Ranebennur: ದೇವಿ ಆರಾಧನೆಯಿಂದ ಸಾತ್ವಿಕ ಗುಣ ಪ್ರಾಪ್ತಿ

ನವಗ್ರಹ ಪೂಜಾ ವಿಧಿವಿಧಾನಗಳನ್ನು ಸತತ 3 ಗಂಟೆಗಳ ಕಾಲ ನಡೆಸಿಕೊಟ್ಟರು.

Team Udayavani, Oct 23, 2023, 12:39 PM IST

Ranebennur: ದೇವಿ ಆರಾಧನೆಯಿಂದ ಸಾತ್ವಿಕ ಗುಣ ಪ್ರಾಪ್ತಿ

ರಾಣಿಬೆನ್ನೂರ: ಹುಬ್ಬಳ್ಳಿ ಸಿದ್ಧಾರೂಢರು ಸ್ವಯಂ ದೇವಿ ಸ್ವರೂಪವೇ ಆಗಿದ್ದು, ಮನುಷ್ಯರಲ್ಲಿರುವ ದುರ್ಗುಣಗಳನ್ನು ದೂರ ಮಾಡಿ, ಸಾತ್ವಿಕ ಗುಣಗಳನ್ನು ಮೈಗೂಡಿಸಿಕೊಳ್ಳುವ ಶಕ್ತಿ ತುಂಬಿದವರು. ದೇವಿ ಆರಾಧನೆಯಿಂದ ದುಷ್ಟ ಗುಣಗಳು ನಾಶವಾಗಿ
ಸುಗುಣವಂತರಾಗಲು ಸಾಧ್ಯ ಎಂದು ಪೂಜ್ಯ ಶ್ರೀ ಗುರು ನಾಗರಾಜಾನಂದ ಮಹಾಸ್ವಾಮೀಜಿ ಹೇಳಿದರು.

ರವಿವಾರ ತಾಲೂಕಿನ ಸುಕ್ಷೇತ್ರ ಖಂಡೇರಾಯನಹಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಲೋಕಕಲ್ಯಾಣಾರ್ಥ ಏರ್ಪಡಿಸಲಾಗಿದ್ದ 28ನೇ ವರ್ಷದ ದೇವಿ ಪುರಾಣ ಪ್ರವಚನದ ಮಂಗಲೋತ್ಸವ ಮತ್ತು ಗಾಯತ್ರಿ ಹೋಮ, ಹವನ ಹಾಗೂ ಪೂಜಾ ವಿಧಿ ವಿಧಾನಗಳ ನಂತರ ಹೋಮಕ್ಕೆ ಪೂರ್ಣಾಹುತಿ ಸಲ್ಲಿಸಿ ಆಶೀರ್ವಚನ ನೀಡಿದರು.

ಆರೂಢ ಪರಂಪರೆಯ ಮಠಗಳು ತನ್ನನ್ನು ತಾನು ಮೊದಲು ತಿಳಿಯಲು ಜ್ಞಾನದ ಅಮೃತಧಾರೆ ಉಣಿಸುತ್ತಾ ಬಂದಿವೆ. ಅದ್ವೈತ ಜ್ಞಾನದಿಂದ ಜನಸಾಮಾನ್ಯರು ಮುಕ್ತಿಯ ಮಾರ್ಗ ಪಡೆಯಲು ಸದಾ ಗುರು ಚಿಂತನೆ ಹಾಗೂ ಗುರು ಮಾರ್ಗದಲ್ಲಿ ನಡೆದರೆ ಮಾತ್ರ ಸಾಧ್ಯ. ಎಲ್ಲ ನದಿಗಳು ಸಮುದ್ರ ಸೇರುವಂತೆ ಎಲ್ಲಾ ಮಠಗಳ ಉದ್ದೇಶ ಜನರನ್ನು ಮುಕ್ತಿ ಮಾರ್ಗದೆಡೆಗೆ ಕೊಂಡೊಯ್ಯುವುದೇ ಆಗಿದೆ ಎಂದರು.

ತೇತ್ರಾಯುಗದಲ್ಲಿ ಶ್ರೀರಾಮಚಂದ್ರನು ನಾರದ ಮುನಿಗಳ ಮಾರ್ಗ ದರ್ಶನದಂತೆ ನವರಾತ್ರಿ ವ್ರತ ಆಚರಿಸಿ ರಾವಣನನ್ನು ಸಂಹರಿಸಲು ಹಾಗೂ ದ್ವಾಪರ ಯುಗದಲ್ಲಿ ದೇವತೆಯನ್ನು ಪೂಜಿಸಿ ಆಶೀರ್ವಾದ ಪಡೆದಿದ್ದರಿಂದ ಪಾಂಡವರು ದುಷ್ಟರಿಂದ ಬಿಡುಗಡೆ ಹೊಂದಿದರು ಎಂಬುದನ್ನು ಮಹಾಭಾರತದಲ್ಲಿ ನಾವು ನೋಡುತ್ತೇವೆ. ಅದರ ಸಂಕೇತವಾಗಿ ಇಂದು ನಾವು ದಸರಾ ಉತ್ಸವ ಆಚರಿಸುತ್ತಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಚಳಗೇರಿಯ ವೇ. ಚನ್ನಯ್ಯ ಶಾಸ್ತ್ರಿಗಳು ಹಾಗೂ ಸಂಗಡಿಗರು ಸಿದ್ಧಾರೂಢರ ಮೂರ್ತಿ ಹಾಗೂ ಗಾಯತ್ರಿ ದೇವಿ ಮೂರ್ತಿಗೆ ಬ್ರಾಹ್ಮಿ ಮೂರ್ತದಲ್ಲಿ ಅಭಿಷೇಕ, ಬಿಲ್ವಾರ್ಚನೆ, ವಿವಿಧ ಹೂವುಗಳ ಅಲಂಕಾರ ಮಾಡಿ, ಗಾಯತ್ರಿ ಹೋಮ, ಹವನ ಹಾಗೂ ನವಗ್ರಹ ಪೂಜಾ ವಿಧಿವಿಧಾನಗಳನ್ನು ಸತತ 3 ಗಂಟೆಗಳ ಕಾಲ ನಡೆಸಿಕೊಟ್ಟರು.

ವಿಧಾಸಭೆ ಉಪಸಭಾಧ್ಯಕ್ಷ ಹಾಗೂ ಶ್ರೀಮಠದ ಕಾರ್ಯದರ್ಶಿ ರುದ್ರಪ್ಪ ಮಾನಪ್ಪ ಲಮಾಣಿ, ಶ್ರೀಮಠದ ಅಧ್ಯಕ್ಷ ಫಕ್ಕೀರಪ್ಪ ಗೌಡ್ರ, ಡಾ| ಮೋಹನ ಹಂಡೆ, ನ್ಯಾಯವಾದಿ ಎಂ.ಬಿ. ಚಿನ್ನಪ್ಪನವರ, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನ ಕಡೂರು, ಅರುಣಸ್ವಾಮಿ ಹಿರೇಮಠ, ಗೋಪಾಲ ಕೊಡ್ಲೆರ, ಮಹೇಶ ಹನಗೋಡಿ, ಕರಬಸಪ್ಪ ಮಾಕನೂರ, ಡಾಕೇಶ ಲಮಾಣಿ, ಶಿವಪ್ಪ ಬಣಕಾರ, ಗುಡ್ಡಪ್ಪ ಹೆಡಿಯಾಲ, ಮಹಾದೇವಪ್ಪ ಬಣಕಾರ, ಗಂಗಾಧರ ಬಣಕಾರ, ಬಸನಗೌಡ ಮುದಿಗೌಡ್ರ, ಶಿವು
ಗುತ್ತೂರ, ವಿಶ್ವನಾಥ ಕುಂಬಳೂರ, ಮೈಲಾರಪ್ಪ ಸೋಮಲಾಪುರ, ಮಲ್ಲಿಕಾಜುನ ಹಲಗೇರಿ ಸೇರಿದಂತೆ ಸಾವಿರಕ್ಕೂ ಅಧಿಕ ಭಕ್ತರು ಮತ್ತು ಮಹಿಳೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.