ಬೊಮ್ಮಾಯಿ ಸರ್ಕಾರವು ಭ್ರಷ್ಟಾಸುರ ಸರ್ಕಾರ: ಸುರ್ಜೇವಾಲಾ ಟೀಕೆ
Team Udayavani, Mar 6, 2023, 11:51 AM IST
ಹಾವೇರಿ: ಬೊಮ್ಮಾಯಿ ಸರ್ಕಾರ ಭ್ರಷ್ಟಾಸುರ ಸರ್ಕಾರ. ಬಿಜೆಪಿ ಅಂದರೆ ಭಾರತೀಯ ಜನತಾ ಪಾರ್ಟಿ ಅಲ್ಪ, ಭ್ರಷ್ಟ ಜನತಾ ಪಾರ್ಟಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನು ಬೊಮ್ಮಾಯಿ ಸರ್ಕಾರ ಎನ್ನುವುದಕ್ಕಿಂತ ಭ್ರಷ್ಟಾಸುರ ಸರ್ಕಾರ ಎನ್ನಬೇಕು. ಬೊಮ್ಮಾಯಿ ಸರ್ಕಾರ ಅಪರಾಧಿಗಳ ಜೊತೆಗೆ ಶಾಮೀಲಾಗಿದೆ. ಬಿಜೆಪಿ ಶಾಸಕನ ಮನೆಯಲ್ಲಿ ಸಿಕ್ಕ 8 ಕೋಟಿ ಹಣ ಮೇಲೆ ಹೋಗುತ್ತಿತ್ತು. ಹೀಗಾಗಿ ಶಾಸಕರನ್ನು ಅರೆಸ್ಟ್ ಮಾಡಲಿಲ್ಲ ಎಂದು ದೂರಿದರು.
ಬಿಜೆಪಿಯವರು 40% ಸರ್ಕಾರ ಎಂಬ ಆರೋಪಕ್ಕೆ ಸಾಕ್ಷಿ ತಗೊಂಡು ಬನ್ನಿ ಅಂತ ಹೇಳುತ್ತಿದ್ದರು. ಈಗ 8 ಕೋಟಿ ಸಿಕ್ಕು ನಾಲ್ಕು ದಿನ ಕಳೆಸಿದೆ. ಆದರೂ ವಿರೂಪಾಕ್ಷಪ್ಪ ಅವರನ್ನು ಬಂಧಿಸಿಲ್ಲ. ವಿರೂಪಾಕ್ಷಪ್ಪ ಅವರನ್ನು ಯಾವಾಗ ಬಂಧಿಸುತ್ತಿರಿ ಎಂದು ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದರು.
ಇದನ್ನೂ ಓದಿ:ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ
ಜನರಿಗೆ ನಾವು ಹಲವು ಭರವಸೆಗಳನ್ನು ನೀಡಿದ್ದೇವೆ. ಇಂದು ಆ ಭರವಸೆಗಳಿಗೆ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದೇವೆ. ಜಾತಿ, ಧರ್ಮದ ಬಂಧನ, ಬೇಧ ಭಾವ ಇಲ್ಲದೇ ಮಹಿಳಾ ಯಜಮಾನಿಗೆ 2000 ರೂಪಾಯಿ ಸಹಾಯ ಧನ, 200 ಯುನಿಟ್ ವಿದ್ಯುತ್ ಫ್ರೀ, 10 ಕೆಜಿ ಅಕ್ಕಿ ಕೊಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ