ನಿವೇಶನ-ಮನೆ ಮಂಜೂರಿಗೆ ಮನವಿ
Team Udayavani, Jun 8, 2019, 1:49 PM IST
ರಾಣಿಬೆನ್ನೂರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರಣವಾನಂದರಾಮ ಶ್ರೀಗಳ ನೇತೃತ್ವದಲ್ಲಿ ನಿವೇಶನರಹಿತರು ಗ್ರಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಣಿಬೆನ್ನೂರ: ನಿವೇಶನ ಹಾಗೂ ಮನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ನಿವೇಶನರಹಿತರ ವೇದಿಕೆಯ ಅಧ್ಯಕ್ಷ ಪ್ರಣವಾನಂದರಾಮ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರ ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ನಿವೇಶನ ರಹಿತರು ಪಾದಯಾತ್ರೆ ಮೂಲಕ ತೆರಳಿ ಸ್ಥಳೀಯ ಗ್ರಾಪಂ ಪಿಡಿಒ ಡಿ.ಬಿ. ಹರಿಜನ ಮತ್ತು ಅಧ್ಯಕ್ಷೆ ಹೊನ್ನವ್ವ ಓಲೇಕಾರ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಪ್ರಣವಾನಂದರಾಮ ಸ್ವಾಮೀಜಿ ಮಾತನಾಡಿ, ಮನೆ ಮತ್ತು ನಿವೇಶನ ಇಲ್ಲದವರಿಗೆ 15 ದಿನಗಳೊಳಗಾಗಿ ಮನೆ ಮಂಜೂರಿಗೊಳಿಸಬೇಕು. ಇಲ್ಲವಾದರೆ ತಾಪಂ ಇಒ, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಶ್ರೀಮಠದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಶ್ರೀಗಳು ಎಚ್ಚರಿಸಿದರು.
ಗ್ರಾಮದಲ್ಲಿರುವ 154ನೇ ಸರ್ವೇ ನಂಬರ್ನಲ್ಲಿ ಈಗಾಗಲೇ 17 ಎಕರೆ ನಿವೇಶನ ನಿರ್ಮಾಣ ಮಾಡಲಾಗಿದೆ. 10 ಎಕರೆ ಜಾಗೆಯಲ್ಲಿ ನಿವೇಶನ ರಹಿತರಿಗೆ ಮಂಜೂರಾಗಿ 2ವರ್ಷಗಳಾದರೂ ಈ ವರೆಗೂ ಹಸ್ತಾಂತರವಾಗಿಲ್ಲ. 25 ಎಕರೆ ಬೇರೆ ಇರುವ ಜಾಗೆಯಲ್ಲಿ 19 ಎಕರೆ ಹುಲ್ಲುಗಾವಲಿದ್ದು, ಇದರಲ್ಲೂ ಸಹ ನಿವೇಶನ ಮಾಡಬಹುದಾಗಿದೆ ಎಂದರು.
ಈ ಕುರಿತು ಹಲವು ಬಾರಿ ಗ್ರಾಪಂ ಅಧ್ಯಕ್ಷರು, ಪಿಡಿಒ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು. ಗ್ರಾಮದಲ್ಲಿ ಅಧಿಕ ಜನರು ನಿವೇಶನ ರಹಿತರಿದ್ದಾರೆ. ಅವರ ಜೀವನ ನಿಜಕ್ಕೂ ದುಸ್ಥರವಾಗಿದೆ ಎಂದರು.
ರಾಜು ಸುರ್ವೆ, ಶಿವಕುಮಾರ ಶೆಟ್ಟರ್, ನಿಂಗಪ್ಪ ಹಲವಾಗಲ, ಗಾಳೆಪ್ಪ ಮರಿಯಮ್ಮನವರ, ಮಂಜುನಾಥ ವಡ್ಡರ, ಶಿವು ಸಣ್ಣಬೊಮ್ಮಾಜಿ, ಶಿವಾಜಿ ಹಲವಾಗಲ, ಭಾಗ್ಯಲಕ್ಷಿ ್ಮೕ ಶಿವಳ್ಳಿ, ರೇಣುಕಮ್ಮ ಹಲವಾಗಲ, ರೇಷ್ಮಾ ನಾಗರಜ್ಜಿ, ಕರಬಸವ್ವ ಹಳ್ಳಳ್ಳಿ, ಲಲಿತವ್ವ ಚಳಗೇರಿ, ಗೌರಮ್ಮ ನಿಟ್ಟೂರು, ಮಂಜುಳಾ ಮಣಕೂರ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು