13 ಕೋಟಿ ರೂ. ಬೆಳೆ ವಿಮೆ ಬಾಕಿ ಬಿಡುಗಡೆ; ವಿಜಯೋತ್ಸವ
Team Udayavani, Apr 27, 2019, 2:37 PM IST
ಹಾನಗಲ್ಲ: ಜನಪ್ರತಿನಿಧಿಗಳು ರೈತರ ನೆರವಿಗೆ ಬಾರದಿದ್ದರೂ ಧೃತಿಗೆಡದೆ ನಿರಂತರ ಹೋರಾಟದಿಂದ ರೈತರಿಗೆ ನ್ಯಾಯಯುತವಾಗಿ ದೊರಕಬೇಕಿದ್ದ ಬೆಳೆವಿಮೆ ಒದಗಿಸಿಕೊಟ್ಟ ಸಮಾಧಾನ ನಮ್ಮ ಸಂಘಕ್ಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹೇಳಿದರು.
ಶುಕ್ರವಾರ ಇಲ್ಲಿನ ಮಹಾತ್ಮಾ ಗಾಂಧಿ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ವತಿಯಿಂದ 2016-17ರ ಬೆಳೆವಿಮೆ ಬಾಕಿ 13 ಕೋಟಿ ರೈತರಿಗೆ ಬಂದಿದ್ದಕ್ಕೆ ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಸೇರಿದ್ದ ಹಲವಾರು ರೈತರು ತಹಶೀಲ್ದಾರ್ ಕಚೇರಿಗೆ ಆಗಮಿಸಿ, ರೈತರ ಸಮಸ್ಯೆಗಳಿಗೆ ಯಾವುದೇ ಇಲಾಖೆ ಸ್ಪಂದಿಸದಿದ್ದರೆ ಹೋರಾಟವೇ ನಮ್ಮ ದಾರಿಯಾಗಲಿದೆ. ರೈತರ ಕೆಲಸಗಳಿಗಾಗಿ ಸತಾಯಿಸಿದರೆ ಸಂಘಟನೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆಯ ಘೋಷಣೆಗಳನ್ನು ಕೂಗಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ತಾಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ರೈತರ ಮತಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳೇ ರೈತರ ಸಂಕಷ್ಟಗಳಿಗೆ ಸ್ಪಂದಿಸದಿರುವುದು ವಿಷಾದನೀಯ ಸಂಗತಿ.
ಬೆಳೆವಿಮೆ ವಿಷಯದಲ್ಲಿ ಜನಪ್ರತಿಧಿಗಳು ಸಕಾಲಿಕವಾಗಿ ರೈತರ ಸಹಾಯಕ್ಕೆ ಬರದಿದ್ದರೆ ಅಧಿಕಾರಿಗಳ ಆಟದಿಂದಾಗಿ ರೈತ ಸಮೂಹ ಹಲವು ನಷ್ಟ ಅನುಭವಿಸಬೇಗುವುದು. 2016-17ರ ಸಾಲಿನ ಬೆಳೆವಿಮೆ ಬಾಕಿ ಉಳಿಸಿಕೊಂಡಿದ್ದ 13 ಕೋಟಿ ರೂ. ಪಡೆಯಲು ನಿರಂತ ಹೋರಾಟ ನಡೆಸುವ ಸ್ಥಿತಿ ನಿರ್ಮಾಣವಾಯಿತು. ಕೊನೆಗೂ ಹೋರಾಟದಿಂದಲೇ ನ್ಯಾಯ ಸಿಕ್ಕಿತೇ ಹೊರತು ಜನಪ್ರತಿನಿಧಿಗಳ ಸಹಕಾರದಿಂದಲ್ಲ. ಒಂದು ವೇಳೆ ರಾಜಕಾರಣಿಗಳು ಸೂಕ್ತವಾಗಿ ಸ್ಪಂದಿಸಿದ್ದರೆ ಯಾವಾಗಲೋ ಈ ಹಣ ಪಡೆಯಬಹುದಾಗಿತ್ತು. ಆದರೆ, ನಮ್ಮನ್ನಾಳುವ ನಾಯಕರಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.
ಬ್ಯಾಡಗಿ ತಾಲೂಕಿನ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ, ತಾಲೂಕು ಪದಾಧಿಕಾರಿಗಳಾದ ಮಲ್ಲೇಶಪ್ಪ ಪರಪ್ಪನವರ, ರುದ್ರಪ್ಪ ಹಣ್ಣಿ, ರಾಜು ದಾನಪ್ಪನವರ, ಸೋಮಣ್ಣ ಜಡೆಗೊಂಡರ, ಮಹಲಿಂಗಪ್ಪ ಅಕ್ಕಿವಳ್ಳಿ, ರಾಘವೇಂದ್ರ ಹುನುಗಂದ, ಮೋದಿನಸಾಬ್ ನಾಗರವಳ್ಳಿ, ರಾಮನಗೌಡ ಪಾಟೀಲ, ಕರಸಬಪ್ಪ ಮಾಕೊಪ್ಪ, ಚನ್ನಪ್ಪ ಪಾವಲಿ, ಶ್ರೀಕಾಂತ ದುಂಡಣ್ಣನವರ ಸೇರಿದಂತೆ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ