ಮಾ. 21ರಂದು ಬೃಹತ್‌ ರೈತ ಸಮಾವೇಶ


Team Udayavani, Feb 27, 2021, 5:31 PM IST

ಮಾ. 21ರಂದು ಬೃಹತ್‌ ರೈತ ಸಮಾವೇಶ

ಹಾವೇರಿ: ರೈತರಿಗೆ ಮಾರಕವಾಗಿರುವ ಕೃಷಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಕುರಿತು ರೈತರಿಗೆ ಜಾಗೃತಿ ಮೂಡಿಸಲು ಮಾ. 21ರಂದು ನಗರದಲ್ಲಿ ಬೃಹತ್‌ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ರಾಜ್ಯ ಮುಖಂಡ ಕೆ.ಟಿ. ಗಂಗಾಧರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.20ರಂದು ಶಿವಮೊಗ್ಗದಲ್ಲಿಸಮಾವೇಶ ನಡೆಸಲಾಗುವುದು. ಈ ಸಮಾವೇಶದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್‌ ಮೋರ್ಚಾ ಸಂಘಟನೆ ಅಧ್ಯಕ್ಷ ರಾಕೇಶ ಟಿಕಾಯತ್‌ ಸೇರಿದಂತೆ ರಾಜ್ಯದ ರೈತ ಮುಖಂಡರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕೃಷಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗಳು ರೈತರಿಗೆ ಮಾರಕವಾಗಿವೆ. ಆದರೆ, ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಹಿತ ಕಾಪಾಡುವ ಉದ್ದೇಶದಿಂದ ಈ ಕಾಯ್ದೆಗಳನ್ನು ಸಂಸತ್‌ನಲ್ಲಿ ಯಾವುದೇ ಚರ್ಚೆಯಿಲ್ಲದೇ ಸುಗ್ರೀವಾಜ್ಞೆಮೂಲಕ ಜಾರಿಗೊಳಿಸಿ ರೈತರನ್ನು ಬೀದಿಗೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಈ ಕಾಯ್ದೆಗಳ ಜಾರಿಯಿಂದ ಕೇವಲ ರೈತರಿಗೆ ಅನ್ಯಾಯವಾಗುವುದಿಲ್ಲ. ಅನ್ನ ತಿನ್ನುವ ಎಲ್ಲರ ತಟ್ಟೆಗೆ ಮುಂದಿನ ದಿನಗಳಲ್ಲಿ ಬಂಡವಾಳಶಾಹಿಗಳು ಕೈ ಹಾಕಲಿದ್ದಾರೆ. ನಮ್ಮ ಆಹಾರ ಸಾರ್ವಭೌಮತ್ವ ಬಂಡವಾಳಶಾಹಿಗಳ ಕೈಗೆ ಹೋಗಲಿದೆ. ಇದರ ವಿರುದ್ಧ ಈಗಲೇ ಎಲ್ಲರೂ ಜಾಗೃತರಾಗಬೇಕು. ಅದಕ್ಕಾಗಿ ಜಾಗೃತಿ ಮೂಡಿಸಲು ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.

ದೇಶದಲ್ಲಿ ಸದ್ಯ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದವರನ್ನು ಬಂಧಿ ಸುವ ಪ್ರಕ್ರಿಯೆ ನಡೆಯುತ್ತಿದೆ. ರೈತ ಚಳವಳಿಗಳನ್ನು ವ್ಯವಸ್ಥಿತವಾಗಿ ಮುರಿಯುವ ಯತ್ನ ನಡೆಯುತ್ತಿದೆ. ಈ ಹೋರಾಟಬರೀ ಉತ್ತರ ಭಾರತದ ಒಂದೆರಡು ರಾಜ್ಯಗಳರೈತರದ್ದು ಮಾತ್ರ ಎಂದು ದಾರಿ ತಪ್ಪಿಸುವ ಕೆಲಸವನ್ನುಸರ್ಕಾರದ ಪ್ರತಿನಿಧಿಗಳು ಮಾಡುತ್ತಿದ್ದಾರೆ. ಇದೀಗದಕ್ಷಿಣ ಕರ್ನಾಟಕದಲ್ಲೂ ಸಮಾವೇಶದ ಮೂಲಕ ದೇಶಾದ್ಯಂತ ವಿರೋಧವಿದೆ ಎಂದು ತೋರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದರು.

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರವೂ ರೈತರನ್ನು ಭೂರಹಿತರನ್ನಾಗಿ ಮಾಡುವ ಮಾರಕ ಕಾಯ್ದೆ ಜಾರಿಗೊಳಿಸಿದೆ. ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳು ಈ ಹಿಂದಿಗಿಂತ 10ಪಟ್ಟು ಹೆಚ್ಚುಭೂಮಿ ಖರೀದಿ ಮಾಡಲು ಅವಕಾಶ ಮಾಡಿಕೊಟ್ಟಿದೆ.ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದೆ.ಇದೆಲ್ಲದರ ಕುರಿತು ಸಮಾವೇಶದಲ್ಲಿ ರೈತರಿಗೆ ಜಾಗೃತಿಮೂಡಿಸಲಾಗುವುದು ಎಂದರು. ಸಂಘದ ಜಿಲ್ಲಾಧ್ಯಕ್ಷರಾಮಣ್ಣ ಕೆಂಚಳ್ಳೇರ ಮಾತನಾಡಿ, ನಗರದ ಮುನ್ಸಿಪಲ್‌ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗುವುದು. ಅಂದಾಜು 10 ಸಾವಿರ ರೈತರು ಪಾಲ್ಗೊಳ್ಳುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ನಾಗಣ್ಣ, ಜಿಲ್ಲಾ ಮುಖಂಡರಾದ ಶಿವಬಸಪ್ಪ ಬೋವಿ, ದೀಪಕ್‌ ಗಂಟೇರ, ಮಲ್ಲಿಕಾರ್ಜುನ ಬಳ್ಳಾರಿ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.