ರಾಮಮಂದಿರ ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ
Team Udayavani, Feb 5, 2021, 8:26 PM IST
ಬ್ಯಾಡಗಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ಕೆ ಪಟ್ಟಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.
ಇಲ್ಲಿನ ಹಳೇ ಪುರಸಭೆ ಹತ್ತಿರ ಶ್ರೀರಾಮ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮಂದಿರದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಳಿಕ ಶ್ರೀರಾಮ ಭಾವಚಿತ್ರದ ಮೆರವಣಿಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗಿ ಸುಭಾಷ್ ಸರ್ಕಲ್ವರೆಗೂ ನಡೆಸಲಾಯಿತು.
ಇದನ್ನೂ ಓದಿ :ರೈತ-ಕಾರ್ಮಿಕ ವಿರೋಧಿ ನೀತಿ ವಿರುದ್ಧ ಜಾಥಾ
ಪುರಸಭೆ ಅಧ್ಯಕ್ಷೆ ಕವಿತಾ ಸೊಪ್ಪಿನಮಠ ಮಾತನಾಡಿದರು. ಉಪಾಧ್ಯಕ್ಷೆ ಕಲಾವತಿ ಬಡಿಗೇರ, ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ್, sಸದಸ್ಯರಾದ ಬಸವರಾಜ ಛತ್ರದ, ಚಂದ್ರಣ್ಣ ಶೆಟ್ಟರ, ಫಕ್ಕೀರಮ್ಮ ಚಲವಾದಿ, ಗಾಯತ್ರಿ ರಾಯ್ಕರ, ಸರೋಜ ಉಳ್ಳಾಗಡ್ಡಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೀರೇಂದ್ರ ಶೆಟ್ಟರ, ತಾಲೂಕಾಧ್ಯಕ್ಷ ಸುರೇಶ ಆಸಾದಿ, ಮಾಜಿ ಅಧ್ಯಕ್ಷ ರಾಮಣ್ಣ ಉಕ್ಕುಂದ, ತಾಲೂಕು ಘಟಕ ಕಾರ್ಯದರ್ಶಿ ಶಿವಯೋಗಿ ಶಿರೂರ, ವಿಷ್ಣುಕಾಂತ ಬೆನ್ನೂರ, ಶಿವಯೋಗಿ ಗಡಾದ, ಪರಶುರಾಮ ಉಜನಿಕೊಪ್ಪ, ಸಂಜೀವ ಮಡಿವಾಳರ, ಅರುಣ ಪಾಟೀಲ, ನಂದೀಶ ವೀರನಗೌಡ್ರ ಸೇರಿದಂತೆ ಇನ್ನಿತರರು ಇದ್ದರು.