ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಯೋಜನೆ


Team Udayavani, Aug 16, 2021, 7:08 PM IST

Scholarship Scheme

ಹಾವೇರಿ: ನೂತನವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದ್ದು, ಕೃಷಿಪದವಿಗೆ ಶೇ.50ರಷ್ಟು ಸೀಟು ಕಾಯ್ದಿರಿಸಿ ಆದೇಶಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿರವಿವಾರ ನಡೆದ 75ನೇ ಸ್ವಾತಂತ್ರೊÂàತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಜಿಲ್ಲೆಯ ಹನುಮನಮಟ್ಟಿ ಕೃಷಿ ಪ್ರಾದೇಶಿಕಕೇಂದ್ರದ ಅಭಿವೃದ್ಧಿಗೆ ಐದು ಕೋಟಿ ರೂ.ಒದಗಿಸಲಾಗಿದೆ.

ಕೃಷಿಯ ಸಮಗ್ರ ಬೆಳೆವಣಿಗೆಗೆಎಲ್ಲ ಆದ್ಯತೆ ನೀಡಲಾಗುವುದು. ನನ್ನ ಬೆಳೆ ನನ್ನಹಕ್ಕು ಯೋಜನೆಯಡಿ ರೈತರೇ ತಮ್ಮ ಬೆಳೆಯನ್ನುನೋಂದಾಯಿಸಿಕೊಳ್ಳು ಅವಕಾಶ ಕಲ್ಪಿಸಲಾಗಿದೆ. ಕಳೆದವರ್ಷ ಬೆಳೆ ಸಮೀಕ್ಷೆ ಉತ್ಸವ ಕಾರ್ಯಕ್ರಮದಲ್ಲಿ 80ಲಕ್ಷ ಪ್ಲಾಂಟ್‌ಗಳನ್ನು ಸ್ವತಃ ರೈತರೇ ಸಮೀಕ್ಷೆ ನಡೆಸಿದ್ದಾರೆ.ಈ ವರ್ಷ ಸ್ವತಃ ರೈತರೇ ಸಮೀಕ್ಷೆ ಮಾಡುವ ಮೂಲಕನನ್ನ ಬೆಳೆ ನನ್ನ ಹಕ್ಕು ಚಲಾಯಿಸಬೇಕೆಂದು ಮನವಿಮಾಡಿದರು.ಪ್ರಧಾನಮಂತ್ರಿಗಳು ಆತ್ಮನಿರ್ಭರ ಯೋಜನೆಯಡಿಕೃಷಿ ಮೂಲಭೂತ ಸೌಕರ್ಯಕ್ಕಾಗಿ ಒಂದು ಲಕ್ಷಕೋಟಿ ಅನುದಾನ ಮೀಸಲಿಟ್ಟಿದ್ದಾರೆ.

ಅದರಲ್ಲಿ10 ಸಾವಿರ ಕೋಟಿ ಆಹಾರ ವಸ್ತುಗಳ ಉತ್ಪಾದನೆ,ಸಂಸ್ಕರಣೆಗೆ ಅನುದಾನ ಒದಗಿಸಲಾಗಿದೆ. ಇದರಿಂದಆಹಾರದ ದೃಢತೆ ಅಥವಾ ಸಮತೋಲನ ಕಾಪಾಡಲುಸಾಧ್ಯವಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ 10 ಕೋಟಿ ವೆಚ್ಚದಲ್ಲಿ 10 ಕೃಷಿಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

18,654ಹೆಕ್ಟೇರ್‌ಗೆ ಸ್ಪಿಂಕ್ಲರ್‌ ಘಟಕಗಳನ್ನು ವಿತರಿಸಲಾಗಿದೆ.ಸಹಾಯಧನದಡಿ 30 ಕೃಷಿ ಯಂತ್ರೋಪಕರಣಬ್ಯಾಂಕ್‌ 8,878 ರೈತರಿಗೆ ಸ್ವಯಂ ಚಾಲಿತ ಹಾಗೂಟ್ರಾÂಕ್ಟರ್‌ ಚಾಲಿತ ಉಪಕರಣಗಳನ್ನು ವಿತರಿಸಲಾಗಿದೆಎಂದರು.ಕೋವಿಡ್‌ನಿಂದ ತೊಂದರೆಗೊಳಗಾದ 58 ಸಾವಿರಕಾರ್ಮಿಕರಿಗೆ ಆಹಾರ ಕಿಟ್‌, ಒಂಬತ್ತು ಸಾವಿರಕಾರ್ಮಿಕರಿಗೆ ಕೋವಿಡ್‌ ಸುರûಾ ಕಿಟ್‌ಗಳು, 98,297ಕಟ್ಟಡ ಕಾರ್ಮಿಕರಿಗೆ ತಲಾ ಮೂರು ಸಾವಿರದಂತೆಹಾಗೂ 35,094 ಅಸಂಘಟಿತ ಕಾರ್ಮಿಕರಿಗೆ ತಲಾಎರಡು ಸಾವಿರದಂತೆ ಪರಿಹಾರ ಧನ, ಕಲಾವಿದರಿಗೆಹಾಗೂ ಜಿಲ್ಲೆಯ 11,324 ಹೂ, ಹಣ್ಣು ಹಾಗೂತರಕಾರಿ ಬೆಳೆಗಾರರಿಗೆ 743.55 ಲಕ್ಷ ರೂ., ಆರ್ಥಿಕಪರಿಹಾರ ನೀಡಲಾಗಿದೆ ಎಂದರು.

ಕೋವಿಡ್‌ ಸಂದರ್ಭದಲ್ಲೂ ಅತಿವೃಷ್ಟಿಗೆ ಹಾನಿಯಾದ1093 ಮನೆಗಳಿಗೆ ಒಟ್ಟಾರೆ 2.54 ಕೋಟಿ ಪರಿಹಾರಪಾವತಿಸಲಾಗಿದೆ. ಅತಿವೃಷ್ಟಿಯಿಂದ 1406.55 ಹೆಕ್ಟೇರ್‌ತೋಟಗಾರಿಕೆ ಬೆಳೆ, 8134.68 ಹೆಕ್ಟೇರ್‌ ಕೃಷಿ ಬೆಳೆಹಾನಿಯಾಗಿದೆ. ಸರ್ವೇ ಕಾರ್ಯ ಪೂರ್ಣಗೊಂಡನಂತರ ಪರಿಹಾರ ಪಾವತಿಸಲಾಗುವುದು ಎಂದರು.ದೇಶದ ಸ್ವಾತಂತ್ರÂ ಚಳವಳಿ ಹಾಗೂ ಹೋರಾಟಗಾರರತ್ಯಾಗ, ಬಲಿದಾನವನ್ನು ಸ್ಮರಿಸಿದರು. ಸರ್ಕಾರ ದಿಟ್ಟಸ್ವಾತಂತ್ರÂ ಯೋಧ ಸಂಗೊಳ್ಳಿ ರಾಯಣ್ಣ ಜಯಂತಿಆಚರಣೆ ಮಾಡಲು ಘೋಷಣೆ ಮಾಡಿರುವುದು ಸಂತಸತಂದಿದೆ.

ಸ್ವಾತಂತ್ರÂದ ಸಂದರ್ಭದಲ್ಲಿ ನಾವು ಎದುರಿಸಿದಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲುಇಂದು ನಮಗೆ ಸಾಧ್ಯವಾಗಿದೆ. ಬಡತನ, ಅನಕ್ಷರತೆ,ನಿರುದ್ಯೋಗ ಸಮಸ್ಯೆಗಳನ್ನು ಯಶಸ್ವಿಯಾಗಿಎದುರಿಸಿದ್ದೇವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜಿಲ್ಲೆಯಸರ್ವಾಂಗೀಣ ಅಭಿವೃದ್ಧಿ ಮಾಡಲಿದ್ದೇವೆ ಎಂದರು.

ಸನ್ಮಾನ: ಸ್ವಾತಂತ್ರ ಯೋಧ ಮಳ್ಳಪ್ಪ ಸಿದ್ದಪ್ಪ ಕೊಪ್ಪದ,ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಜಿಲ್ಲಾಗೃಹರಕ್ಷಕ ದಳದ ಸಮಾದೇಷ್ಠರಾದ ಪ್ರಭಾಕರಎಸ್‌.ಮಂಟೂರ, ಪತ್ರಕರ್ತರಾದ ಮಾಲತೇಶಅಂಗೂರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ಸ್ನೇಹಾ ಸಿದ್ದಪ್ಪ, ಪಿಯುಸಿಯಲ್ಲಿ ಅತೀ ಹೆಚ್ಚುಅಂಕ ಪಡೆದ ಸುಕನ್ಯಾ ಜಾಧವ ಹಾಗೂ ಕೊರೊನಾವಾರಿಯರ್ಗಳಾದ ಆರೋಗ್ಯ ಇಲಾಖೆ, ಪೊಲೀಸ್‌,ಗ್ರಾಮೀಣಾಭಿವೃದ್ಧಿ, ಕಂದಾಯ, ಪೌರಕಾರ್ಮಿಕರು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾಶಿಕ್ಷಕರು ಸೇರಿದಂತೆ 46 ಜನರಿಗೆ ಪುಸ್ತಕ ಹಾಗೂಪ್ರಮಾಣ ಪತ್ರ ನೀಡಿ ಕೃಷಿ ಸಚಿವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ರಾಜ್ಯಅನುಸೂಚಿತ ಜಾತಿ ಮತ್ತು ಅನುಸೂಚಿತಬುಡಕಟ್ಟುಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ,ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ,ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಶಿವಕುಮಾರಸಂಗೂರ, ಜಿಲ್ಲಾ ಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾಪೊಲೀಸ್‌ ವರಿಷ್ಠಾ ಧಿಕಾರಿ ಹನುಮಂತರಾಯ,ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿ ಕಾರಿಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್‌ಗಿರೀಶ ಸ್ವಾದಿ, ಇತರೆ ಅಧಿ ಕಾರಿಗಳು, ಗಣ್ಯರುಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.