ಸತ್ಯದಿಂದ ನಡೆಯುವುದೇ ಧರ್ಮ


Team Udayavani, Mar 21, 2019, 11:26 AM IST

21-march-19.jpg

ಸ‌ವಣೂರು: ಧರ್ಮ ಪ್ರತಿಯೊಂದು ಜೀವರಾಶಿಗೆ ಸಂಬಂಧಿಸಿದ್ದು. ಧರ್ಮ ಯಾವುದೇ ಗ್ರಂಥ ಪುರಾಣವಲ್ಲ; ಅದು ದೈನಂದಿನ ಪ್ರತಿಯೊಬ್ಬನ ಕರ್ತವ್ಯ. ವ್ಯಕ್ತಿ ಸತ್ಯದಿಂದ ನಡೆದು ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಾನೋ ಅದೇ ಧರ್ಮ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ರಾಜದೇಶಿಕೇಂದ್ರ ಭಗವತ್ಪಾದಂಗಳವರು ತಿಳಿಸಿದರು. ಜಗದ್ಗುರು ರೇಣುಕ ಮಂದಿರದಲ್ಲಿ ಬುಧವಾರ ಜರುಗಿದ ಜಗದ್ಗುರು ರೇಣುಕಾಚಾರ್ಯರ ಜಯಂತಿ, ಯುಗಮಾನೋತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಧರ್ಮ ವಿಷಯದಲ್ಲಿ ಗೊಂದಲ ಬೇಡ: ವಿದ್ಯಾವಂತರಾದವರಲ್ಲಿ ಮತ್ತೊಬ್ಬರನ್ನು  ಗೌರವಿಸುವಂತ ಗುಣಗಳಿರಬೇಕೆ ಹೊರತು ತೆಗಳುವಂತ ಗುಣಗಳು ಇರಬಾರದು. ಧರ್ಮದ ವಿಚಾರ ಬಳಸಿಕೊಂಡು ಗೊಂದಲ ಸೃಷ್ಟಿಸದೇ ವೀರಶೈವ ಲಿಂಗಾಯತ ಒಂದೇ, ವಿಶ್ವವೇ ನಮ್ಮ ಬಂಧು-ಬಳಗ ಎನ್ನುವ ಮನೋಭಾವನೆ ಬೆಳೆಸಿಕೊಳ್ಳಬೇಕು. ವೀರಶೈವ ಲಿಂಗಾಯತ ಧರ್ಮ ಪ್ರತ್ಯೇಕತೆ ವಿಷಯ ಮುಗಿದ ಅಧ್ಯಾಯ. ಅದರತ್ತ ಗಮನ ಕೊಡದಿರುವಂತಹ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ಥಿತಪ್ರಜ್ಞೆಯಿಂದ ಜೀವನ ನಡೆಸಿ: ಸತಿ-ಪತಿಗಳು ಸ್ಥಿತಪ್ರಜ್ಞೆಯಿಂದ ಜೀವನ ನಡೆಸಿದಲ್ಲಿ ಸಮರಸ
ಬದುಕು ಕಾಣಲು ಸಾಧ್ಯ. ಸಾಮೂಹಿಕ ವಿವಾಹದಲ್ಲಿ 11 ಜೊತೆ ವಿವಾಹ ಮಾಡಿ ಬಡವರ ಸುಮಾರು 22 ಲಕ್ಷ ಹಣ ಉಳಿಸಿದ ಕೀರ್ತಿ ಸ್ಥಳೀಯ ಸೇವಾ ಸಮಿತಿಗೆ ಸಲ್ಲುತ್ತದೆ ಎಂದರು. ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ದಂಪತಿಗಳು ಪರಸ್ಪರ ಹೊಂದಾಣಿಕೆ ಮನೋಭಾವನೆಯಿಂದ ಸುಖಕರ ಜೀವನ ನಡೆಸಬೇಕು ಎಂದರು.

ಬಂಕಾಪುರ ಅರಳಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು, ಗಂಜಿಗಟ್ಟಿಯ ಶಿವಲಿಂಗೇಶ್ವರ ಶಿವಾಚಾರ್ಯರು, ಹಿರೇಮಣಕಟ್ಟಿಯ ವಿಶ್ವಾರಾಧ್ಯ ಶಿವಾಚಾರ್ಯರು, ನೆಗಳೂರಿನ ಗುರುಶಾಂತೇಶ್ವರ ಶಿವಾಚಾರ್ಯರು, ಕೂಡಲದ ಗುರುಮಹೇಶ್ವರ ಶಿವಾಚಾರ್ಯರು, ಹತ್ತಿಮತ್ತೂರಿನ ನಿಜಗುಣ ಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ರೇಣುಕಚಾರ್ಯ ಮಂದಿರದ ಸೇವಾ ಸಮಿತಿ ಅಧ್ಯಕ್ಷ ರವತಪ್ಪ ಬಿಕ್ಕಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ಕೆಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಸ್‌. ವೈ. ಪಾಟೀಲ, ಎಪಿಎಂಸಿ ನಿರ್ದೇಶಕ ಮಹೇಶ ಸಾಲಿಮಠ, ಪುರಸಭೆ ಸದಸ್ಯ ಮಹೇಶ ಮುದಗಲ್‌, ಗಣ್ಯ ವರ್ತಕರಾದ ಪುಟ್ಟಯ್ಯ ಕಲ್ಮಠ, ಸುಭಾಸ ಗಡೆಪ್ಪನವರ, ಕರವೇ ಅಧ್ಯಕ್ಷ ಪರಶುರಾಮ ಈಳಗೇರ, ನಾಗರಾಜ ಬಾಳಿಕಾಯಿ ಇದ್ದರು. ಶಿಕ್ಷಕ ಬಸವರಾಜ ಚಳ್ಳಾಳ ಹಾಗೂ ಪ್ರವೀಣ ಚರಂತಿಮಠ ಕಾರ್ಯಕ್ರಮ ನಿರ್ವಹಿಸಿದರು.

ಮೆರವಣಿಗೆ
ಬುಧವಾರ ಪ್ರಾಥಃಕಾಲ ಜಗದ್ಗುರು ರೇಣುಕಾಚಾರ್ಯರ ಮೂರ್ತಿಯ ಉತ್ಸವ ಹಾಗೂ ಉಜ್ಜಯಿನಿ ಜಗದ್ಗುರುಗಳ ಮೆರವಣಿಗೆ ಮತ್ತು 108 ಪೂರ್ಣಕುಂಭ ಮೇಳ ಪಟ್ಟಣದ ಬೀದಿಗಳಲ್ಲಿ ಸಂಚರಿಸಿ ವಾದ್ಯಗಳೊಂದಿಗೆ ರೇಣುಕಾಚಾರ್ಯ ಮಂದಿರ ತಲುಪಿತು. ನಂತರ ನಡೆದ ಸಾಮೂಹಿಕ ವಿವಾಹದಲ್ಲಿ 11 ನವ ದಂಪತಿ ಹೊಸ ಜೀವನಕ್ಕೆ ಕಾಲಿಟ್ಟರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.