ತರಕಾರಿ-ಹಣ್ಣು ಬೆಳೆಗಾರರಿಗೆ ಪರಿಹಾರ ಧನ ಬಿಡುಗಡೆ
Team Udayavani, Jun 14, 2020, 4:05 PM IST
ಹಾನಗಲ್ಲ: ಕೋವಿಡ್ ಲಾಕ್ ಡೌನ್, ಸಾರಿಗೆ ವ್ಯವಸ್ಥೆ ಇಲ್ಲದೆ, ಸಂಸ್ಕರಣ ಮಾಡಲು ಸಾಧ್ಯವಾಗದೆ ನಷ್ಟ ಅನುಭವಿಸುತ್ತಿರುವ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸರಕಾರ ತೋಟಗಾರಿಕಾ ಅಭಿವೃದ್ಧಿ ಯೋಜನೆಯಡಿ ಪರಿಹಾರಧನ ನೀಡುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದೆ ಎಂದು ಶಾಸಕ ಸಿ.ಎಂ. ಉದಾಸಿ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಅವರು, ಕೋವಿಡ್-19 ಕಾರಣದಿಂದ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ, ಹಣ್ಣು ಮತ್ತು ತರಕಾರಿ ಬೆಳೆದ ರೈತರು ಹೊರ ರಾಜ್ಯಗಳಿಗೆ ಮಾರಾಟ ಮಾಡಲು ಸಾಧ್ಯವಾಗದೆ ಹಾಗೂ ಬೆಲೆ ಕುಸಿತದಿಂದ ನಷ್ಟಕ್ಕೊಳಗಾಗಿದ್ದಾರೆ. ಪ್ರಸಕ್ತ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪರಿಹಾರಧನ ವಿತರಿಸಲು ಸರಕಾರ ಮುಂದಾಗಿದ್ದು, ಪ್ರತಿ ಫಲಾನುಭವಿಗಳಿಗೆ 1 ಹೆಕ್ಟೇರ್ ಪ್ರದೇಶಕ್ಕೆ ಕನಿಷ್ಠ 2 ಸಾವಿರದಿಂದ ಗರಿಷ್ಠ 15 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದರು.
ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಆಧಾರದ ಮೇಲೆ 1719 ತರಕಾರಿ ಬೆಳೆಗಾರರು, 1281 ಹಣ್ಣು ಬೆಳೆಗಾರರು ಈ ಯೋಜನೆ ಲಾಭ ಪಡೆಯಲಿದ್ದು, ಪರಿಹಾರಧನ ನೇರವಾಗಿ ರೈತರ ಖಾತೆಗಳಿಗೆ ಸಂದಾಯವಾಗಲಿದೆ ಎಂದು ಶಾಸಕ ಸಿ.ಎಂ.ಉದಾಸಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ