2 ಸಾವಿರ ಫಲಾನುಭವಿಗಳಿಗೆ ಮನೆ ನಿರ್ಮಾಣ


Team Udayavani, Mar 7, 2019, 11:02 AM IST

7-mach-17.jpg

ಶಿಗ್ಗಾವಿ: ರಾಜ್ಯದಲ್ಲಿಯೇ ಪ್ರಥಮವೆನ್ನಲಾದ ಪೈಲೆಟ್‌ ಗ್ರೌಂಡ್‌+1 ಗುಂಪುಮನೆ ಯೋಜನೆಯಾಗಿದ್ದು, ಇದು ಕ್ಷೇತ್ರದ ಮೂರು ಪುರಸಭೆಯ ವ್ಯಾಪ್ತಿಯಲ್ಲಿನ 2 ಸಾವಿರ ಬಡ ಕುಟುಂಬಗಳಿಗೆ ಸುಸಜ್ಜಿತವಾದ ಮನೆ ನೀಡುವಲ್ಲಿ ಸಫಲತೆ ಕಾಣುವಂತಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಆಶ್ರಯ ಬಡಾವಣೆ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಪ್ರಧಾನಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸಲಾಗಿರುವ ಗುಂಪು ಮನೆಗಳ ಫಲಾನುಭವಿಗಳಿಗೆ ಸ್ವಾಧೀನ ಪತ್ರಗಳ ವಿತರಣೆ ಹಾಗೂ ಪುರಸಭೆ ವ್ಯಾಪ್ತಿಯ ನಗರೊತ್ಥಾನ ಯೋಜನೆಯಡಿ ವಿವಿಧ ವಿಭಾಗಗಳಲ್ಲಿ ಅಳವಡಿಸಿರುವ ಬೀದಿ ದೀಪಗಳ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೂರು ಪುರಸಭೆಯ ಶಿಗ್ಗಾವಿ 361 ಸವಣೂರು 1200 ಹಾಗೂ ಬಂಕಾಪುರ 604 ಗುಂಪು ಮನೆ ಜಿ+1 ಮನೆಗಳ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದು, ಆದಷ್ಟು ಬೇಗ ಹಂತ ಹಂತವಾಗಿ ಬಡ ಫಲಾನುಭವಿಗಳಿಗೆ ಸ್ವಾ ಧೀನಪತ್ರ ನೀಡಲಾಗುವುದು. 2012ರಲ್ಲಿ ಆರಂಭವಾದ ಯೋಜನೆ ಫಲಾನುಭವಿಗಳಿಗೆ
ಬ್ಯಾಂಕ್‌ ಸಾಲ ನೀಡಲು ಮುಂದೆ ಬರದ ಕಾರಣ ತಾಂತ್ರಿಕ ತೊಡಕುಗಳಿಂದ ಕಾರ್ಯ ವಿಳಂಭವಾಗಿತ್ತು. ಹಿಂದಿನ ರಾಜ್ಯ ಸರ್ಕಾರ ವಸತಿ ಇಲಾಖೆ ಮಂತ್ರಿಗಳು ಯೋಜನೆಯ ಬೆಂಬಲ ನೀಡಲಿಲ್ಲ. ಹೀಗಾಗಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಸುಮಾರು 11 ಕೋಟಿ ರೂ. ಅನುದಾನ ಪಡೆದು ಯೋಜನೆ ಪೂರ್ಣಗೊಳಸಲಾಗುತ್ತಿದ್ದು, ಆದಷ್ಟು ಬೇಗ ಬಡ ಜನತೆಗೆ ಮನೆ ಕನಸು ನನಸಾಗಲಿದೆ ಎಂದು ಭರವಸೆ ನೀಡಿದರು.

ಪ್ರತಿ ವರ್ಷ ಸ್ಲಂ ಬೋರ್ಡನಿಂದ ಹಣ ತಂದು ಎಸ್‌ಸಿ, ಎಸ್‌ಟಿ ಹಾಗೂ ಅಲ್ಪಸಂಖ್ಯಾತ ಜನಾಂಗ ಇರುವ ಬಡವಾಣೆಗೆ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ 2020ರೊಳಗೆ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ನಡೆದಿದೆ. ಹೀಗಾಗಿ ಈ ಯೋಜನೆ ಪೂರ್ಣಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 11ಕೋಟಿ ಮೊತ್ತವು ಸಹಕಾರಿಯಾಗಲಿದೆ ಎಂದರು.

ಪುರಸಭೆ ಸದಸ್ಯ ಸುಭಾಷ ಚವ್ಹಾಣ ಮಾತನಾಡಿ, ಬಡವರಿಗೆ ಅತೀ ಕಡಿಮೆ ದರದಲ್ಲಿ ಸುಸಜ್ಜಿತ ಮನೆ ನೀಡುವುದು ಶಾಸಕ ಬೊಮ್ಮಾಯಿವರ ಕನಸಿನ ಕೂಸು. ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಪುರಸಭೆ ಅಧ್ಯಕ್ಷ, ಶಿವಪ್ರಸಾದ ಸುರಗಿಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ, ಸದಸ್ಯರಾದ ಫಕ್ಕಿರೇಶ ಶಿಗ್ಗಾವಿ, ಶ್ರೀಕಾಂತ ಬುಳ್ಳಕ್ಕನವರ, ಕೆಸಿಸಿ ಬ್ಯಾಂಕ್‌ ನಿರ್ದೇಶಕ ಗಂಗಣ್ಣ ಸಾತಣ್ಣವರ, ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಶಿವಾನಂದ ಮ್ಯಾಗೇರಿ, ಫಕ್ಕಿರಪ್ಪ ವಡ್ಡರ ಮೃತ್ಯುಂಜಯ ಕಟ್ಟಿಮನಿ, ನೀಲವ್ವ ಕಾಲವಾಡ ಹಾಗೂ ಫಲಾನುಭವಿಗಳು ಇದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.