ಸಾಲ ವಸೂಲಿಗೆ ನಿಯಮ ರೂಪಿಸಿ
Team Udayavani, Jul 8, 2019, 3:31 PM IST
ಹಾವೇರಿ: ರೈತರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಹಾವೇರಿ: ಒತ್ತಾಯ ಪೂರ್ವಕವಾಗಿ ಸಾಲ ವಸೂಲಾತಿ ಮಾಡದಂತೆ ಬ್ಯಾಂಕ್ ಹಾಗೂ ಫೈನಾನ್ಸ್ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎನ್. ತಿಪ್ಪೇಸ್ವಾಮಿ ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಯವರು ರೈತರಿಗೆ ಯಾವುದೇ ಕಡ್ಡಾಯ ಸಾಲ ವಸೂಲಾತಿ ಮಾಡಬಾರದು. ಸಾಲ ವಸೂಲಾತಿಗಾಗಿ ಕಿರುಕುಳ ನೀಡಬಾರದು. ಇಂಥ ಘಟನೆ ನಡೆದರೆ ದೂರವಾಣಿ ಮೂಲಕ ನಮ್ಮ ಗಮನಕ್ಕೆ ತಂದರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಉ.ಕ. ರೈತ ಸಂಘದ ಮುಖಂಡ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ಬರಗಾಲದ ಈ ಸಂದರ್ಭದಲ್ಲಿ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಮುಖ್ಯಮಂತ್ರಿಯವರು ರೈತರಿಗೆ ಯಾವುದೇ ಬ್ಯಾಂಕ್-ಖಾಸಗಿ ಕಂಪನಿಗಳು ನೋಟಿಸ್ ನೀಡುವಂತಹ ಕ್ರಮಕ್ಕೆ ಮುಂದಾಗಬಾರದು ಎಂದು ಹೇಳಿದರೂ ಬ್ಯಾಂಕ್, ಫೈನಾನ್ಸ್ಗಳು ಸಾಲ ಮರುಪಾವತಿ ಮಾಡಲು ಮುಂದಾಗುತ್ತಿರುವುದು ಖೇದಕರ ಸಂಗತಿ ಎಂದರು.
ರೈತರ ಮುಖಂಡರಾದ ಚಂದ್ರಶೇಖರ ಉಪ್ಪಿನ, ಫಕ್ಕಿರೇಶ ಕಾಳಿ, ಜಗದೀಶ ಕೂಸಗೂರ, ಸಿದ್ದಪ್ಪ ನೂಲಗೇರಿ, ಚಂದ್ರು ಗುತ್ತೂರ, ಹನುಮಂತಪ್ಪ ಸುಣಗಾರ, ಬಿ.ಡಿ. ಪಾಟೀಲ, ಮಂಜಯ್ಯ ಹಿರೇಮಠ, ಬಸವರಾಜ ಪಾಣಿಗಟ್ಟಿ, ಫಕ್ಕಿರಪ್ಪ ಒಡಯಂಪೂರ ಹಾಗೂ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ