ರಾಣೆಬೆನ್ನೂರ:ವಿಷಪೂರಿತ ಆಹಾರ ಸೇವನೆ: 40 ಕುರಿಗಳ ಸಾವು


Team Udayavani, Jun 12, 2023, 4:07 PM IST

ರಾಣೆಬೆನ್ನೂರ:ವಿಷಪೂರಿತ ಆಹಾರ ಸೇವನೆ: 40 ಕುರಿಗಳ ಸಾವು

ರಾಣೆಬೆನ್ನೂರ: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಅಧಿಕ ಕುರಿಗಳು ಮೃತಪಟ್ಟಿರುವ ಘಟನೆ ಹಿನ್ನೆಲೆಯಲ್ಲಿ ರವಿವಾರ ಮೃತಪಟ್ಟ ಕುರಿಗಳ ಮಾಲೀಕ ಸೋಮಪ್ಪ ಕುರವತ್ತಿ ಹಾಗೂ ಕುರಿಗಾಹಿಗಳು ಮತ್ತು ರೈತರು ಕುರಿಗಳು ಸಾವಿಗೆ ಕಾರಣವಾಗಿರುವ ಖಾಸಗಿ ಕಂಪನಿಯನ್ನು ಸ್ಥಗಿತಗೊಳಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ಮಾಗೋಡ ಗ್ರಾಮದ ಅಂಡರ್‌ಬ್ರಿಡ್ಜ್ ಬಳಿ ಶನಿವಾರ ಖಾಸಗಿ ಕಂಪನಿ ಅವಧಿ ಮುಗಿದಿರುವ ಕುರ್‌ಕುರೆ ಪ್ಯಾಕೆಟ್‌ಗಳನ್ನು ರಸ್ತೆ
ಮೇಲೆ ಚೆಲ್ಲಲಾಗಿತ್ತು. ರಸ್ತೆ ಮೇಲಿದ್ದ ಪದಾರ್ಥಗಳನ್ನು ಸುಮಾರು 60ಕ್ಕೂ ಅಧಿಕ ಕುರಿಗಳು ಸೇವಿಸಿದ್ದವು. ಅವುಗಳಲ್ಲಿ 40ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿದ್ದು, ಇನ್ನೂ ಕೆಲ ಕುರಿಗಳು ಸಾವು ಬದುಕಿನ ಮಧ್ಯ ಹೋರಾಟ ಮಾಡುತ್ತಿವೆ. ಹೀಗಾಗಿ ಸಂಬಂಧಪಟ್ಟ ಕುರ್‌ಕುರೆ ಖಾಸಗಿ ಕಂಪನಿಯನ್ನು ಸ್ಥಗಿತಗೊಳಿಸಿ ಸಾವನ್ನಪ್ಪಿದ ಕುರಿಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯ ಕುರಿ ಸಾಕಾಣಿಕೆದಾರ ಸಂಘಗಳ ಮಹಾಮಂಡಳಿ ನಿರ್ದೇಶಕ ಜೆ. ಜಯಪ್ಪ ಮಾತನಾಡಿ, ಕುರ್‌ಕುರೆ ವಿಷಪೂರಿತ ಆಹಾರ
ಪದಾರ್ಥವನ್ನು ರಸ್ತೆ ಮೇಲೆ ಬೇಕಾಬಿಟ್ಟಿಯಾಗಿ ಎಸೆದು 40ಕ್ಕೂ ಅಧಿಕ ಕುರಿಗಳ ಸಾವಿಗೆ ಕಾರಣವಾಗಿರುವ ಕಂಪನಿಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಬೇಕು. ಕುರಿಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಇಲ್ಲವಾದಲ್ಲಿ ಶೀಘ್ರದಲ್ಲಿಯೇ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹಲಗೇರಿ ಗ್ರಾಮೀಣ ಪೊಲೀಸ್‌ ಠಾಣೆ  ಪಿಎಸ್‌ಐ ಬಸನಗೌಡ ಬಿರಾದಾರ, ತಾಲೂಕು ಕುರುಬ ಸಂಘದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ಕಾರ್ಯದರ್ಶಿ ಮೃತ್ಯುಂಜಯ ಗುದಿಗೇರ, ಗ್ರಾಮಲೆಕ್ಕಾಧಿ ಕಾರಿ ಸಿ.ಎನ್‌. ಪೂಜಾರ, ಅಶೋಕ ಢವಳೇಶ್ವರ, ಆನಂದ್‌ ಹುಲ್ಬನ್ನಿ, ಬರಮಪ್ಪ ಕಂಬಳಿ, ರಾಮಪ್ಪ, ಸಿದ್ದಪ್ಪ, ಹನುಮಂತಪ್ಪ ಕುರವತ್ತಿ, ಸುರೇಶ ಮಡಿವಾಳರ, ನೀಲಪ್ಪ ದೇವರಗುಡ್ಡ, ಲೋಕಪ್ಪ ಇದ್ದರು.

ಮಾಗೋಡ ಗ್ರಾಮದ ರೈತ ಸೋಮಪ್ಪ ಬಸಪ್ಪ ಕುರುವತ್ತಿಯ ಕುರಿಗಳು ಸಾವನ್ನಪ್ಪಿರುವ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಸಾವನ್ನಪ್ಪಿರುವ ಕುರಿಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ಕೊಡಲು ನಮಗೆ ಬರುವುದಿಲ್ಲ. ಸ್ಥಳೀಯ ಶಾಸಕರ ಸಲಹೆ
ಪಡೆದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ಸೂಕ್ತ ಪರಿಹಾರ ನೀಡುವಂತೆ ಪ್ರಾಮಾಣಿಕ
ಪ್ರಯತ್ನ ಮಾಡುತ್ತೇವೆ.
ಎ. ಗುರುಬಸವರಾಜ,
ತಹಶೀಲ್ದಾರ್‌ ರಾಣೆಬೆನ್ನೂರ

ಕುರಿಗಳು ವಿಷಪೂರಿತ ಆಹಾರವನ್ನು ಸೇವಿಸಿ ಮೃತಪಟ್ಟಿವೆ. ಇನ್ನೂ ಕೆಲ ಕುರಿಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಿದ್ದೇವೆ.
ಮೃತಪಟ್ಟ ಕುರಿಗಳನ್ನು ಪೋಸ್ಟ್‌ ಮಾರ್ಟಂ ಮಾಡಿಸಿ ವರದಿ ಸಲ್ಲಿಸುತ್ತೇವೆ.
ಡಾ| ರಾಘವೇಂದ್ರ, ಪಶುವೈದ್ಯ

 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.