ಕೃಷಿ ಅಧಿಕಾರಿ ವರ್ತನೆಗೆ ಸದಸ್ಯರ ಆಕ್ರೋಶ


Team Udayavani, Feb 13, 2019, 11:04 AM IST

13-february-23.jpg

ಸವಣೂರು: ಕೃಷಿ ಹೊಂಡದ ಫಲಾನುಭವಿಗಳ ಪಟ್ಟಿಯನ್ನು ಸಾಮಾನ್ಯ ಸಭೆಗೆ ತರುವಂತೆ ಹಿಂದಿನ ಕೆಡಿಪಿ ಸಭೆಯಲ್ಲಿ ತಾಕೀತು ಮಾಡಿದ್ದರೂ ಏಕೆ ತಂದಿಲ್ಲ ಎಂದು ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ಕೃಷಿ ಇಲಾಖೆ ಅಧಿಕಾರಿ ಪ್ರದೀಪ ಕಿವಟೆ ಅವರಿಗೆ ತರಾಟೆ ತೆಗೆದುಕೊಂಡರು.

ಪಟ್ಟಣದ ತಾಪಂ ಕಚೇರಿ ಸಭಾಭವನದಲ್ಲಿ ಮಂಗಳವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ವರದಿ ಓದಲು ಮುಂದಾದ ಕೃಷಿ ಇಲಾಖೆ ಅಧಿಕಾರಿಗೆ ಮಾಹಿತಿ ತೆಗೆದುಕೊಂಡು ಬರಲು ಕಟ್ಟುನಿಟ್ಟಾಗಿ ಸೂಚನೆ ನೀಡಿದರೂ, ಮಾಹಿತಿ ಇಲ್ಲದೇ ಏಕೆ ಬರುತ್ತೀರಿ? ತಾಪಂ ಸಭೆ ಎಂದರೆ ನಿಮಗೆ ಉಡಾಫೆ ಮಾತಾಗಿದೆ. ನೀವು ಸಭೆಗೆ ತಲೆನೋವಾಗಿದ್ದೀರಿ ಎಂದು ಆಕೋಶ ವ್ಯಕ್ತಪಡಿಸಿದರು. ಅಧಿಕಾರಿ ಮತ್ತೂ ಆಯ್ತು ಸರ್‌, ತಂದು ತೋರಿಸುತ್ತೇನೆ ಎಂದು ಉದಾಸೀನದ ಉತ್ತರ ನೀಡಲು ಮುಂದಾದ ಕೂಡಲೇ ಗರಂ ಆದ ಸದಸ್ಯ ಬಸವರಾಜ ಕೋಳಿವಾಡ, ನಿಮಗೆ ಬೇಕಾದ ಫಲಾನುಭವಿಗಳನ್ನು ಆಯ್ಕೆಗೊಳಿಸಿದ್ದೀರಿ, ಅದಕ್ಕೆ ನೀವು ಪಟ್ಟಿ ತಂದಿಲ್ಲ. ನಿಮ್ಮಿಂದಾಗಿ ಎಷ್ಟೋ ರೈತರು ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಎಷ್ಟೇ ಹೇಳಿದರೂ ಪ್ರತಿ ಸಭೆಗೂ ಮಾಹಿತಿ ಇಲ್ಲದೇ ಹಾಜರಾಗುವ ಮೂಲಕ ಸಭೆಗೆ ಅವಮಾನ ಮಾಡುತ್ತಿದ್ದಾರೆ. ಈ ಕುರಿತು ಅವರ ಮೇಲೆ ಕ್ರಮ ಕೈಗೊಳ್ಳಲು ಅಧ್ಯಕ್ಷರ ಅಪ್ಪಣೆಯ ಮೇರೆಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ತೋಟಗಾರಿಕಾ ಇಲಾಖೆ ಅಧಿಕಾರಿಗೆ ತಾಪಂ ಅಧ್ಯಕ್ಷ ತೆಂಗಿನ ಸಸಿಗಳ ವಿತರಣೆಗೆ ಫಲಾನುಭವಿಗಳನ್ನು ಆಯ್ಕೆ ಮಾಡದೇ ಮುಂಚಿತವಾಗಿ ಬಿಲ್‌ ತಯಾರಿಸಿ ಇಲಾಖೆಗೆ ಹೇಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಪ್ರಶ್ನೆಗೆ ಉತ್ತರಿಸಲಾಗದೇ ಅಧಿಕಾರಿ ಸುಮ್ಮನೆ ನಿಂತುಕೊಂಡರು. ಉಪಾಧ್ಯಕ್ಷೆ ಜಯಶೀಲ ರೊಟ್ಟಿಗವಾಡ ಮಾತನಾಡಿ, ಒಳ್ಳೆಯ ಸಸಿಗಳನ್ನು ತರಿಸಿ ವಿತರಣೆ ಮಾಡುವಂತೆ ಸೂಚನೆ ನೀಡಿದರು.

ವಲಯ ಅರಣ್ಯ ಅಧಿಕಾರಿ ವರದಿ ನೀಡಿ 2018-19 ನೇ ಸಾಲಿಗೆ ಎಸ್‌ಸಿಪಿ ಹಾಗೂ ಎಸ್‌ಟಿಪಿ ಯೋಜನೆಯಡಿ ಸವಣೂರು ತಾಲೂಕಿನ ಅರಣ್ಯಕ್ಕೆ ಹೊಂದಿದ ಅಂಚಿನ ಹಳ್ಳಿಗಳ ಫಲಾನುಭವಿಗಳಿಗೆ ಎಲ್‌ಪಿ ಗ್ಯಾಸ್‌ ವಿತರಣೆ ಕಾರ್ಯವಿದ್ದು, ಫಲಾನುಭವಿಗಳ ಆಯ್ಕೆಗಾಗಿ ಪಿಡಿಒಗಳಿಗೆ ಪತ್ರ ಬರೆಯಲಾಗಿದೆ ಎಂದರು. ಇದಕ್ಕೆ ತಾಪಂ ಅಧ್ಯಕ್ಷ ಪ್ರತಿಕ್ರಿಯೆ ನೀಡಿ, ತಾಪಂನಿಂದ ಆಯ್ಕೆಗೊಳಿಸಿದ ಫಲಾನುಭವಿಗಳಿಗೆ ನೀಡುವಂತೆ ಠರಾವು ಮಾಡಲು ಸೂಚಿಸಿದರು. ಇದಕ್ಕುತ್ತರಿಸಿದ ಅಧಿಕಾರಿ, ಇದನ್ನು ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದಾಗ, ಕೋಪಗೊಂಡ ಅಧ್ಯಕ್ಷ, ಹಾಗಾದರೆ, ನೀವೇಕೆ ಸಭೆಗೆ ಬಂದಿದ್ದೀರಿ? ಅವರನೇ ಕಳುಹಿಸಿ ಎಂದು ತರಾಟೆ ತೆಗೆದುಕೊಂಡರು.

ಸಹಕಾರ ಸಂಘಗಳ ರಾಜ್ಯ ಯೋಜನೆಯಡಿ ಸಂಘಗಳ ಪದಾಧಿಕಾರಿಗಳು ನೂತನ ಷೇರುದಾರರನ್ನಾಗಿ ಎಸ್‌ಸಿ, ಎಸ್‌ಟಿ ಹಾಗೂ ಅಲ್ಪ ಸಂಖ್ಯಾತರು ಸೇರಿದಂತೆ ವಿವಿಧ ಜನರನ್ನು ನೋಂದಾಯಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಹಕಾರ ಇಲಾಖೆಯ ಅಧಿಕಾರಿ ಎಸ್‌.ಬಿ. ಉಪ್ಪಿನ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ತಾಪಂ ಅಧ್ಯಕ್ಷ ಸುಬ್ಬಣ್ಣನವರ, ನೀವು ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ಯಾವ ಸಹಕಾರ ಸಂಘದವರು ಈ ಕುರಿತು ಆಕ್ಷೇಪ ವ್ಯಕ್ತ ಪಡಿಸುತ್ತಾರೋ ಅಂತವರ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಿಸಿ ನಾವು ನಿಮ್ಮೊಂದಿಗೆ ಬರುತ್ತೇವೆ ಎಂದರು.

ನಂತರ ಸಹಕಾರ ಸಂಘಗಳ ರಾಜ್ಯ ಯೋಜನೆಯಡಿ 2018-19ನೇ ಸಾಲಿನಲ್ಲಿ ತಾಲೂಕಿನ ವಿವಿಧ ಸಹಕಾರ ಸಂಘಗಳಲ್ಲಿ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು, ವಿಕಲಚೇತನರು ಸೇರಿದಂತೆ ವಿವಿಧ ಜಾತಿ, ಜನಾಂಗ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಹೊಸದಾಗಿ ಷೇರುದಾರರನ್ನಾಗಿ ನೋಂದಾಯಿಸಲು 626 ಜನರ ವಾರ್ಷಿಕ ಗುರಿಗೆ ಅನುಗುಣವಾಗಿ ಎಲ್ಲ ಸಹಕಾರಿ ಸಂಘಗಳಿಗೆ ಸಮನಾಗಿ ಹಂಚುವ ಮೂಲಕ ಆಯಾ ಗ್ರಾಮದಲ್ಲಿರುವ ವಿವಿಧ ಸಹಕಾರ ಸಂಘಗಳ ಸದಸ್ಯರನ್ನಾಗಿ ಆಯ್ಕೆಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಸಭೆಗೆ ವರದಿ ಸಲ್ಲಿಸಿದರು. ತಾಪಂ ಇಒ ಎಸ್‌ಎಂಡಿ ಇಸ್ಮಾಯಿಲ್‌, ತಾಪಂ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.