ಗಾಂಜಾ ತಡೆಗೆ ಆಗ್ರಹಿಸಿ ಮನವಿ
Team Udayavani, Dec 16, 2019, 3:24 PM IST
ಹಿರೇಕೆರೂರ: ತಾಲೂಕಿನಲ್ಲಿ ಯುವಕರು ಗಾಂಜಾ ಸೇವನೆಗೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಸಬ್ ಇನ್ಸ್ಪೆಕ್ಟರ್ಗೆ ಮನವಿ ಸಲ್ಲಿಸಿದರು.
ಬಜರಂಗದಳ ಮುಖಂಡ ಅನಿಲ ಹಲವಾಗಿಲ ಮಾತನಾಡಿ, ತಾಲೂಕಿನಲ್ಲಿ ಯುವಕರು ಗಾಂಜಾ ಸೇವನೆಯಿಂದ ಹಾಳಾಗುತ್ತಿದ್ದಾರೆ. ಕೆಲವು ದುಷ್ಟ ಶಕ್ತಿಗಳು ಈ ವ್ಯವಹಾರ ಮಾಡಿಕೊಂಡು ಕಾಲೇಜು ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿವೆ. ಇದರಿಂದ ಸಾಮಾಜಿಕ ಸ್ವಾಸ್ಥ ಹಾಳಾಗುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಗಾಂಜಾ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿದರು. ರಮೇಶ ಬಂಡಿವಡ್ಡರ, ವಿನಯ ಕರ್ನೂಲ್, ಅಭಿಷೇಕ, ಗಣೇಶ, ರಾಕೇಶ ಇತರರಿದ್ದರು.