ಇಪ್ಪತ್ತರ ಯುವಕರ ನಾಚಿಸುವ ತೊಂಬತ್ತೂಂದರ ನಿವೃತ್ತ ಶಿಕ್ಷಕ
Team Udayavani, Jun 29, 2021, 9:47 PM IST
ವರದಿ: ಸದಾಶಿವ ಹಿರೇಮಠ
ಬಂಕಾಪುರ: ಇವರನ್ನು ಕಂಡರೆ ಇಪ್ಪತ್ತರ ಯುವಕರೂ ಸಹ ನಾಚಿ ನೀರಾಗಬೇಕು. ಇವರ ಚಲನವಲನಗಳನ್ನು ಕಂಡು ಪ್ರತಿಯೊಬ್ಬರೂ ಬೆರಗಾಗಬೇಕು.
ಹೌದು. ಇವರೇ 91ರ ಇಳಿ ವಯಸ್ಸಿನಲ್ಲೂ ಸೈಕಲ್ ಏರಿ ನೀರು ತರುವ ಶಿಸ್ತಿನ ಶಿಪಾಯಿ, ನಿವೃತ್ತ ಶಿಕ್ಷಕ ಈಶ್ವರ ಅಗಡಿ. ನೌಕರಿ ಮಾಡುವಾಗ ಶಾಲೆಗೆ ತೆಗೆದುಕೊಂಡು ಹೋಗುತ್ತಿದ್ದ ಸೈಕಲ್ ಅನ್ನೇ ಇಂದಿಗೂ ಜೋಪಾನವಾಗಿಟ್ಟುಕೊಂಡು ಬಳಸುತ್ತಿರುವ ಇವರು ಸೈಕಲ್ ಏರಿ ಹೊರಟರೆ ಎಂತಹವರೂ ಕೂಡ ಇವರನ್ನು ನೋಡದೇ ಇರಲಾರರು.
ಬಾಲ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹದೇವಪ್ಪನವರ ಧರ್ಮ ಪತ್ನಿ ಸಿದ್ದಮ್ಮನವರ ಕೈಯಲ್ಲಿ ಆಡಿ ಬೆಳೆದ ಇವರು 12ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದ್ದರು. ಹಿರೆಕೇರೂರ ತಾಲೂಕು ಚಿನ್ನಮುಳಗುಂದ ಗ್ರಾಮದ ಶಾಲೆಯಲ್ಲಿ ಶಿಕ್ಷಣದೊಂದಿಗೆ ಲೇಜಿಂ, ಡೆಂಬಲ್ಸ್, ಹಗ್ಗ ಜಗ್ಗಾಟ, ಕವಾಯತ್, ಲಾಠಿ ಬಳಕೆ, ಕಬಡ್ಡಿ ಸೇರಿದಂತೆ ಇತರೆ ಕಲೆಗಳನ್ನು ಕರಗತ ಮಾಡಿಕೊಂಡು ಇವರು ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಇವರ ಕೈಯಲ್ಲಿ ಕಲಿತ ವಿದ್ಯಾರ್ಥಿಗಳು ನೌಕರಿ ಮಾಡಿ ನಿವೃತ್ತಿ ಹೊಂದಿದ್ದಾರೆ.
2017-18 ರಲ್ಲಿ ವಿಶ್ವ ಹಿರಿಯ ದಿನಾಚರಣೆ ಅಂಗವಾಗಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರಿಕೆಟ್ ಬಾಲ್ ಎಸೆತದಲ್ಲಿ ಪ್ರಥಮ, 100 ಮೀ. ಓಟದಲ್ಲಿ ಪ್ರಥಮ, ಥ್ರೋ ಬಾಲ್ನಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು