Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ


Team Udayavani, Sep 16, 2023, 6:00 PM IST

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

ರಾಣಿಬೆನ್ನೂರ: 84 ಲಕ್ಷ ಜೀವರಾಶಿಗಳಲ್ಲಿ ಅಂಡಜ, ಪಿಂಡಜ, ಜಲಜ ಜೀವರಾಶಿಗಳಾಗಿ ಜನ್ಮ ತಾಳಿ ಆ ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯ ಜನ್ಮ ಪ್ರಾಪ್ತಿಯಾಗಿದೆ. ಮನುಷ್ಯನಿಗೆ ಮಾತ್ರ ಅರಿವಿದ್ದು, ತನ್ನ ಜೀವಿತಾವಧಿಯಲ್ಲಿ ಪುಣ್ಯ ಕಾರ್ಯಗಳನ್ನು
ಮಾಡುವುದರೊಂದಿಗೆ ಭಗವಂತನ ಕೃಪೆಗೆ ಪಾತ್ರರಾಗಿ ಮೋಕ್ಷಕ್ಕೆ ಅರ್ಹರಾಗಬೇಕೆಂದು ಗುರು ನಾಗರಾಜಾನಂದ ಸ್ವಾಮೀಜಿ ಹೇಳಿದರು.

ಸುಕ್ಷೇತ್ರ ತಾಲೂಕಿನ ಖಂಡೇರಾಯನಹಳ್ಳಿಯ ಸಿದ್ಧಾರೂಢ ಮಠದಲ್ಲಿ ಶುಕ್ರವಾರ ನಡೆದ ಶ್ರೀ ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವದ ಅಂಗವಾಗಿ ಕಥಾಮೃತ ಪಾಲಕಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಿವಿನ ಜನ್ಮ ಪಡೆದಿರುವ ಸಕಲ ಮಾನವರು ಜೀವನದ ಮುಕ್ತಿಗಾಗಿ ಓಂ ನಮಃ ಶಿವಾಯ ಮಂತ್ರ ಪಠಣೆ ಸುಲಭ ಉಪಾಯವಾಗಿದೆ ಎಂದು ನುಡಿದರು.

ಈ ಮಂತ್ರವನ್ನು ಅಂತಪ್ಪ ಸದ್ಗುರುವಿನ ಮುಖಾಂತರ ಪಡೆದುಕೊಂಡು ಉತ್ಛರಿಸಿದರೆ ಮಾತ್ರ ಪಾಪ ಕರ್ಮಗಳು ನಾಶವಾಗಿ ಮುಕ್ತಿ ಪಡೆಯಲು ಸಾಧ್ಯ. ಜೀವನದಲ್ಲಿ ಅರಿತೋ ಮರೆತೋ ಒಂದು ಬಾರಿ ಶಿವನಾಮ ಅಥವಾ ರಾಮನಾಮ ಉಚ್ಛರಿಸಿದರೆ
ಕಾಮಧೇನುವಿನಂತೆ ಸಕಲ ಭೋಗ, ಭಾಗ್ಯಗಳು ಲಭಿಸುತ್ತವೆ ಎಂದರು. ನಾಲ್ಕು ವೇದಗಳ ಸಾರವೇ ಪಂಚಾಕ್ಷರಿ ಮಂತ್ರ. 7
ಕೋಟಿ ಮಂತ್ರಗಳಲ್ಲಿ ಬೀಜ ಮಂತ್ರವಾಗಿದೆ. ಇದನ್ನು ಜಪಿಸಲು ಸರ್ವರೂ ಅರ್ಹರಿದ್ದು, ಗೌಪ್ಯವಾಗಿದ್ದ ಈ ಉಪಾಯವನ್ನು ಶ್ರೀ ಸಿದ್ಧಾರೂಢರು ಕರುಣಿಸಿದ್ದಾರೆ. ಸುಖ ಪುಣ್ಯದ ಫಲವಾದರೆ, ದುಃಖ ಪಾಪದ ಫಲ. ದುಃಖವೆಂಬ ಸಂಸಾರ ಸಾಗರ ದಾಟಲು ಅಂಬಿಗನಂತೆ ಓಂ ನಮಃ ಶಿವಾಯ ಮಂತ್ರ ಸಹಾಯ ಮಾಡುತ್ತದೆ ಎಂದು ಶ್ರೀಗಳು ನುಡಿದರು.

ಶ್ರೀ ಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಓದುವುದರಿಂದ ಮತ್ತು ಕೇಳುವುದರಿಂದ ಧರ್ಮ, ಅರ್ಥ, ಕಾಮ, ಮೋಕ್ಷಗಳು ಸಿದ್ಧಿಸುವವು. ಈ ಪುರಾಣ ನಾಲ್ಕು ವೇದಗಳ, 6 ಶಾಸ್ತ್ರ, 18 ಪುರಾಣ, 25 ಆಗಮಗಳನ್ನು ಒಳಗೊಂಡಿರುವ ಪವಿತ್ರ ಚರಿತ್ರೆಯಾಗಿದೆ. ಪ್ರತಿಯೊಬ್ಬ ಮನುಷ್ಯನಲ್ಲಿ ಮನೆ ಮಾಡಿಕೊಂಡಿರುವ ದುಷ್ಟ ಗುಣಗಳನ್ನು ಸಂಹರಿಸಿ ಸುಗುಣವಂತರನ್ನಾಗಿಸುವ ಮಾರ್ಗವೇ ಸತ್ಸಂಗ. ಇಂತಹ ಸುಲಭ ಉಪಾಯವನ್ನು ಸಿದ್ಧಾರೂಢರು ಕರುಣಿಸಿದ್ದಾರೆ. ಅವರ ಕಥಾಮೃತವನ್ನು ತಿಂಗಳ ಪರ್ಯಂತ ಶ್ರವಣ ಮಾಡಿದ ನೀವೇ ಪುಣ್ಯವಂತರು ಎಂದು ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನ ಕಡೂರು, ಶ್ರೀಮಠದ ಅಧ್ಯಕ್ಷ ಫಕ್ಕೀರಪ್ಪ ಗೌಡ್ರ, ಎಂ.ಬಿ. ಚಿನ್ನಪ್ಪನವರ, ಗೋಪಾಲ ಕೊಡ್ಲೆàರ, ಬಸನಗೌಡ ಗಂಗನಗೌಡ್ರ, ಅರುಣಸ್ವಾಮಿ ಹಿರೇಮಠದ, ಶಿವಪ್ಪ ಬಣಕಾರ, ಗುಡ್ಡೇಶ ಹೆಡಿಯಾಲ, ಚಂದ್ರು ಕನ್ನಾಳ,
ಜಯಪ್ಪ ಚಳಗೇರಿ, ವಿದ್ಯಾಧರ ಹೆಡಿಯಾಲ, ಮಹಿಳೆಯರು ಮತ್ತು ಮಕ್ಕಳು ಮತ್ತಿತರರು ಇದ್ದರು.

ಶ್ರೀ ಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವ ಬ್ರಾಹ್ಮಿ ಮಹೂರ್ತದಲ್ಲಿ ಸಿದ್ಧಾರೂಢರ ಮೂರ್ತಿಗೆ ಅಭಿಷೇಕ, ಶಿವಲಿಂಗುವಿಗೆ ರುದಾಭಿಷೇಕ, ಬಿಲ್ವಾರ್ಚನೆ, ವಿವಿಧ ಹೂವುಗಳಿಂದ ಅಲಂಕಾರ, ವಿಶೇಷ ಪೂಜೆಗಳು ನಡೆದವು. ನಂತರ ಸಿದ್ಧಾರೂಢರ ಮೂರ್ತಿ ಹಾಗೂ ಕಥಾಮೃತದ ಪಾಲಕಿ ಉತ್ಸವ ಬಾಜಾ ಭಜಂತ್ರಿ, ಸಮಾಳ, ಮಂಗಲ ವಾದ್ಯಗಳೊಂದಿಗೆ ಮಠದ ಪ್ರಮುಖ ಅಂಗಳದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು. ತದನಂತರ ಮಹಾಪ್ರಸಾದ ಜರುಗಿತು.

 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.