ಸಾಧು ಲಿಂಗಾಯತರು ಸ್ವಾರ್ಥ ತೊರೆದು ಒಗ್ಗೂಡಿ


Team Udayavani, Apr 11, 2021, 7:06 PM IST

ಹಜಹಜಹಜಹಜಹಜಹಜಹಜಹಜಹಜಹಜಹಜಹಜಹಜಹಜ

ಬ್ಯಾಡಗಿ : ಶ್ರೀಮಂತ ಭಕ್ತರಿಂದ ಮಠಗಳನ್ನು ಅಳೆಯುವಂತಹ ಕೆಲಸವಾಗಬಾರದು. ನಿಸ್ವಾರ್ಥ ದಾಸೋಹಿಗಳನ್ನು ಹೊಂದಿರುವ ಮಠಗಳೇ ಅತ್ಯಂತ ಶ್ರೇಷ್ಠ. ಸಾಧು ಲಿಂಗಾಯತ ಸಮಾಜದವರು ಇನ್ನಾದರೂ ಸ್ವಾರ್ಥದ ಗೋಡೆಗಳನ್ನು ಕಿತ್ತು ಹಾಕಿ ಎಲ್ಲರನ್ನೂ ಒಗ್ಗೂಡಿಸಬೇಕೆಂದು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶ್ರೀಗಳು ಕರೆ ನೀಡಿದರು.

ಪಟ್ಟಣದ ಶ್ರೀ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಸಾಧು ಲಿಂಗಾಯತ ಸಮಾಜದ ತಾಲೂಕು ಘಟಕ ಆಯೋಜಿಸಿದ್ದ ಸಮಾಜದ ಹಿರಿಯ ನಾಗರಿಕರಿಗೆ ಸನ್ಮಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಹಣದ ಶ್ರೀಮಂತಿಕೆ ಇರುವ ಭಕ್ತರಿಂದ ಶ್ರೀಮಠ ಏನನ್ನೂ ನಿರೀಕ್ಷಿಸುವುದಿಲ್ಲ. ಪ್ರಸ್ತುತ ದಿನದಲ್ಲಿ ದಾನಿಗಳ ಬದಲಿಗೆ ದಾಸೋಹಿಗಳ ಅವಶ್ಯಕತೆಯಿದೆ. ಸಾಲದ ಸುಳಿಯಲ್ಲಿ ಸಿಲುಕಿದಾಗ್ಯೂ ಕೋಟ್ಯಧಿ  àಶ್ವರರನ್ನು ಹೊಂದಿರುವ ಮಠವೆಂದು ಕರೆಸಿಕೊಂಡಿದೆ. ಹೃದಯ ಶ್ರೀಮಂತಿಕೆಯ ಭಕ್ತರು ಒಂದಿಲ್ಲೊಂದು ದಿನ ಶ್ರೀಮಠಕ್ಕೆ ಆಸರೆಯಾಗಿ ನಿಲ್ಲುವ ವಿಶ್ವಾಸವಿದೆ ಎಂದರು.

ಮಠ ಬೇಡ-ಅನುಭವ ಮಂಟಪ ಕಟ್ಟಿ: ಹನ್ನರಡನೇ ಶತಮಾನದಲ್ಲಿ ಲಿಂಗಾಯತ ಧರ್ಮಕ್ಕೆ ಮುನ್ನುಡಿ ಬರೆದ ಬಸವಾದಿ ಶರಣರ ನುಡಿಯಂತೆ ಸಿರಿಗೆರೆ ಮಠ ವರ್ಗರಹಿತ, ಜಾತ್ಯತೀತ ತಳಹದಿ ಮೇಲೆ ನಡೆಯುತ್ತಿದೆ. ಸಮಾಜಕ್ಕೆ ಸೇರಿದ ನಿವೇಶನದ ಜಾಗೆಯಲ್ಲಿ ಮಠ ಕಟ್ಟುವುದಕ್ಕಿಂತ ಅನುಭವ ಮಂಟಪ ಕಟ್ಟುವುದು ಉತ್ತಮ. ಇದಕ್ಕೆ ಅವಶ್ಯವಿರುವ ನೀಲನಕ್ಷೆಯನ್ನು ಶೀಘ್ರದಲ್ಲೇ ರಚಿಸುವುದಾಗಿ ತಿಳಿಸಿದರು.

ಉದ್ದೇಶ ಈಡೇರಲಿ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಸುರೇಶಗೌಡ ಪಾಟೀಲ, ಸಮಾಜದ ಕೆಲಸಕ್ಕೆಂದು ಪಟ್ಟಣದ ವಿದ್ಯಾನಗರದಲ್ಲಿ ಸುಮಾರು 3 ಕೋಟಿ ರೂ. ಬೆಲೆ ಬಾಳುವ 21ಗುಂಟೆಯಷ್ಟು ಜಾಗೆ ನೀಡಲಾಗಿದೆ. ಸಮಾಜದ ಎಲ್ಲ ಜನರು ಒಗ್ಗೂಡಿ ಆ ಜಾಗದಲ್ಲಿ ಕಟ್ಟಡ ನಿರ್ಮಿಸಲು ಮುಂದಾದಲ್ಲಿ ಸಂಪೂರ್ಣ ಸಹಕಾರವಿದೆ ಎಂದರು.

ಶಿಕ್ಷಣಕ್ಕೆ ಮಹತ್ವ ನೀಡಿದ ಮಠ: ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ರಾಜ್ಯಾಧ್ಯಕ್ಷ ಎಸ್‌. ಆರ್‌. ಪಾಟೀಲ ಮಾತನಾಡಿ, ಸಮಾಜದ ಜನರು ಶೈಕ್ಷಣಿಕವಾಗಿ ಅಭಿವೃದ್ಧಿಯಾದಲ್ಲಿ ದೇಶದ ಉನ್ನತಿಗೆ ಕಾರಣವಾಗಲಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ ಹಿನ್ನೆಲೆಯಲ್ಲಿ ವಿಶ್ವದೆಲ್ಲೆಡೆ ತನ್ನದೇ ಆದ ಭಕ್ತ ಸಮೂಹವನ್ನು ಹೊಂದಿದೆ ಎಂದರು.

ರಾಜಕಾರಣದ ಒಳಸುಳಿಗೆ ಸಮಾಜ ಸಿಲುಕಿಸಬೇಡಿ: ಮುಖಂಡ ಗಂಗಣ್ಣ ಎಲಿ ಮಾತನಾಡಿ, ಸಾಧು ಲಿಂಗಾಯತ ಸಮಾಜಕ್ಕೆ ಕೃಷಿಕ ವೃತ್ತಿ ಮೂಲಾಧಾರವಾಗಿದ್ದು, ಇಂದಿಗೂ ಅದನ್ನೇ ನೆಚ್ಚಿಕೊಂಡಿದೆ. ಆದರೆ, ನಮ್ಮಲ್ಲಿರುವ ಭಿನ್ನಾಭಿಪ್ರಾಯಕ್ಕೆ ಸಮಾಜ ಬಲಿಕೊಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ರಾಜಕಾರಣದ ಒಳಸುಳಿಗೆ ಸಮಾಜವನ್ನು ಸಿಲುಕಿಸದಂತೆ ಮನವಿ ಮಾಡಿದರು.

ಹೊಣೆಗಾರಿಕೆ ಎಚ್ಚರಿಸಿದ ತರಳಬಾಳು ಹುಣ್ಣಿಮೆ: ಪ್ರಾಸ್ತಾವಿಕವಾಗಿ ಮಾತನಾಡಿದ ನ್ಯಾಯವಾದಿ ಪ್ರಕಾಶ ಬನ್ನಿಹಟ್ಟಿ, ಸಿರಿಗೆರೆ ಸಂಸ್ಥಾನ ಮಠ ರಾಜ್ಯದೆಲ್ಲೆಡೆ ನಡೆಸುತ್ತಿರುವ ತರಳಬಾಳು ಹುಣ್ಣಿಮೆಗಳಿಂದ ಸಮಾಜದ ಜನರ ಮೇಲಿರುವ ಹೊಣೆಗಾರಿಕೆಯನ್ನು ಎಚ್ಚರಿಸುತ್ತಾ ಬಂದಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜದ ಹಿರಿಯ ನಾಗರಿಕರು, ಪ್ರತಿಭಾನ್ವಿತ ವಿದ್ಯಾರ್ಥಿಗಳು, ನಿವೃತ್ತ ಯೋಧರು ಸೇರಿದಂತೆ ಅತ್ಯುನ್ನತ ಹುದ್ದೆ ಅಲಂಕರಿಸಿದವರನ್ನು ಸನ್ಮಾನಿಸಲಾಯಿತು. ತಾಲೂಕು ಅಧ್ಯಕ್ಷ ಡಾ.ಎಸ್‌.ಎಸ್‌.ಬಿದರಿ ಅಧ್ಯಕ್ಷತೆ ವಹಿಸಿದ್ದರು.ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಛತ್ರದ, ಶಂಕರಗೌಡ ಪಾಟೀಲ, ಪುಟ್ಟಪ್ಪ ಛತ್ರದ, ಉಳಿವೆಪ್ಪ ಕಬ್ಬೂರ, ದಾನಪ್ಪ ಚೂರಿ, ಎಂ.ಬಿ.ಹುಚಗೊಂಡರ, ನ್ಯಾಯವಾದಿ ಸುರೇಶ ಕಾಟೇನಹಳ್ಳಿ, ಕಿರಣ ಗಡಿಗೋಳ, ನಿಂಗಣ್ಣ ಬಿದರಿ, ಚಂದ್ರು ಹುದ್ದಾರ, ಆನಂದ ಸಂಕಣ್ಣರ, ವಿರೇಶ ಮತ್ತಿಹಳ್ಳಿ, ಜಗದೀಶ ಪಾಟೀಲ, ಮಹಾಂತೇಶ ಎಲಿ ಇನ್ನಿತರರು ಉಪಸ್ಥಿತರಿದ್ದರು. ನಿವೃತ್ತ ಪ್ರಾಚಾರ್ಯ ಕೆ.ಜಿ.ಖಂಡೇಬಾಗೂರ ಸ್ವಾಗತಿಸಿ, ಪ್ರೊ.ಸಿ. ಶಿವಾನಂದಪ್ಪ ನಿರೂಪಿಸಿ, ಆರ್‌.ಎಂ. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.