ವಾರದೊಳಗೆ ಬೆಳೆವಿಮೆ ಪ್ರಕರಣ ಬಗೆಹರಿಸಿ

ರೈತರ ಖಾತೆಗೆ ಬಾಕಿ ಹಣ ಜಮೆ ಮಾಡಿ

Team Udayavani, Sep 21, 2019, 10:43 AM IST

hv-tdy-1

ಹಾವೇರಿ: ಜಿಲ್ಲೆಯ ರೈತರ ಬೆಳೆವಿಮೆ ಬಾಕಿ ಪ್ರಕರಣಗಳನ್ನು ಒಂದು ವಾರದೊಳಗಾಗಿ ಇತ್ಯರ್ಥಪಡಿಸಿ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಬ್ಯಾಂಕ್‌ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ 2015ರಿಂದ 2018ರ ವರೆಗಿನ ಬೆಳೆ ವಿಮೆ ಪಾವತಿ ಬಾಕಿ ಪ್ರಕರಣಗಳ ಕುರಿತಂತೆ ನಡೆಸಿದ ರೈತ ಸಂಘಟನೆಗಳು, ಬ್ಯಾಂಕ್‌ ಹಾಗೂ ವಿಮಾ ಕಂಪನಿಯ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಬೆಳೆ ವಿಮೆ ಪ್ರಕರಣಗಳಲ್ಲಿ ರೈತರಿಗೆ ವಂಚನೆ ಪ್ರಕರಣಗಳು ನಡೆದರೆ ಅಂತಹ ವಿಮಾ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತರು ವಿಮೆ ತುಂಬಲು ಶ್ರಮಪಡುತ್ತಾರೆ, ನಾವು ನೀಡುವ ಪರಿಹಾರ

ಏನೂ ಅಲ್ಲ. ನ್ಯಾಯೋಚಿತವಾದ ಪರಿಹಾರ ರೈತರಿಗೆ ತಲುಪಬೇಕು. ರೈತರ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬೇಡಿ. ಸಭೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ಬರಬೇಡಿ. ಗಂಭೀರವಾದ ಸಮಸ್ಯೆಗಳನ್ನು ಚರ್ಚಿಸುವಾಗ ಪೂರ್ಣಮಾಹಿತಿಯೊಂದಿಗೆ ಬರಬೇಕು. ರೈತರ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಗಣಿಸಬೇಕು ಎಂದು ಆದೇಶಿಸಿದರು. ಬೆಳೆವಿಮೆ ಪ್ರಕರಣಗಳಲ್ಲಿ ಬ್ಯಾಂಕ್‌ ಖಾತೆ ವಿವರ ಸಿಕ್ಕಿಲ್ಲ, ಆಧಾರ್‌ ಜೋಡಣೆಯಾಗಿಲ್ಲ ಎಂಬ ಯಾವ ನೆಪ ಹೇಳಬಾರದು. ನೋಂದಣಿ ಸಂದರ್ಭದಲ್ಲೇ ಎಲ್ಲ ಮಾಹಿತಿಯನ್ನು ಪಡೆಯಲಾಗುತ್ತದೆ. ಪರಿಹಾರ ನೀಡುವಾಗ ಕನಿಷ್ಟ ದಾಖಲೆಗಳನ್ನು ಪರಿಗಣಿಸಿ ಸರಳ ಮಾನದಂಡ ಅನುಸರಿಸಿ ಬೆಳೆವಿಮೆ ಮಾಡಿಸಿದ ರೈತರ ಖಾತೆಗೆ ಹಣ ಜಮೆಮಾಡುವಂತೆ ಅಧಿ ಕಾರಿಗಳಿಗೆ ತಾಕೀತು ಮಾಡಿದರು.

2015-16ನೇ ಸಾಲಿನ ಮುಂಗಾರು ಹಂಗಾಮಿನ ಅಕ್ಕಿ-ಭತ್ತ ಇಳುವರಿ ವ್ಯತ್ಯಾಸದ ಪ್ರಯುಕ್ತ ಬಿಡುಗಡೆಯಾಗಿರುವ 19.31ಕೋಟಿ ರೂ. ಹಣದಲ್ಲಿ ಈವರೆಗೆ 15.30 ಕೋಟಿ ರೂ. ಮಾತ್ರ ರೈತರ ಖಾತೆಗೆ ಜಮೆಯಾಗಿದೆ. ಬಾಕಿ 4.01 ಕೋಟಿ ರೂ. ಗಳನ್ನು ತ್ವರಿತವಾಗಿ ಜಮೆ ಮಾಡಲು ತಾಕೀತು ಮಾಡಿದರು. 2016-17ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಾಕಿ ಉಳಿದ ಅಕ್ಕಿ-ಭತ್ತದವ್ಯತ್ಯಾಸದ ಪರಿಹಾರ ಬಿಡುಗಡೆ ಕುರಿತಂತೆ 3820 ರೈತರಿಗೆ 10.54 ಕೋಟಿ ರೂ. ಬಾಕಿ ಬರಬೇಕಾಗಿದೆ. ಆದರೆ, ವಿಮಾ ಕಂಪನಿ ನೋಂದಣಿ ನಿಯಮದಂತೆ ಈಗಾಗಲೇ ಹಣ ಪಾವತಿಸಲಾಗಿದೆ. ಅಕ್ಕಿ-ಭತ್ತದ ವ್ಯತ್ಯಾಸದಂತೆ ಬಾಕಿ ಹಣ ಜಮೆ ಮಾಡಲುಸಾಧ್ಯವಿಲ್ಲ. 2015-16ನೇ ಸಾಲಿನಂತೆ ಸರ್ಕಾರವೇ ವ್ಯತ್ಯಾಸದ ಹಣ ಪಾವತಿಸಬೇಕು ಎಂದು ಯುನಿವರ್ಸಲ್‌ ಸೊಂಪೊ ವಿಮಾ ಕಂಪನಿಯ ಪ್ರತಿನಿಧಿ  ಮಹದೇವ ಸಭೆಗೆ ತಿಳಿಸಿದರು.

ಈ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿಗಳು ರೈತರಿಗೆ ಭರವಸೆ ನೀಡಿದರು. 2016-17ನೇ ಸಾಲಿನ ಮುಂಗಾರು ಮತ್ತು ಹಿಂಗಾರು, ಬೇಸಿಗೆ ಹಂಗಾಮು ಮತ್ತು 2017-18ನೇ ಸಾಲಿನಲ್ಲಿ ರೈತ ಬ್ಯಾಂಕ್‌ ಸೇವಾ ಖಾತೆ ಹಾಗೂ ಆಧಾರ್‌ ಸಂಖ್ಯೆ ಜೋಡಣೆ ಹೊಂದಾಣಿಕೆಯಾಗದೆ 244 ಪ್ರಕರಣಗಳಲ್ಲಿ ವಿಮಾ ಪಾವತಿಯಾಗಿ, ಈ ಪ್ರಕರಣವನ್ನು ಒಂದು ವಾರದೊಳಗೆ ಪರಿಶೀಲಿಸಿ ಸರಿಪಡಿಸಿ ವಿವರ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು ಹಾಗೂ 2018ನೇ ಸಾಲಿನ ಮುಂಗಾರು ಹಂಗಾಮಿನ 66 ಕೋಟಿ ರೂ. ಬೆಳೆ ವಿಮೆ ಪರಿಹಾರ ಮೊತ್ತವನ್ನು ತ್ವರಿತವಾಗಿ ರೈತರ ಖಾತೆಗೆ ಬಿಡುಗಡೆಗೊಳಿಸಲು ಆದೇಶಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಸಾಂಖೀಕ ಅಧಿಕಾರಿ ಮಣ್ಣವಡ್ಡರ, ಕೃಷಿ ವಿಮಾ ಸಂಸ್ಥೆಯಸಹಾಯಕ ಪ್ರಾದೇಶಿಕ ವ್ಯವಸ್ಥಾಪಕಿ ಡಾ| ಎಚ್‌.ಜಯಂತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ, ಲೀಡ್‌ಬ್ಯಾಂಕ್‌ ವ್ಯವಸ್ಥಾಪಕರು, ಯುನಿವರ್ಸಲ್‌ ಸೊಂಪೊ ಕಂಪನಿ, ಶ್ರೀರಾಮ ಜನರಲ್‌ ಇನ್ಸುರೆನ್ಸ್‌ ಕಂಪನಿ, ಓರೆಂಟಲ್‌ ಇನ್ಸುರೆನ್ಸ್‌ ಕಂಪನಿ, ಯುನೈಟೆಡ್‌ ಇಂಡಿಯಾ ಇನ್ಸುರೆನ್ಸ್‌, ಭಾರತೀಯ ಸ್ಟೇಟ್‌ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌, ಐಸಿಐಸಿ ಬ್ಯಾಂಕ್‌, ಕರ್ಪೋರೇಷನ್‌ ಬ್ಯಾಂಕ್‌, ತಹಶೀಲ್ದಾರ್‌ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಇದ್ದರು

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.