ಕೇತ್ರಗಳ ಪುನರ್ವಿಂಗಡಣೆಗೆ ಡಿಸಿಗಳಿಗೆ ನಿರ್ದೇಶನ  

20ರಂದು ಸಭೆಗೆ ಹಾಜರಾಗಲು ಜಿಲ್ಲೆಯ ತಹಶೀಲ್ದಾರ್‌-ಸಿಬ್ಬಂದಿಗೆ ರಾಜ್ಯ ಚುನಾವಣಾ ಆಯೋಗ ಸೂಚನೆ

Team Udayavani, Feb 12, 2021, 2:54 PM IST

reallocation of Ketra

ಹಾವೇರಿ: ರಾಜ್ಯ ಚುನಾವಣಾ ಆಯೋಗ ಜಿಪಂ,ತಾಪಂ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಫೆ.20ರಂದು ನಡೆಯುವ ಸಭೆಗೆ ಜಿಲ್ಲೆಯ ಚುನಾವಣಾ ತಹಶೀಲ್ದಾರ್‌ ಹಾಗೂ ಸಿಬ್ಬಂದಿ ಹಾಜರಾಗುವಂತೆ ಸೂಚನೆ ನೀಡಿದೆ.

ರಾಜ್ಯ ಚುನಾವಣೆ ಆಯೋಗಕ್ಕೆ ಈಗಾಗಲೇ ಜಿಲ್ಲಾ ಚುನಾವಣಾ ವಿಭಾಗದಿಂದ ಗ್ರಾಮೀಣ ವಿಭಾಗದ ಜನಸಂಖ್ಯೆ ವಿವರಗಳು ಸಲ್ಲಿಕೆಯಾಗಿದ್ದು, ತಾಲೂಕುವಾರು ಜಿಪಂ ಹಾಗೂ ತಾಪಂ ಸದಸ್ಯ ಸ್ಥಾನಗಳನ್ನು ಆಯೋಗವೇ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ. ಈ ಸ್ಥಾನಗಳ ಆಧಾರದಲ್ಲಿ ತಾಪಂ, ಜಿಪಂ ಕ್ಷೇತ್ರಗಳನ್ನು ಪುನರ್‌ ರಚಿಸುವ ಕೆಲಸ ಜಿಲ್ಲಾಡಳಿತದ ಮುಂದಿದೆ.

ಹಾವೇರಿ, ಬ್ಯಾಡಗಿ, ರಾಣೆಬೆನ್ನೂರ, ಹಾನಗಲ್ಲತಾಲೂಕುಗಳಲ್ಲಿ ತಲಾ ಒಂದು ಜಿಪಂ ಕ್ಷೇತ್ರಗಳನ್ನು ಹೆಚ್ಚಿಸಲು ಆಯೋಗ ಸೂಚಿಸಿದೆ. ಇದರಿಂದ ಈ ಬಾರಿ ನಾಲ್ಕು ತಾಲೂಕುಗಳಲ್ಲಿ ಜಿಪಂ ಕ್ಷೇತ್ರಗಳ ವ್ಯಾಪ್ತಿ ಬದಲಾಗಲಿದೆ. ಇನ್ನು ಹಿರೇಕೆರೂರು ತಾಲೂಕಿನಲ್ಲಿದ್ದ 6 ಕ್ಷೇತ್ರಗಳನ್ನು ಆ ತಾಲೂಕಿನಿಂದ  ಬೇರ್ಪಟ್ಟಿರುವ ರಟ್ಟಿಹಳ್ಳಿಗೆ 3, ಹಿರೇಕೆರೂರಿಗೆ 3 ಹಂಚಿಕೆ ಮಾಡಲಾಗಿದೆ. ಅಲ್ಲದೇ ರಟ್ಟಿಹಳ್ಳಿ ಗ್ರಾಪಂನಿಂದ ಪಪಂಗೆ ಮೇಲ್ದರ್ಜೆಗೇರಿದೆ. ಹೀಗಾಗಿ ರಟ್ಟಿಹಳ್ಳಿ ಜಿಪಂ ಕ್ಷೇತ್ರ ವಿಂಗಡಣೆ ಮಾಡುವ ಅಗತ್ಯವಿದೆ. ರಟ್ಟಿಹಳ್ಳಿ ಬದಲಾಗಿ ಹೊಸ ಕ್ಷೇತ್ರ ಅಲ್ಲಿ ಸೃಷ್ಟಿಯಾಗಲಿದೆ. 24 ತಾಪಂ ಕ್ಷೇತ್ರ ಕಡಿತ: ಇತ್ತೀಚೆಗೆ ತಾಪಂ ರದ್ದುಗೊಳಿಸಿ ಜಿಪಂ ಹಾಗೂ ಗ್ರಾಪಂಗಳಷ್ಟೇ ಇರಬೇಕೆಂಬ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಏಕಾಏಕಿ ಜಿಲ್ಲೆಯ 24 ತಾಪಂ ಕ್ಷೇತ್ರಗಳು ಕಡಿತವಾಗಿರುವುದು ಸ್ಪರ್ಧಾಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ.

ಈ ಬಾರಿ ರಟ್ಟಿಹಳ್ಳಿ ಹೊಸದಾಗಿ ತಾಪಂ ಆಗಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಕ್ಷೇತ್ರಗಳು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿತ್ತು. 2016ರಲ್ಲೇ 128 ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಈಗ ಆಯೋಗದ ನಿರ್ದೇಶನದಂತೆ 24 ಕ್ಷೇತ್ರಗಳನ್ನು ಕಡಿತಗೊಳಿಸಬೇಕಿದೆ. ಸದ್ಯ ಯಾವ ಕ್ಷೇತ್ರಗಳನ್ನು ಕಡಿತಗೊಳಿಸಬೇಕೆಂಬುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ :“ಮುಖ್ಯ ವೇದಿಕೆ ಅಂತಿಮಗೊಳಿಸಿ”

ಫೆ.20ರಂದು ಸಭೆ ನಿಗದಿ: ತಾಪಂ, ಜಿಪಂ ಕ್ಷೇತ್ರಗಳನ್ನು ಪುನರ್‌ ರಚಿಸಲು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿನ ಗ್ರಾಪಂಗಳು, ಗ್ರಾಮಗಳು, ಪುರುಷ ಹಾಗೂ ಮಹಿಳಾ ಮತದಾರರೆಷ್ಟು, ಎಸ್‌ಸಿ, ಎಸ್‌ಟಿ ಮತದಾರರೆಷ್ಟು ಒಟ್ಟು ಮತದಾರರೆಷ್ಟು ಎಂಬ ವಿವರಗಳೊಂದಿಗೆ ಫೆ. 20ರಂದು ಜಿಲ್ಲೆಯ ಚುನಾವಣಾ ತಹಶೀಲ್ದಾರ್‌ ಹಾಗೂ ಸಿಬ್ಬಂದಿ ಆಯೋಗಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಇದರ ಜತೆಗೆ ತಾಲೂಕುವಾರು ಹಾಗೂ ಪ್ರತಿ ಜಿಪಂ, ತಾಪಂ ಕ್ಷೇತ್ರದ ನಕ್ಷೆ ಸಿದ್ಧಪಡಿಸಿಕೊಂಡು ಬರಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.