಅಲ್ಲ ದೇಶದ ವಿವಿಧ ಭಾಗಗಳಲ್ಲಿ ಅರಿವು ಮೂಡಿಸುವ ವಿಶೇಷ ಕೆಲಸ ಮಾಡಿದ್ದು, ಈ ಸೇವೆ ಪರಿಗಣಿಸಿ ಸರ್ಕಾರ ಅವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮೂಕಪ್ಪ ಪೂಜಾರ ಅವರು ಕಳೆದ ಎರಡು ದಶಕಗಳಿಂದ ಅತೀ ಹಳೆಯ ರಾಗಿ ತಳಿ ಎನಿಸಿದ ‘ಉಂಡೆರಾಗಿ’ ತಳಿಯನ್ನು ಸಂರಕ್ಷಿಸಿ, ರೈತರಿಗೆ ಪರಿಚಯಿಸುವ ಮೂಲಕ ಅದನ್ನು ಉಳಿಸುವ ಪ್ರಯತ್ನ ಮಾಡಿದ್ದಾರೆ. ಇದರೊಂದಿಗೆ ನಾಟಿ ಪದ್ಧತಿಯ ರಾಗಿ ಕೃಷಿ ಬಗ್ಗೆ 8-10 ಸಾವಿರ ರೈತರಿಗೆ ತಿಳಿಸುವ ಮೂಲಕ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ಜ್ಞಾನ ನೀಡಿದ್ದಾರೆ.

ಸಾಮಾನ್ಯವಾಗಿ ರಾಗಿ ಕೃಷಿಯಲ್ಲಿ ಒಂದು ಎಕರೆಗೆ ಐದಾರು ಕೆಜಿ ರಾಗಿ ಬೀಜ ಬಿತ್ತಲಾಗುತ್ತದೆ. ಹೀಗೆ ಬಿತ್ತಿದ ಕೃಷಿಯಲ್ಲಿ ಒಂದು ಎಕರೆಗೆ ಆರರಿಂದ ಎಂಟು ಕ್ವಿಂಟಲ್‌ ಮಾತ್ರ ರಾಗಿ ಇಳುವರಿ ಬರುತ್ತದೆ. ಆದರೆ, ಮೂಕಪ್ಪ ಅವರ ‘ಉಂಡೆರಾಗಿ’ ತಳಿಯ ಬೀಜ ಬಳಸುವ ಮೂಲಕ ನಾಟಿ ಪದ್ಧತಿಯಲ್ಲಿ ಬೆಳೆದರೆ ಒಂದು ಎಕರೆಗೆ ಒಂದು ಕೆಜಿ ಮಾತ್ರ ಬಿತ್ತನೆಬೀಜ ಸಾಕು. ಇಳುವರಿಗೆ ಸರಾಸರಿ 18ರಿಂದ 20ಕೆಜಿ ಬರುತ್ತದೆ. ಮೂಕಪ್ಪ ಅವರು ಸ್ವತಃ ತಮ್ಮ ಜಮೀನಿನಲ್ಲಿ ಪ್ರಯೋಗ ಮಾಡಿ ಯಶಸ್ವಿಯಾಗುವ ಜತೆಗೆ ಸಾವಿರಾರು ರೈತರಿಗೆ ತರಬೇತಿ ನೀಡಿ ಅವರ ಜೀವನಕ್ಕೂ ಅನುಕೂಲ ಮಾಡಿಕೊಟ್ಟಿರುವುದು ವಿಶೇಷ.

ವಿವಿಧ ಕೃಷಿ ಸಂಸ್ಥೆಗಳ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತರಬೇತಿ ನೀಡುವ ಜತೆಗೆ ದೆಹಲಿ, ರಾಜಸ್ತಾನ, ಪಂಜಾಬ್‌, ಛತ್ತಿಸಗಡ್‌, ತಮಿಳುನಾಡಿನಲ್ಲೂ ತರಬೇತಿ ನೀಡಿ ಜನಪ್ರಿಯರಾಗಿದ್ದಾರೆ. ನಾಟಿ ರಾಗಿಯ ಬಗ್ಗೆ ಮೂರು ಪುಸ್ತಕ ಸಹ ಬರೆದಿದ್ದಾರೆ. ಸಾವಿರಾರು ರೈತರು ನಾಟಿ ಪದ್ಧತಿಯಲ್ಲಿ ರಾಗಿ ಬೆಳೆದು ಉತ್ತಮ ಇಳುವರಿ ಪಡೆದಿದ್ದಾರೆ. 71 ವರ್ಷದ ಮೂಕಪ್ಪ ಅವರು ಈಗಲೂ ದೇಶದ ತುಂಬೆಲ್ಲ ಓಡಾಡಿ ನಾಟಿ ರಾಗಿ ಬಗ್ಗೆ ರೈತರಿಗೆ ತರಬೇತಿ ನೀಡುವ ಕೆಲಸ ಮಾಡುತ್ತಲೇ ಇದ್ದಾರೆ. ಒಟ್ಟಾರೆ ಮೂಕಪ್ಪ ಪೂಜಾರ ಅವರ ಸಾವಯವ ರಾಗಿ ಕೃಷಿಜ್ಞಾನ ಪ್ರಸಾರವನ್ನು ಪರಿಗಣಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಹೆಮ್ಮೆ ಹೆಚ್ಚಿಸಿದೆ.

ಏನಿದು ನಾಟಿ ರಾಗಿ ಪದ್ಧತಿ?
ಇಲ್ಲಿ ರಾಗಿಯನ್ನು ನೇರವಾಗಿ ಬಿತ್ತದೇ ಮಡಿ ಮಾಡಿ 20ರಿಂದ25 ದಿನಗಳ ಸಸಿ ಇರುವಾಗ ಕಿತ್ತು ಒಂದೂವರೆ ಅಡಿಯಷ್ಟು ಚೌಕದ ಅಂತರದಲ್ಲಿ ಎರಡೆರಡು ಸಸಿ ನಾಟಿ ಮಾಡಲಾಗುತ್ತದೆ. ಬಳಿಕ ಪೈರುಗಳ ಸಾಲಿನ ಮಧ್ಯೆ ಕುಂಟೆ ಹಾಗೂ ಕೊರಡು ಹೊಡೆದು ಕಳೆ ನಿವಾರಣೆ ಮಾಡಲಾಗುತ್ತದೆ. ಕೊರಡು ಹೊಡೆಯುವುದರಿಂದ ಒಂದು ಸಸಿ ಹತ್ತಾರು ಟಿಸಿಲೊಡೆದು ಮೇಲಕ್ಕೇಳುತ್ತದೆ. ಇದಕ್ಕೆ ಸೆಗಣಿ ಗೊಬ್ಬರ ಬಳಸಲಾಗುತ್ತದೆ. ಈ ಮಾದರಿ ಕೃಷಿಗೆ ನೀರು ಸಹ ಕಡಿಮೆ ಸಾಕು. ಇದು ಭತ್ತದ ಶ್ರೀ ಪದ್ಧತಿಗೆ ಹೋಲುತ್ತದೆ.

ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ನೀಡುವ ರಾಗಿ ತಳಿ ಹಾಗೂ ರಾಗಿ ಕೃಷಿ ಪದ್ಧತಿ ಬಗ್ಗೆ ನಾನು ನೀಡುತ್ತಿರುವ ತರಬೇತಿ ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಾಟಿ ಪದ್ಧತಿಯಲ್ಲಿ ರಾಗಿ ಕೃಷಿ ಮಾಡುವುದರಿಂದ ನಾಟಿ ಮಾಡಿದ ಸಸಿಗೆ ನೀರು, ಪೋಷಕಾಂಶ ಯಥೇತ್ಛವಾಗಿ ಲಭಿಸಿ ಹೆಚ್ಚಿನ ತೆನೆಗಳು ಬರುತ್ತವೆ. ಸರ್ಕಾರ ನನ್ನಂಥ ಸಾಮಾನ್ಯ ಕೃಷಿಕನ ಸೇವೆ ಗುರುತಿಸಿರುವುದು ಖುಷಿಯಾಗಿದೆ.
 ಮೂಕಪ್ಪ ಪೂಜಾರ, ಕೃಷಿಕ

ಎಚ್‌.ಕೆ.ನಟರಾಜ

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.