ಶಂಕರಾಚಾರ್ಯರು ಪರಶಿವನ ಅವತಾರಿ


Team Udayavani, May 19, 2019, 12:43 PM IST

haveri-tdy-2..

ರಾಣಿಬೆನ್ನೂರ: ಶಂಕರಾಚಾರ್ಯರ ಜಯಂತ್ಯುತ್ಸವ ನಿಮಿತ್ತ ನಡೆದ ಧಾರ್ಮಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕಾರವಾರದ ಶಿವಮೂರ್ತಿ ಜೊಯ್ಸ ಮಾತನಾಡಿದರು

ರಾಣಿಬೆನ್ನೂರ: ಲೋಕ ಕಲ್ಯಾಣಾರ್ಥ ಪರಶಿವನು ಭೂ ಲೋಕಕ್ಕೆ ಆದಿಗುರು ಶಂಕರಾಚಾರ್ಯರ ಅವತಾರ ತಾಳಿ ಬಂದವರು. ಅವರು ಜನರಲ್ಲಿ ಅಡಗಿರುವ ಅಜ್ಞಾನ ತೊಳೆದು ಸುಜ್ಞಾನದೆಡೆ ಕರೆ ತಂದವರು ಎಂದು ಕಾರವಾರದ ಶಿವಮೂರ್ತಿ ಜೊಯ್ಸ ಹೇಳಿದರು.

ಶನಿವಾರ ನಗರದ ಬನಶಂಕರಿ ಸಭಾಭವನದಲ್ಲಿ ಏರ್ಪಡಿಸಿದ್ದ ಶತಮಾತೋತ್ಸವದ ಸಮಿತಿ ವತಿಯಿಂದ ಆದಿಗುರು ಶಂಕರಾಚಾರ್ಯರ ಜಯಂತ್ಯುತ್ಸವದ ಅಂಗವಾಗಿ ಐದು ದಿನ ನಡೆದ ಗಣಪತಿ ಪೂಜೆ, ಪುಣ್ಯಹ, ಕೃಚ್ಛಾಚರಣೆ, ಪ್ರಾಯಶ್ಚಿತ್‌, ಯಂತ್ರ, ಕಳಶ ಸ್ಥಾಪನೆ, ಅಂಕುರಾರ್ಪ ಮಹಾರುದ್ರಯಾಗ, ಶತಚಂಡಿ ಪಾರಾಯಣ, ವೇದ ಪಾರಾಯಣ, ಶಂಕರ ಭಾಷ್ಯ ಪಾರಾಯಣ, ಗಣಪತಿ ಹೋಮ, ನವಗ್ರಹ ಹೋಮ, ಮಹಾಮೃತ್ಯುಂಜಯ ಹೋಮ ಹಾಗೂ ಪೂರ್ಣಾಹುತಿ ಧಾರ್ಮಿಕ ವಿಧಿ ವಿಧಾನಗಳು ನಡೆದ ನಂತರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಪಂಚದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯಲು ಅದ್ವೈತ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಆದಿಗುರು ಶಂಕರಾಚಾರ್ಯರಿಗೆ ಸಲ್ಲುತ್ತದೆ. ಅಹಂ ಬ್ರಹ್ಮಾಸಿಂ ಎಂಬುದು ನನ್ನಲ್ಲಿಯೇ ಪರಶಿವನಿದ್ದಾನೆ ಎಂದು ತೋರಿಸಿ ಕೊಟ್ಟವರು. ಭಾರತೀಯ ಸಂಸ್ಕೃತಿಯನ್ನು ಹಾಗೂ ಸನಾತನ ಧರ್ಮವನ್ನು ಪ್ರಚಾರ ಹಾಗೂ ಸಂರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಶಾಸಕ ಆರ್‌.ಶಂಕರ ಮಾತನಾಡಿ, ಭಾರತೀಯ ಸಂಸ್ಕೃತಿ ಸನಾತವಾದುದು, ಪ್ರಪಂಚವೇ ಇಷ್ಟ ಪಡುವ ದೇಶ ಭಾರತ, ದ್ವೇಶವನ್ನು ಕಾಣದಂತೆ ಜನರಲ್ಲಿ ಸತ್ಯ ಮಾರ್ಗವನ್ನು ಋಷಿ ಮುನಿಗಳು ತೋರಿಸಿ ಕೊಟ್ಟಿದ್ದಾರೆ. ಅಂತವರಲ್ಲಿ ಶಂಕರಾಚಾರ್ಯರೂ ಒಬ್ಬರು. ಹೀಗಾಗಿ ಭಾರತ ವಿಶ್ವಕ್ಕೆ ಗುರುವಾಗಿ ಕಾಣುತ್ತದೆ. ಇದನ್ನರಿತ ಭಾರತೀಯರು ಅದರ ಉಳಿವಿಗಾಗಿ ಶ್ರಮಿಸುವ ಅಗತ್ಯ ಇದೆ ಎಂದರು.

ಡಾ| ಬಸವರಾಜ ಕೇಲಗಾರ ಮಾತನಾಡಿ, ಕೇರಳದ ಕಾಲಡಿಯಲ್ಲಿ ಈಶ್ವರನ ಕೃಪಾ ಕಟಾಕ್ಷದಿಂದ ಶಿವಗುರು ಆರ್ಯಾಂಬೆಯ ಪುತ್ರನಾಗಿ ವಿಭವನಾಮ ಸಂವತ್ಸರದ ವೈಶಾಖ ಶುದ್ಧ ಪಂಚಮಿ ಪುನರ್ವಸು ನಕ್ಷತ್ರದಲ್ಲಿ ಜನಿಸಿದ ಶಂಕರ ಆಡುವ ವಯಸ್ಸಿನಲ್ಲಿಯೇ ಕಾವ್ಯ, ಛಂದಸ್ಸು, ಅಲಂಕಾರ, ಕೋಷ್ಠ ಸ್ತೋತ್ರವನ್ನು ಕಲಿತವರು. ತಾವು ಸನ್ಯಾಸಿಯಾಗಬೇಕೆಂಬ ಉದ್ದೇಶದಿಂದ ಮೊಸಳೆ ಬಾಯಿಯಿಂದ ತಪ್ಪಿಸಲು ನೀನು ನನಗೆ ಸನ್ಯಾಸಿಯಾಗಲು ಅನುಮತಿ ನೀಡಿದರೆ ಮಾತ್ರ ನಾನು ಬದುಕಲು ಸಾಧ್ಯ ಎಂದಾಗ ತಾಯಿಯು ವಿಧಿಯಿಲ್ಲದೇ ಸನ್ಯಾಸಕ್ಕೆ ಅನುಮತಿ ನೀಡಬೇಕಾಯಿತು ಎಂದರು.

ನರ್ಮದಾ ನದಿಯ ಗುಹೆಯಲ್ಲಿದ್ದ ಶ್ರೀ ಗೋವಿಂದಾ ಭಗವತ್ಪಾದರು ಶಂಕರಾಚಾರ್ಯರನ್ನು ಶಿಷ್ಯನನ್ನಾಗಿ ಸ್ವೀಕರಿಸಿ ಬ್ರಹ್ಮೋಪದೇಶ ನೀಡಿದರು, ಅವರಿಂದ ಎಲ್ಲಾ ಜೀವರಾಶಿಗಳಿಗೂ ಒಂದೇ, ಅವುಗಳಲ್ಲಿ ಯಾವ ಭೇದವೂ ಇಲ್ಲ. ಅವೆಲ್ಲವೂ ಪರಮಾತ್ಮನ ಸ್ವರೂಪ ಎಂಬ ಉನ್ನತ ತಾತ್ವಿಕ ತತ್ವದ ಸತ್ಯವನ್ನು ತಿಳಿದುಕೊಂಡರು, ನಶ್ವರವಾದ ಈ ಸಂಸಾರದ ಬಗ್ಗೆ ವ್ಯಾಮೋಹ ಬಿಟ್ಟು ಸದ್ಗತಿಯ ಕಡೆಗೆ ಮನಸ್ಸನ್ನು ಹರಿದಾಡುವಂತೆ ಮಾಡಬೇಕೆಂದು ಜಗತøಸಿದ್ದ ಭಜಗೋವಿಂದಂ ಸ್ತೋತ್ರವನ್ನು ಬರೆದರು. ಬ್ರಹ್ಮಸೂತ್ರ ಭಗವದ್ಗೀತೆ ಹಾಗೂ ಉಪನಿಷತ್ತುಗಳ ಮೇಲೆ ಭಾಷ್ಯಗಳನ್ನು ಬರೆದರು ಎಂದರು.

ಶತಮಾತೋತ್ಸವ ಸಮಿತಿ ಅಧ್ಯಕ್ಷ ಡಾ| ಸಂಜಯ ನಾಯಕ, ಎ.ಎಂ.ನಾಯಕ, ಡಿ.ಸಿ.ಕುಲಕರ್ಣಿ, ಬ್ಯಾಡಗಿಯ ಡಾ| ಶಶಿಧರ ವೈದ್ಯ ಮಾತನಾಡಿದರು. ಭೀಮರಾವ ಕುಲಕರ್ಣಿ, ಗುರುರಾಜ ನಾಡಿಗೇರ, ಅರುಣ ಮುದ್ರಿ, ಶ್ರೀಪಾದ ಕುಲಕರ್ಣಿ, ಚಿದಂಬರ ಜೋಷಿ, ನಾಗರಾಜ ಕುಲಕರ್ಣಿ, ವಿನಾಯಕ ಜೋಷಿ, ರವಿಂದ್ರ ವರಗಿರಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.