ರಸ್ತೆ ಅಗಲೀಕರಣ ಹೋರಾಟಕ್ಕೆ ವಕೀಲರ ಸಾಥ್
ನೀರಿನ ಬವಣೆ-ರಸ್ತೆ ಅಗಲೀಕರಣ ಸಮಸ್ಯೆ
Team Udayavani, Sep 20, 2019, 1:38 PM IST
ಬ್ಯಾಡಗಿ: ಮುಖ್ಯ ರಸ್ತೆ ಅಗಲೀಕರಣ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ಆಗ್ರಹಿಸಿ ಸೆ. 21 ರಂದು ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ನ್ಯಾಯವಾದಿಗಳ ಸಂಘವು ಕೈಜೋಡಿಸಲಿದೆ ಎಂದು ನ್ಯಾಯವಾದಿಗಳ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬನ್ನಿಹಟ್ಟಿ ಹೇಳಿದರು.
ಪಟ್ಟಣದ ನ್ಯಾಯವಾದಿಗಳ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಗೆ ನಾವೆಲ್ಲರೂ ಪಕ್ಷಾತೀತವಾಗಿ ಕೈ ಜೋಡಿಸಬೇಕಿದೆ. ಇದರಲ್ಲಿ ಯಾರೊಬ್ಬರ ವೈಯಕ್ತಿಕ ಹಿತಾಸಕ್ತಿ ಇಲ್ಲ. ಬದಲಾಗಿ ತಾಲೂಕಿನ ರೈತರು ಹಾಗೂ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದ್ದು, ಇದರಿಂದ ಜನರು ಎದುರಿಸುತ್ತಿರುವ ನೀರಿನ ಬವಣೆ ಹಾಗೂ ಮುಖ್ಯ ರಸ್ತೆಯಲ್ಲಿ ಉಂಟಾಗುತ್ತಿರುವ ಅಪಘಾತಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ವಾಗಲಿದೆ ಎಂದರು.
ನ್ಯಾಯವಾದಿ ಎಂ.ಎಫ್. ಮುಳುಗುಂದ ಮಾತನಾಡಿ, ಮುಖ್ಯ ಅಗಲೀಕರಣ ಪಟ್ಟಣದ ಅಭಿವೃದ್ಧಿ, ಹೆಚ್ಚುತ್ತಿರುವ ವಾಹನ ದಟ್ಟಣೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ರಸ್ತೆ ಅಗಲೀಕರಣ ಅವಶ್ಯವಾಗಿದೆ. ಆದರೆ, ಎಷ್ಟೇ ಹೋರಾಟಗಳಾದರೂ ಪಟ್ಟಣದಲ್ಲಿನ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವರ್ತಕರು ಮಾತ್ರ ಇದಕ್ಕೆ ಸಹಕಾರ ನೀಡುತ್ತಿಲ್ಲ. ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಎಲ್ಲರಿಗಿಂತ ಅವರಿಗೆ ಹೆಚ್ಚಾಗಿ ಅಗಲೀಕರಣದ ಅವಶ್ಯಕತೆಯಿದೆ. ಸಾವಿರಾರು ಕೋಟಿ ವ್ಯವಹಾರ ನಡೆಸುವ ಅವರೇ ಅಗಲೀಕರಣಕ್ಕೆ ಬೆಂಬಲ ಸೂಚಿಸುತ್ತಿಲ್ಲ ಇದು ಖೇದಕರ ವಿಷಯ ಎಂದರು.
ಮಾಲತೇಶ ಹಾವೇರಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಜನಪರ ಹೋರಾಟ ನಡೆದರೂ ನ್ಯಾಯವಾದಿಗಳ ಸಂಘ ಅವರ ಬೆನ್ನಿಗೆ ನಿಲ್ಲುತ್ತ ಬಂದಿದೆ. ಆದರೆ ನಮ್ಮ ಮೇಲೆ ಹಲ್ಲೆಯಾದಾಗ ಯಾವ ಸಂಘ ಸಂಸ್ಥೆಗಳು ನಮ್ಮ ಸಹಕಾರಕ್ಕೆ ನಿಲ್ಲಲ್ಲ. ಅಲ್ಲದೇ ಈಗಾಗಲೇ ಹಲವಾರು ಬಾರಿ ಅಗಲೀಕರಣ ಸಮಿತಿ ಹೋರಾಟಕ್ಕೆ ಕೈಜೋಡಿಸಿದ್ದೇವೆ. ಹೋರಾಟದ ಸಮಯದಲ್ಲಿ ಮತ್ತು ಪ್ರತಿಭಟನೆ ವಾಪಸ್ ಪಡೆಯುವ ಸಮಯದಲ್ಲಿ ನಮ್ಮನ್ನು ಸಂಪೂರ್ಣ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.
ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಸ್.ಎಸ್.ಶೆಟ್ಟರ್, ನ್ಯಾಯವಾದಿಗಳಾದ ಬಟ್ಟಲಕಟ್ಟಿ, ಬೆಳಕೇರಿಮಠ, ಪಿ.ಎಸ್. ಶಿಂಗ್ರಿ, , ಜಾಧವ ಸೇರಿದಂತೆ ಇನ್ನಿತರರು ಮುಖ್ಯ ರಸ್ತೆ ಅಗಲೀಕರಣ ಪ್ರತಿಭಟನೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತ ಪಡಿಸಿದರೆ ಕೆರೆಗೆ ನೀರು ತುಂಬಿಸುವ ಯೋಜನೆ ಹೋರಾಕ್ಕೆ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದರು. ನ್ಯಾಯವಾದಿಗಳಾದ ಡಿ.ಎಚ್. ಬುಡ್ಡನ ಗೌಡನಗೌಡ, ಯಶೋಧರ ಅರ್ಕಾಚಾರಿ, ಸುರೇಶ ಕಾಟೇನಹಳ್ಳಿ, ಟಿ.ಆರ್. ಮಠದ, ಪಿ.ಎಸ್ ಚೂರಿ, ಟಿ.ಪಿ.ಶೀಗಿಹಳ್ಳಿ, ಎಸ್.ಎನ್.ಬಾರ್ಕಿ, ಭಾರತಿ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು