ಜೋಡು ಮಾರುತಿ ಮಂದಿರದ ರಸ್ತೆ ನಿರ್ಮಾಣ
Team Udayavani, Jul 3, 2020, 4:50 PM IST
ಸವಣೂರು: ಪಟ್ಟಣ ಹೊರವಲಯದ ಜೋಡು ಮಾರುತಿ ದೇವಸ್ಥಾನದಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಉದ್ಯಮಿ ಹಾಗೂ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ಪುತ್ರ ಸುಮಂತ ಸಿಂಧೂರ ಚಾಲನೆ ನೀಡಿದರು.
ಪಟ್ಟಣದ ಬಸವನಕಟ್ಟೆ ಕೆರೆ ದಂಡೆಯ ಕೆಳಗಡೆ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರಸಿದ್ಧ ಜೋಡು ಮಾರುತಿ ದೇವಸ್ಥಾನಕ್ಕೆ ಬರಲು ಭಕ್ತರು ಕೆರೆ ದಂಡೆಯ ಮೇಲಿರುವ ರಸ್ತೆ ಮೂಲಕ ಬರಬೇಕಾಗಿದ್ದು, ಎಷ್ಟೋ ವರ್ಷಗಳಿಂದ ದುರಸ್ತಿ ಕಾಣದೇ ಮಳೆಯಿಂದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವುದರಿಂದ ದೇವಸ್ಥಾನದ ಭಕ್ತರಾದ ಸಿಂಧೂರ ಕುಟುಂಬಸ್ಥರು ಸ್ವಯಂ ಪ್ರೇರಣೆಯಿಂದ ಡಾಂಬರೀಕರಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದೇವಸ್ಥಾನಕ್ಕೆ ಇನ್ನೂ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುವಂತಾಗಲಿದೆ ಎಂದು ಹಿರಿಯ ಪತ್ರಕರ್ತ ಜಯತೀರ್ಥ ದೇಶಪಾಂಡೆ ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಪದಾಧಿಕಾರಿಗಳು ಸಿಂಧೂರ ಕುಟುಂಬಸ್ಥರಿಗೆ ಅಭಿನಂದನೆ ಸಲ್ಲಿಸಿದರು. ಯೋಗೇಂದ್ರ ಜಂಬಗಿ, ಉಮೇಶ ದಾಮೋದರ, ಶ್ರೀನಿವಾಸ ಖಾರದ, ಮಾಹಂತೇಶ ಸುಣಗಾರ, ಮುರಗೇಶ ಮಿರ್ಜಿ, ಹರೀಶ ಕ್ಷೌರದ, ಅರ್ಚಕರಾದ ಸ್ರಿàನಿವಾಸ ಜೋಶಿ ಇನನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು