“ಸನಾತನ ಧರ್ಮ ಸಂಸ್ಕೃತಿ ಮರೆಯಬೇಡಿ’: ಶ್ರೀ ಶಿವಾನಂದ ಭಾರತೀ ಸ್ವಾಮೀಜಿ ಸಲಹೆ
Team Udayavani, Oct 4, 2020, 3:01 PM IST
ಶಿಗ್ಗಾವಿ: ಇಂದಿನ ಯುವಜನರು ಪಾಶ್ಚಿಮಾತ್ಯ ಸಂಸ್ಕೃತಿಯ ಆಕರ್ಷಣೆಗೆ ಒಳಗಾಗಿ ಸನಾತನ ಧರ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ಬೆಂಗಳೂರಿನ ಜಗದ್ಗುರು ಭಗವತ್ಪಾದ ಶ್ರೀ ಆದಿ ಶಂಕರಾಚಾರ್ಯ ಅದ್ವೈತ ಪೀಠದ ಶ್ರೀ ಶಿವಾನಂದ
ಭಾರತೀ ಸ್ವಾಮಿಗಳು ಹೇಳಿದರು. ಪಟ್ಟಣದ ಪ್ರಕಾಶ ದೇಸಾಯಿ ಜಮೀನಿನಲ್ಲಿ ಲೋಕಕಲ್ಯಾಣಾರ್ಥವಾಗಿ ಅಧಿಕ ಮಾಸದ ಪ್ರಯುಕ್ತ ಶ್ರೀ ಸ್ವಯಂಭೂ ಸೀತಾರಾಮ ಸಹಿತ ಹನುಮಂತ (ಆಂಜನೇಯ) ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ 33ದೇಶಿ ತಳಿಯ ಗೋ ಪೂಜೆ, ಹೋಮ-ಹವನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಯಾಂತ್ರೀಕೃತ ಜಗತ್ತಿನಲ್ಲಿ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿ ಎಲ್ಲೆಡೆ ನಾಸ್ತಿಕತೆ ಕಾಣುವಂತಾಗಿದೆ. ಧರ್ಮವಂತರು ನಮ್ಮ ಸನಾತನ ಧರ್ಮವನ್ನು ಮರೆಯುತ್ತಿದ್ದಾರೆ. ಯತಿಗಳು ಮತ್ತು ಸಾಧು, ಸಂತರು ಸನಾತನ ಹಿಂದೂ ಧರ್ಮವನ್ನು ಉಳಿಸಿ
ಬೆಳೆಸಬೇಕಾದದ್ದು ಪ್ರಸ್ತುತ ಅವಶ್ಯಕತೆ ಇದೆ ಎಂದರು.
ಇದನ್ನೂ ಓದಿ:ಮತ್ತೊಂದು ರನ್ ಮಳೆಗೆ ಶಾರ್ಜಾ ರೆಡಿ: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ
ಆದಿ ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿಯೇ ಅಖಂಡ ಭಾರತದಲ್ಲಿ ಸಂಚರಿಸಿ ಸನಾತನ ಧರ್ಮದ ಉದ್ಧಾರಕ್ಕಾಗಿ 32 ವರ್ಷಗಳ ಕಾಲ ವೇದಗಳನ್ನು ಪ್ರಚಾರ ಮಾಡಿ, ಹಿಂದೂ ಧರ್ಮಸಾರ ತಿಳಿಸಿದ್ದಾರೆ. ಆಚಾರ, ವಿಚಾರಗಳನ್ನು ಲೋಕಕ್ಕೆ ಅರ್ಪಣೆ
ಮಾಡುವುದರಿಂದ ಸನಾತನ ಧರ್ಮವನ್ನು ಪಾಲನೆ ಮಾಡಲು ಪ್ರೇರಣೆಯಾಗುತ್ತದೆ ಎಂದರು. ಉತ್ತರ ಕರ್ನಾಟಕದಲ್ಲಿ ಆದಿಶಂಕರಾಚಾರ್ಯರ ಪೀಠದ ಹಲವಾರು ಶಾಖೆಗಳನ್ನು ತೆರೆಯುವ ಇಚ್ಛೆಯಿದೆ. ಸ್ಥಳೀಯ ಮನೋಜ ದೇಸಾಯಿ
ಕುಟುಂಬಸ್ಥರು ಪೀಠ ಸ್ಥಾಪನೆ ಮಾಡುವಂತೆ ಕೇಳಿಕೊಂಡಿದ್ದಾರೆ. ತಾಯಿ ಅನುಗ್ರಹದಂತೆ ಪೀಠ ಸ್ಥಾಪನೆ ಮಾಡುತ್ತೇವೆ. ಭಕ್ತವೃಂದ ನಮ್ಮೊಂದಿಗೆ ಸಹಕರಿಸಬೇಕೆಂದರು. ನರ್ಮದಾ ಪರಾಕ್ರಮಿ ಶ್ರೀ ಕೃಷ್ಣ ಸಂಪಗಾಂವಕರ ಅವರಿಂದ ಸತ್ಸಂಗ ಹಾಗೂ
ವೇದಮೂರ್ತಿ ವಿನಾಯಕ ಭಟ್ಟ ಹಂಪಿಹೊಳಿ ಅಧಿಕ ಮಾಸದ ಮಹಿಮೆ ಕುರಿತು ಮಾತನಾಡಿದರು.
ಮನೋಜ ಪ್ರಕಾಶ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸದಸ್ಯ ಮುಕುಂದ ಭಿಕಾಜಿ ಅಧ್ಯಕ್ಷತೆ ವಹಿಸಿ
ಮಾತನಾಡಿದರು. ಟ್ರಸ್ಟ್ನಿಂದ ಶ್ರೀ ಸತ್ಯನಾರಾಯಣ ಕಥಾ ಪುಸ್ತಕದ ಮೂರನೇ ಆವೃತ್ತಿ ಮತ್ತು ಪಂಚಮುಖೀ ಆಂಜನೇಯನ ಭಾವಚಿತ್ರ ಲೋಕಾರ್ಪಣೆ ಮಾಡಲಾಯಿತು. ಕುಂದಗೋಳದ ಕೃಷ್ಣರಾವ್ ಕುಲಕರ್ಣಿ ಮತ್ತು ರುಕ್ಮಿಣಿಬಾಯಿ ಕುಲಕರ್ಣಿ ಅವರ ಮಕ್ಕಳು ಸದ್ಭಕ್ತರಿಗೆ ಉಚಿತವಾಗಿ ವಿತರಿಸಲಾಯಿತು. ಇದೆ ವೇಳೆ ಗೋ ಪಾಲಕರನ್ನು ಸನ್ಮಾನಿಸಲಾಯಿತು. ಧಾರವಾಡ ದತ್ತ
ಪಾದಯಾತ್ರಿ ಆನಂದ ಕುಲಕರ್ಣಿ, ಡಿ.ಕೆ.ಕುಲಕರ್ಣಿ, ನಿವೃತ್ತ ಗ್ರಂಥ ಪಾಲಕ ರಾಮಚಂದ್ರ ಚಾಕಲಬ್ಬಿ, ತಿಪ್ಪಣ್ಣ ಮಜ್ಜಗಿ, ಶಂಕರ ಪಾಟೀಲ, ಗುರುಪ್ರಕಾಶ ಕುಲಕರ್ಣಿ, ಟ್ರಸ್ಟ್ ಸದಸ್ಯರು, ಭಕ್ತಾದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?