ಅಪಾಯ ಆಹ್ವಾನಿಸುತ್ತಿವೆ ವಿದ್ಯುತ್‌ ಸ್ವಿಚ್‌ಬೋರ್ಡ್‌


Team Udayavani, Feb 3, 2020, 2:56 PM IST

hv-tdy-1

ಹಾವೇರಿ: ನಗರದ ವಿವಿಧ ಬಡಾವಣೆ ಹಾಗೂ ವಿವಿಧ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳು ಜನ-ಜಾನುವಾರುಗಳ ಪ್ರಾಣಕ್ಕೆ ಸಂಚಕಾರ ಮೂಡಿವಂತಿದ್ದು, ಪಾದಾಚಾರಿಗಳಲ್ಲೂ ಆತಂಕ ಮೂಡಿಸಿದೆ.

ಸ್ಥಳೀಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್‌ ಕಂಬಗಳಲ್ಲಿ ಬೀದಿದೀಪದ ನಿರ್ವಹಣೆಗೆ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಅನೇಕ ಸ್ವಿಚ್‌ಬೋರ್ಡ್‌ಗಳು ಹಾಳಾಗಿದ್ದು, ವೈಯರ್‌ಗಳು ಹೊರಬಂದಿವೆ. ಈ ವೈಯರ್‌ಗಳಲ್ಲಿ ವಿದ್ಯುತ್‌ ಪ್ರವಹಿಸುತ್ತಿವೆ. ಇಂಥ ಸ್ವಿಚ್‌ ಬೊರ್ಡ್‌ಗಳು ಮಕ್ಕಳು, ಸಾರ್ವಜನಿಕರ ಕೈಗೆಟುಕುವಂತಿರುವುದು ಅಪಾಯ ತಂದೊಡ್ಡುವ ಸಾಧ್ಯತೆ ಇದೆ.

ಸ್ಥಳೀಯ ವಿದ್ಯಾನಗರದ 3ನೇ ಕ್ರಾಸ್‌ ಫೆಡರಲ್‌ ಬ್ಯಾಂಕ್‌ ಪಕ್ಕದ ರಸ್ತೆ, ವಿದ್ಯಾನಗರದ 3ನೇ ಕ್ರಾಸ್‌ ಮೇನ್‌ರೋಡ್‌, ಪಿ.ಬಿ.ರಸ್ತೆ, ಶಿವಾಜಿನಗರ 4ನೇ ಕ್ರಾಸ್‌ ಹತ್ತಿರ, ಸಂಚಾರಿ ಪೊಲೀಸ್‌ ಠಾಣೆ ಎದುರು, ಬಸವೇಶ್ವರ ನಗರ, ಅಶ್ವಿ‌ನಿ ನಗರ, ನಾಗೇಂದ್ರನಮಟ್ಟಿ, ಶಿವಬಸವ ನಗರ, ಕಲ್ಲುಮಂಟಪ ರೋಡ್‌, ಎಂ.ಜಿ.ರಸ್ತೆ, ತರಕಾರಿ ಮಾರುಕಟ್ಟೆ, ಹೊಸನಗರ, ಮಂಜುನಾಥ ನಗರ ಸೇರಿದಂತೆ ನಗರ ಬಹುತೇಕ ಕಡೆಗಳಲ್ಲಿನ ಸ್ವಿಚ್‌ಬೋರ್ಡ್‌ಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಹಾಳಾದ ಸ್ವಿಚ್‌ಬೋರ್ಡ್‌: ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಿರುವ ಸ್ವಿಚ್‌ಬೋರ್ಡ್‌ಗಳು ತುಕ್ಕು ಹಿಡಿದು ಹಾಳಾಗಿವೆ. ಅಲ್ಲದೇ ಬಹುತೇಕ ಸ್ವಿಚ್‌ಬೋರ್ಡ್‌  ಗಳಿಗೆ ಬಾಗಿಲು ಇಲ್ಲದೇ ತೆರೆದುಕೊಂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ. ಇನ್ನು ಕೆಲವುಕಡೆಗಳಲ್ಲಿ ಸಿಬ್ಬಂದಿ ಬೋರ್ಡ್‌ನಲ್ಲಿ ಸ್ವಿಚ್‌ಆನ್‌ ಮಾಡಿ ಬಾಗಿಲು ಹಾಕದೇ ಹಾಗೆ ಹೊರಟು ಹೋಗುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವೈಯರ್‌ಗಳು ಹೊರಗೆ ಬಿದ್ದಿದ್ದು ಅದನ್ನು ಸರಿಪಡಿಸುವ ಗೋಜಿಗೆ ಯಾರೂ ಹೋಗುತ್ತಿಲ್ಲ. ಇದರಿಂದಾಗಿ ನಗರದಲ್ಲಿ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳಿಂದ ಜಾನುವಾರು ಹಾಗೂ ಜನರ ಪ್ರಾಣಕ್ಕೆ ಕಂಟಕಪ್ರಾಯವಾಗುವ ಸಾಧ್ಯತೆ ಇದೆ.

ನಗರದಲ್ಲಿ ಸುಮಾರು 20ಸಾವಿರಕ್ಕೂ ಹೆಚ್ಚು ವಿದ್ಯುತ್‌ ಕಂಬಗಳಿವೆ. ಅವುಗಳಲ್ಲಿ ಕೆಲವೊಂದು ಪ್ರಮುಖ ಸ್ಥಳಗಳಲ್ಲಿ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ, ಇಲ್ಲಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಎಚ್ಚರಿಕೆಯ ನಾಮಫಲಕಗಳನ್ನು ಅಳವಡಿಸಿಲ್ಲ. ಇನ್ನೂ ಕೆಲವಡೆ ನಗರದಲ್ಲಿ ವಿದ್ಯುತ್‌ ಪರಿವರ್ತಕಗಳ ಸುತ್ತ ಹಾಕಲಾಗಿರುವ ತಂತಿಬೇಲಿ ಸಹ ಹಾಳಾಗಿದ್ದು, ದನಕರುಗಳು ಒಳಗಡೆ ಪ್ರವೇಶ ಮಾಡುವಂತಾಗಿದೆ. ಅಪಾಯ ಆಹ್ವಾನಿಸುತ್ತಿರುವ ವಿದ್ಯುತ್‌ ಕಂಬಗಳ ಸ್ವಿಚ್‌ ಬೋರ್ಡ್‌ಗಳನ್ನು ದುರಸ್ತಿಗೊಳಿಸಿ ಅಪಾಯ ತಪ್ಪಿಸಬೇಕಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.