ಶಂಕರ್ ಹಸ್ತಲಾಘವ; ಕಾಂಗ್ರೆಸ್ಸಿಗರ ಕೆಂಗಣ್ಣು
•ಕಾಂಗ್ರೆಸ್ ಮಣಿಸಿದವರಿಗೆ ಮಣೆ ಹಾಕಿದ್ದಕ್ಕೆ ಕೆಂಡಾಮಂಡಲ•ಕೋಳಿವಾಡ ಬೆಂಬಲಿಗರಿಗೆ ಇರುಸು ಮುರುಸು
Team Udayavani, Jun 15, 2019, 10:38 AM IST
ಹಾವೇರಿ: ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಸಂಪುಟದಲ್ಲಿ ಸಚಿವ ಸ್ಥಾನ ‘ಕೈ’ ತಪ್ಪಿಸಿಕೊಂಡಿದ್ದ ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್ ಅವರಿಗೆ ಎರಡನೇ ಬಾರಿ ಸಚಿವ ಸ್ಥಾನ ದೊರಕಿದ್ದು ಜಿಲ್ಲೆಯ ರಾಜಕಾರಣದಲ್ಲಿಯೂ ಸಂಚಲನ ಮೂಡಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಹಿರಿಯ ಧುರೀಣ ಕೆ.ಬಿ. ಕೋಳಿವಾಡ ಅವರನ್ನು ಸೋಲಿಸಿದ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಿರುವುದು ಕೆ.ಬಿ. ಕೋಳಿವಾಡ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರಲ್ಲಿ ಇರುಸುಮುರುಸು ಉಂಟು ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆರ್. ಶಂಕರ್ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಭಾರೀ ಬೇಡಿಕೆ ಬಂದು, ಶಾಸಕರಾಗಿ ಆಯ್ಕೆಯಾದ ಪ್ರಥಮ ಬಾರಿಗೇ ಸಚಿವ ಸ್ಥಾನ ಒಲಿದು ಬಂದಿತ್ತು.
ಸಮ್ಮಿಶ್ರ ಸರ್ಕಾರವನ್ನು ಬೆಂಬಲಿಸಿದ್ದ ಆರ್. ಶಂಕರ್ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಯಾಗಲಿಲ್ಲ ಎಂಬ ಕಾರಣಕ್ಕೆ ಅವರಿಂದ ಸಚಿವ ಸ್ಥಾನ ವಾಪಸ್ ಪಡೆಯಲಾಗಿತ್ತು. ಇದರಿಂದ ಮುನಿಸಿಕೊಂಡ ಶಂಕರ್ ಲೋಕಸಭೆ ಚುನಾವಣೆ ವೇಳೆ ತಟಸ್ಥ ಧೋರಣೆ ಅನುಸರಿಸಿದ್ದರು. ಆದರೆ, ಕ್ಷೇತ್ರದ ಅವರ ಅಭಿಮಾನಿಗಳು ಬಹಿರಂಗವಾಗಿಯೇ ಬಿಜೆಪಿಯನ್ನು ಬೆಂಬಲಿಸಿದ್ದರು. ಇದರ ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ 26567 ಮತಗಳ ಮುನ್ನಡೆ ಸಾಧಿಸಿತ್ತು. ತನ್ಮೂಲಕ ಲೋಕಸಭೆ ಚುನಾವಣೆಯಲ್ಲಿಯೂ ಆರ್. ಶಂಕರ್ ಪರೋಕ್ಷವಾಗಿ ಕಾಂಗ್ರೆಸ್ ಬಲ ಕುಗ್ಗುವಂತೆ ಮಾಡಿದ್ದರು. ಇಷ್ಟೆಲ್ಲ ನಡೆದ ಬಳಿಕ ಈಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಒಪ್ಪಂದದಲ್ಲಿ ಮತ್ತೆ ಸಂಪುಟ ಸೇರಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿರುವುದು ಕಾಂಗ್ರೆಸ್ನ ಕೆಲ ಧುರೀಣರ ಕಣ್ಣು ಕೆಂಪಾಗಿಸಿದೆ.
2ನೇ ಬಾರಿ ಜಯ: 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ನ ಹಿರಿಯ ಮುಖಂಡ ಕೆ.ಬಿ. ಕೋಳಿವಾಡ ಅವರಿಗೆ ಕಠಿಣ ಪೈಪೋಟಿಯೊಡ್ಡಿ, ಕೇವಲ 6788 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. 2018 ವಿಧಾನಸಭೆ ಚುನಾವಣೆ ಪೂರ್ವ ವಿವಿಧ ರಾಷ್ಟ್ರೀಯ ಪಕ್ಷಗಳು ಅವರನ್ನು ಆಹ್ವಾನಿಸಿದ್ದವು. ಬೇರೆ ಪಕ್ಷಗಳಿಗೆ ಹೋಗದೆ 2018ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದ ‘ಆಟೋ’ ಚಿಹ್ನೆಯೊಂದಿಗೆ ಸ್ಪರ್ಧಿಸಿದ ಆರ್. ಶಂಕರ್, ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು 4338 ಮತಗಳಿಂದ ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. ವಿಧಾನಸಭೆ ಪ್ರವೇಶಿಸಿದ ಮೊದಲ ಅವಧಿಯಲ್ಲಿಯೇ ಆರ್. ಶಂಕರ್ಗೆ ಎರಡು ಬಾರಿ ಸಚಿವ ಸ್ಥಾನದ ಅವಕಾಶ ಸಿಕ್ಕಂತಾಗಿದೆ.
ಸೋತರೂ ಭವ್ಯ ಮನೆ: 2013ರ ಚುನಾವಣೆಯಲ್ಲಿ ಸೋತ ಬಳಿಕ ಸುಮ್ಮನೇ ಮನೆಯಲ್ಲಿ ಕುಳಿತುಕೊಳ್ಳದ ಆರ್. ಶಂಕರ್, ಸೋತ ದಿನದಿಂದಲೇ 2018ರ ಚುನಾವಣೆಗೆ ಗೆಲ್ಲುವ ಯೋಜನೆ ರೂಪಿಸಿಕೊಂಡಿದ್ದರು. ಬಳಿಕ ರಾಣಿಬೆನ್ನೂರಿನ ಚೋಳಮರಡೇಶ್ವರ ನಗರದಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ‘ನಮ್ಮ ಮನೆ, ನಮ್ಮ ಕಚೇರಿ’ ಎಂಬ ಭವ್ಯ ಮನೆ ಕಟ್ಟಿಸಿ ತನ್ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಸೋಲಲಿ, ಗೆಲ್ಲಲ್ಲಿ ಕ್ಷೇತ್ರದ ಮತದಾರರ ಸೇವೆಗಾಗಿ ಕ್ಷೇತ್ರದಲ್ಲೇ ಇರುತ್ತೇನೆ ಹಾಗೂ ತಾವು ಕ್ಷೇತ್ರದ ಹೊರಗಿನವನಲ್ಲ ಎಂಬ ಸಂದೇಶ ನೀಡಿದ್ದರು. 2018ರಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕ್ಷೇತ್ರದಲ್ಲಿ ಜನರಿಗೆ ಸಿಕ್ಕಿದ್ದೇ ವಿರಳ ಎಂಬುದು ವಿಪರ್ಯಾಸ.
•ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!