Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ


Team Udayavani, Sep 21, 2023, 12:05 PM IST

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

ಶಿಗ್ಗಾವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಇತ್ತೀಚೆಗೆ ಫ್ರಾನ್ಸ್‌ನ ಫ್ರೆಂಚ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಸಸ್ಟೇನೇಬಲ್‌ ಡೆವೆಲಪ್‌ಮೆಂಟ್‌ನ ಸಂಶೋಧಕ ಮ್ಯಾಥ್ಯೂ ಸಾಲ್‌ ಪೀಟೇರು ಮತ್ತು ಹರಿಯಾಣ ಸಂಶೋಧಕಿ ವರ್ಷರಾಣಿ ಹಾಗೂ ಹೈದರಾಬಾದ್‌ ಪ್ಯಾಬ್‌ ಇಂಡಿಯಾದ ಗೋಪಿಕೃಷ್ಣ ಅವರು ಭೇಟಿ ನೀಡಿ ವಿವಿಯ ಜಾನಪದ ವಸ್ತು ಸಂಗ್ರಹಾಲಯ ವೀಕ್ಷಿಸಿದರು.

ಅಲ್ಲದೇ, ಅನೇಕ ಶೈಕ್ಷಣಿಕ ವಿಷಯಗಳ ಕುರಿತು ಕುಲಪತಿ ಪ್ರೊ| ಟಿ.ಎಂ. ಭಾಸ್ಕರ್‌ ಅವರೊಂದಿಗೆ ಚರ್ಚೆ ನಡೆಸಿದರು. ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದ ಅವರು, ತಗರ ಜೋಗಿಗಳು ಮತ್ತು ಸುಡುಗಾಡು ಸಿದ್ಧರ ಪಾರಂಪರಿಕ
ಕೌಶಲ್ಯಗಳು ಹಾಗೂ ವಸ್ತು ಸಂಗ್ರಹಾಲಯ ಕುರಿತು ಸುದೀರ್ಘ‌ವಾಗಿ ಮಾತುಕತೆ ನಡೆಸಿದರು. ವಸ್ತು ಸಂಗ್ರಹಾಲಯದಲ್ಲಿರುವ ಲೋಹ ಹಾಗೂ ಮತ್ತಿತರ ಪರಿಕರಗಳನ್ನು ನೋಡಿ ಆಶ್ಚರ್ಯಚಕಿತರಾದರು.

ವಿಶ್ವವಿದ್ಯಾಲಯದ ಈ ವಸ್ತು ಸಂಗ್ರಹಾಲಯವನ್ನು ಜಾನಪದ ಪ್ರವಾಸಿ ತಾಣವನ್ನಾಗಿ ಮಾಡಬೇಕೆನ್ನುವ
ಕುಲಪತಿಗಳ ಕನಸನ್ನು ಮೆಚ್ಚಿಕೊಂಡರು. ಜಾನಪದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಜನಪದ ಕಲೆ, ಸಾಹಿತ್ಯ, ಸಂಸ್ಕೃತಿಯ ಜ್ಞಾನ ಭಂಡಾರ ಜಗತ್ತಿನಾದ್ಯಂತ ಪಸರಿಸುವಂತೆ ಮಾಡಲು ವಿವಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಚರ್ಚಿಸಿದರು. ಈ ಒಡಂಬಡಿಕೆ ಅನ್ವಯ ವಿವಿಯ ವಿದ್ಯಾರ್ಥಿಗಳು ತಮ್ಮ ಜಾನಪದ ಜ್ಞಾನವನ್ನು ಪ್ಯಾರಿಸ್‌ನಲ್ಲಿ ಪ್ರಸ್ತುತ ಪಡಿಸಲು ಅವಕಾಶ ಗಳನ್ನು ನೀಡುವುದು ಹಾಗೂ ಪ್ಯಾರಿಸ್‌ನ ವಿದ್ಯಾರ್ಥಿ ಗಳು ಅದೇ ಅಧ್ಯಯನಕ್ಕಾಗಿ ಕರ್ನಾಟಕದ ಈ ಜಾನಪದ ವಿವಿಗೆ ಬರಲು ಅನುವು ಮಾಡಿಕೊಡಲಾಗುವುದು.

ಈ ನಿಟ್ಟಿನಲ್ಲಿ ಕುಲಪತಿಗಳ ಈ ಒಡಂಬಡಿಕೆಯ ಚರ್ಚೆ ಭವಿಷ್ಯದ ದಿನಗಳಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದರು. ಈ ಒಡಂಬಡಿಕೆ 2023-24ನೇ ಶೈಕ್ಷಣಿಕ ವರ್ಷದಲ್ಲಿ ಜಾರಿಯಾಗುವಂತೆ ಕಾರ್ಯಪ್ರವೃತ್ತರಾಗುತ್ತೇವೆ ಎಂದು ವಿವಿಯ ಕುಲಪತಿ ಪ್ರೊ|ಟಿ.ಎಂ.ಭಾಸ್ಕರ್‌ ಅವರು ಅತಿಥಿಗಳಿಗೆ ಭರವಸೆ ನೀಡಿದರು.

ಕುಲಪತಿಗಳೊಂದಿಗೆ ಮಾತನಾಡಿದ ಮ್ಯಾಥ್ಯೂ ಅವರು, ಈ ವಿಶ್ವವಿದ್ಯಾಲಯ ಜಾನಪದ ಪರಂಪರೆಯ ಹೊಸ ಲೋಕವನ್ನೇ ಸೃಷ್ಟಿಸಿರುವ ಜಗತ್ತಿನ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಪ್ರಶಂಸನೀಯ. ಜಾಗತಿಕ ಮಟ್ಟದಲ್ಲಿ ಜನಪದ ಕಲೆ ಮತ್ತು ಸಾಹಿತ್ಯ ಅನಾವರಣಗೊಳ್ಳುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದೊಂದಿಗೆ ನಾವು ಸದಾ ಜೊತೆಗಿರುತ್ತೇವೆ ಎಂದು ಭರವಸೆ ನೀಡಿದರು. ಹರಿಯಾಣದ ಸಂಶೋಧಕಿ ವರ್ಷಾರಾಣಿ ಅವರು ಪರಿಸರ ವಿಜ್ಞಾನ ಮತ್ತು ವಾತಾವರಣದ ಕುರಿತ ತಮ್ಮ ಸಂಶೋಧನಾ ಕಾರ್ಯ ನಿಮಿತ್ತ ಈಗಾಗಲೇ ಕರ್ನಾಟಕದಲ್ಲಿ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಕ್ಷೇತ್ರ ಅಧ್ಯಯನ
ಕೈಗೊಂಡಿದ್ದಾರೆ.

ಜಾನಪದ ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳು, ಕೋರ್ಸ್‌ಗಳು ಮತ್ತು ಪ್ರಾಯೋಗಿಕ ಕಾರ್ಯಗಳ ಕುರಿತು ಚರ್ಚಿಸಿದ ಅವರು, ಈ ನೆಲದ ಜಾನಪದ ಶ್ರೀಮಂತಿಕೆಯನ್ನು ಜಗತ್ತಿಗೆ ಸಾರುತ್ತಿರುವ ಈ ವಿಶ್ವವಿದ್ಯಾಲಯವನ್ನು ಪಡೆದ ಕರ್ನಾಟಕದ ಜನತೆ ನಿಜಕ್ಕೂ ಅದೃಷ್ಟವಂತರು ಎಂದು ಹೇಳಿದರು.

ಹೈದರಾಬಾದ್‌ ಪ್ಯಾಬ್‌ ಇಂಡಿಯಾದ ಗೋಪಿಕೃಷ್ಣ ಅವರು ಜಾನಪದ ಲೋಕದ ಕುರಿತು ಕುಲಪತಿಗಳ ಜತೆ ಚರ್ಚಿಸಿದರು. ಮುಂಬರುವ ದಿನಗಳಲ್ಲಿ ಜಗ್ತತಿನ ಏಕೈಕ ಜಾನಪದ ವಿವಿ ನಾಡಿನ ಜಾನಪದ ಪರಂಪರೆಯನ್ನು ವಿಶ್ವದೆಲ್ಲೆಡೆ ಅನಾವರಣಗೊಳಿಸಲಿದೆ ಮತ್ತು ಈ ನಿಟ್ಟಿನಲ್ಲಿ ವಿವಿಯ ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ಕಠಿಣ ಪರಿಶ್ರಮವಿದೆ ಎಂದು ಕುಲಪತಿಗಳು ತಿಳಿಸಿದರು. ಈ ವೇಳೆ ವಿವಿಯ ಕುಲಸಚಿವ ಪ್ರೊ| ಸಿ.ಟಿ. ಗುರುಪ್ರಸಾದ, ಸಹಾಯಕ ಪ್ರಾಧ್ಯಾಪಕ ಡಾ|ಚಂದ್ರಪ್ಪ ಸೊಬಟಿ ಇದ್ದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.