ಕನ್ನಡ ಸಾಹಿತ್ಯ ಅರಿತು ನಡೆದರೆ ಬದುಕು ಸಾರ್ಥಕ
Team Udayavani, Jan 11, 2019, 10:05 AM IST
ಸವಣೂರು: ಕನ್ನಡ ಸಾಹಿತ್ಯ ಕೇವಲ ಓದಿದರಷ್ಟೇ ಸಾಲದು, ಅದನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡು ಬದಕು ಕಟ್ಟಿಕೊಂಡಾಗ ಮಾತ್ರ ಕನ್ನಡಿಗರಾದ ನಮಗೆ ಕನ್ನಡ ನಾಡಿನಲ್ಲಿ ಹುಟ್ಟಿದ ಸಾರ್ಥಕತೆ ಸಿಗಲು ಸಾಧ್ಯ ಎಂದು ಹತ್ತಿಮತ್ತೂರ ವಿರಕ್ತಮಠದ ನಿಜಗುಣ ಶಿವಯೋಗಿಗಳು ತಿಳಿಸಿದರು.
ಪಟ್ಟಣದ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ವಿ.ಕೃ.ಗೋಕಾಕ ವೇದಿಕೆಯಲ್ಲಿ ಜರುಗಿದ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
ಸವಣೂರು ತಾಲೂಕು ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗೆ ಜಗತ್ತಿನಾದ್ಯಂತ ಹೆಸರಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಈ ಹಿರಿಮೆ ತಂದುಕೊಟ್ಟ ಕೀರ್ತಿ ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ| ವಿ.ಕೃ.ಗೋಕಾಕ ಅವರಿಗೆ ಸಲ್ಲುತ್ತದೆ. ಅನೇಕ ಖ್ಯಾತ ಸಾಹಿತಿಗಳು ಹುಟ್ಟಿದ ಈ ನೆಲದಲ್ಲಿ ಇನ್ನೂ ಹೆಚ್ಚು ಹೆಚ್ಚು ಪ್ರತಿಭಾನ್ವಿತ ಸಾಹಿತಿಗಳ ಉಗಮವಾಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಸವಣೂರು ಧ್ರುವತಾರೆಯಾಗಿ ಮೆರೆಯುವಂತಾಗಬೇಕು ಎಂದು ಆಶಿಸಿದರು. ಭಾವೈಕ್ಯದ ಇತಿಹಾಸ ಹೊಂದಿದ ಈ ನೆಲದ ಮಕ್ಕಳು ಕನ್ನಡ ನಾಡು, ನುಡಿಗಾಗಿ ಹಗಲಿರುಳು ಶ್ರಮಿಸಬೇಕು ಎಂದು ಹೇಳಿದರು.
ಕನ್ನಡ ನಾಡಿನ ಹಿರಿಮೆಯನ್ನು ಎತ್ತಿಹಿಡಿದು ಕನ್ನಡಕ್ಕೆ ಹೆಚ್ಚಿನ ಕೊಡುಗೆಯನ್ನು ನೀಡಿದ ನಾಡು ನಮ್ಮ ಹಾವೇರಿ ಜಿಲ್ಲೆ. ಇಂತಹ ನೆಲದಲ್ಲಿ ಜನಿಸಿದ ನಾವು ಪುಣ್ಯವಂತರು. ಆದ್ದರಿಂದ, ಪ್ರತಿಯೊಬ್ಬರು ಕನ್ನಡ ನಾಡಿನ ಭಾಷೆ, ಕಲೆ, ಸಾಹಿತ್ಯ, ಕೃಷಿ, ಸೇರಿದಂತೆ ನಮ್ಮ ಪೂರ್ವಜರು ಉಳಿಸಿಕೊಂಡು ಬಂದ ಸಂಸ್ಕೃತಿಯನ್ನು ಬೆಳೆಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಪ್ರಗತಿಯನ್ನು ಹೊಂದುವುದರ ಜತೆಗೆ ಸಾಹಿತ್ಯಕ್ಷೇತ್ರದಲ್ಲಿ ತೊಡಗಿಕೊಳ್ಳುವ ಮೂಲಕ ಹೊಸ ಹೊಸ ಪ್ರಯೋಗಗಳೊಂದಿಗೆ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಇನ್ನೂ ಹೆಚ್ಚು ಶ್ರೀಮಂತಗೊಳಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲ್ಲೂಕಾಧ್ಯಕ್ಷ ಪ್ರಭು ಅರಗೋಳ ವಹಿಸಿದ್ದರು. ಸಾನ್ನಿಧ್ಯವನ್ನು ದೊಡ್ಡಹುಣಸೇಕಲ್ಮಠದ ಚನ್ನಬಸವ ಸ್ವಾಮೀಜಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ಡಾ| ಶ್ರೀಕಂಠಗೌಡ ಅಯ್ಯನಗೌಡ್ರ, ಸಾಹಿತಿ ಗಂಗಾಧರ ನಂದಿ, ಬಸನಗೌಡ ಕೊಪ್ಪದ, ಮಲ್ಲಾರೆಪ್ಪ ತಳ್ಳಿಹಳ್ಳಿ, ಸಂಗಪ್ಪ ಎರೇಶಿಮಿ, ಶಿವಪುತ್ರಪ್ಪ ಕಲಕೋಟಿ, ಗಂಗಾಧರ ಬಾಣದ, ಆಹಾರ ಸಮಿತಿ ಅಧ್ಯಕ್ಷ ವಿಶ್ವನಾಥ ಹಾವಣಗಿ, ಚನ್ನಬಸಯ್ಯ ಪ್ರಭಯ್ಯನವರಮಠ, ಬಸನಗೌಡ ಪಾಟೀಲ, ಶಿಕ್ಷಕ ವಿ.ಬಿ.ದೊಂಗಡೆ, ಎಸ್.ವಿ.ಇಚ್ಚಂಗಿಮಠ, ಎನ್.ಕೆ.ಪಾಟೀಲ, ಡಿ.ಎಫ್.ಬಿಂದಲಗಿ, ಜೀಶಾನಖಾನ್ ಫಠಾಣ, ಸಿ.ಎನ್.ಪಾಟೀಲ, ಬಿ.ಡಿ.ಬಜಂತ್ರಿ, ಎಸ್.ಬಿ.ದೊಡ್ಡಮನಿ, ಶಿವನಾಗಯ್ಯ ಮಠಪತಿ, ರವಿ ತಾಯಮ್ಮನವರ ಇದ್ದರು. ಕಾರ್ಯಕ್ರಮವನ್ನು ಶಿಕ್ಷಕ ವಿದ್ಯಾದರ ಕುತನಿ, ಸಿ.ವಿ.ಗುತ್ತಲ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ