ಸಂತ ಶರೀಫ‌ ಅಜ್ಜನ ಜಾತ್ರೆ ನಾಳೆಯಿಂದ 


Team Udayavani, Mar 14, 2019, 10:50 AM IST

15-march-16.jpg

ಶಿಗ್ಗಾವಿ: ಬೋಧ ಒಂದೇ ಬ್ರಹ್ಮನಾದ… ಒಂದೇ ಎಂಬ ಹಾಡಿನ ಮೂಲಕವೇ ಜೀವನದ ತಿರುಳನ್ನು ಉಣಬಡಿಸಿದ ಕರ್ನಾಟಕದ ಕಬೀರ, ಭಾವೈಕ್ಯತೆಯ ಹರಿಕಾರ ಜನಪದ ಸಂತ ಕವಿಗಳೇ ಶಿಶುವಿನಾಳದ ಷರೀಫ್‌ಜ್ಜ ಕೇವಲ ಜನಪದ, ತತ್ವಪದಕಾರನಲ್ಲ, ಕಾಲಜ್ಞಾನಿಯೂ ಹೌದು, ವಿಜ್ಞಾನಿಯೂ ಹೌದು.

ಗುಡಿಯ ನೋಡಿರಣ್ಣ…ದೇಹದ ಗುಡಿಯ ನೋಡಿರಣ್ಣ…., ತರವಲ್ಲ ತಗಿ ನಿನ್ನ ತಂಬೂರಿ-
ಸ್ವರ…, ಅಳಬೇಡ ತಂಗಿ ಅಳಬೇಡ.. ಎನ್ನುವ ತತ್ವ ಸಂದೇಶಗಳು ಇಡೀ ಮನುಕುಲ ಬದುಕಿಗೆ ಬೆಳಕು ಚೆಲ್ಲಿದ ತತ್ವಪದಗಳು. ಇಂತಹ ಸಾವಿರಾರು ಪದಗಳು ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದು ಮಹಾಪುರುಷ ಸಂತ ಶಿಶುವಿನಾಳ ಷರೀಫರು.

ಉನ್ನತ ಧಾರ್ಮಿಕ ಪರಂಪರೆ ಇತಿಹಾಸವಿರುವ ನಾಡಿನಲ್ಲಿ ಅನೇಕ ಶರಣರು, ಸಾಹಿತಿಗಳು ಜನ್ಮ ತಾಳಿ ನಾಡು-ನುಡಿಗಾಗಿ ತಮ್ಮದೆಯಾದ ಕೂಡುಗೆ ನೀಡಿದ್ದಾರೆ. ಅಂತಹ ಹಲವರಲ್ಲಿಯೇ ಕರ್ನಾಟಕದ ಬೀರ, ಹಿಂದೂ ಮುಸ್ಲಿಂ  ಭಾವೈಕ್ಯತೆಯ ಹರಿಕಾರ ಶಿಶುವಿನಾಳ ಷರೀಫ್‌ ಶಿವಯೋಗಿಗಳು ಸಮಾಜದಲ್ಲಿನ ಅಂಕು-ಡೊಂಕು ತಿದ್ದಿದವರು.

ಸುಂದರ ಸಮಾಜ ನಿರ್ಮಿಸಲು, ಸಾಮಾಜಿಕ ನ್ಯೂನತೆಯನ್ನು ತಮ್ಮದೆ ಶೈಲಿಯಲ್ಲಿ ರಚಿಸಿ, ವಿಡಂಭನೆಯ ರೀತಿಯಲ್ಲಿಯೇ ಹಾಡಿನ ಮೂಲಕ ತಿದ್ದಿ ಬುದ್ದಿ ಹೇಳುವ ಶಿಶುವಿನಾಳ ಷರೀಫರು ಕೇವಲ ಕವಿಗಳಲ್ಲ; ಮಹಾತ್ಮರು. ತಮ್ಮ ತತ್ವಪದಗಳಿಂದ ನಮ್ಮ ಸಾಮಾಜಿಕ ವ್ಯವಸ್ಥೆ ಮತ್ತು ಜೀವನ ಸಾರ ತಿಳಿಸಿ, ಇಡೀ ಮನು ಕುಲ ಪರಿವರ್ತಿಸಲು ಯತ್ನಿಸಿದವರು.

ನಾಡಿನುದ್ದಕ್ಕೂ ಸಂಚರಿಸಿ ಅಪಾರ ಅನುಭವ ಮೂಲಕ ಬದುಕಿನ ಮೌಲ್ಯ ಹಾಗೂ ಜಂಜಾಟಗಳನ್ನು ಸಹಜ ಪದಗಳ ಮೂಲಕ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ. ಲೋಕದ ಚಿಂತಿ ಮಾಡಬೇಕಂತಿ, ಯಾರ ಬೇಡಾಂತರಾ ಮಾಡಪ್ಪ ಚಿಂತಿ… ಎಂದು ಸಾಮಾಜಿಕ ಸಂದೇಶ ಸಾರಿದ್ದಾರೆ. ದೇವಾಲಯ, ಮಠ ಮಂದಿರಗಳನ್ನು ಸ್ಥಾಪಿಸಿದೇ ಊರೂರು ಸುತ್ತುತ್ತ ಒಂದೇ ಕಡೆ ನೆಲೆ ನಿಲ್ಲದೆ ಜನಮನ ತಲುಪಿದ ಸದಾ ಸಂಚಾರಿಯಾಗಿದ್ದರು.

ಷರೀಫರು ಧರ್ಮದಿಂದ ಮುಸಲ್ಮಾನರಾದರೂ ಧರ್ಮ ದೃಷ್ಟಿಯಿಂದ ವಿಶ್ವಮಾನವರಾಗಿ ಜಗ ಕಲ್ಯಾಣಕ್ಕಾಗಿ ಶ್ರಮಿಸಿ ಶ್ರೀಮಂತ ಎನಿಸಿದರು. ಹೀಗಾಗಿ ಅವರ ಜೀವನದ ಸಂದೇಶಗಳು ಭವಿಷ್ಯತ್ವ ಜನತೆಗೆ ದಾರ್ಶನಿಕವಾಗಿ ಉಳಿದಿವೆ. ಕಾಲ ಚಕ್ರ ಉರುಳಿ ಸೂರ್ಯ, ಚಂದ್ರ ಇರುವ ವರೆಗೂ ಸಂತ ಷರೀಫರು ನಾಡಿಗೆ ನೀಡಿದ ಸಂದೇಶಗಳು ಅಮರವಾಗಿವೆ.

ಮಳೆ ನೀರು ಮತ್ತೆ ಹರಿದು ನದಿ ಮೂಲಕ ಸಮುದ್ರವನ್ನೇ ಸೇರುವಂತೆ ಎಲ್ಲ ತತ್ವಗಳ ಮೂಲ ಒಂದೇ ಎಂಬ ವಿಶಾಲ ತತ್ವಸಾರ ಅವರದಾಗಿತ್ತು. ತಿಳಿಗನ್ನಡದ ಸರಳವಾಗಿರುವ ಅವರ ಬೇಡಗಿನ ಹಾಡುಗಳಲ್ಲಿ ಆಧ್ಯಾತ್ಮದ ಸೋಗಡು ತುಂಬಿದೆ. ಯಾವ ಮತ ಪಂಥಗಳಿಗೆ ಸೇರದ ಶಿಶುವಿನಾಳ ಗ್ರಾಮದ ಷರೀಫರ ಸಮಾದಿ ಸರ್ವಧರ್ಮದ ಸಮನ್ವಯದ ಹರಿಕಾರರ ಪ್ರವಾಸಿ ತಾಣವಾಗಿ ಸಮಾನತೆಯ ಸಂದೇಶ ಇಂದಿಗೂ ಸಾರುತ್ತಿಹುದು.

ಹುಲಗೂರ ಖಾದರಶಾ ಅವರ ವರ ಪ್ರಸಾದದಿಂದ ಜನಿಸಿದ ಷರೀಫರು, ಕಳಸದ ಗುರು ಗೋವಿಂದ ಭಟ್ಟರಿಂದ ಸಂತ ಶಿಖಾಮಣಿಯಾಗಿ ರೂಪಗೊಂಡು ಮರೆಯಲಾಗದ ಮಹಾನುಭಾವರಾದರು. ಸರ್ಕಾರ ಷರೀಫರ ಸ್ಮರಣೆಯಾಗಿ ಅಧ್ಯಾತ್ಮಿಕ ಅಧ್ಯಯನ ಕೇಂದ್ರ, ಪ್ರವಾಸಿ ನಿಲಯ, ಬೃಹದಾಕಾರದ ಗ್ರಂಥಾಲಯ, ಕಲಾಭವನ, ಸಮುದಾಯ ಭವನ ನಿರ್ಮಿಸುವ ಜೊತೆಗೆ ಉತ್ತಮ ಪ್ರವಾಸಿ ಕೇಂದ್ರವನ್ನಾಗಿ ರೂಪಿಸಿರುವುದು ಇಲ್ಲಿನ ಜನತೆಗೆ ಸಂತಸದ ಸಂಗತಿಯಾಗಿದೆ.

ಜಾತ್ರಾ ಮಹೋತ್ಸವ
 ತಾಲೂಕಿನ ಶಿಶುವಿನಹಾಳ ಗ್ರಾಮದ ಶರೀಫ್‌ಗಿರಿಯಲ್ಲಿ ಗುರು ಗೋವಿಂದ ಭಟ್ಟರ ಹಾಗೂ ಸಂತ ಷರೀಫರ ಜಾತ್ರಾ ಮಹೋತ್ಸವವು ಮಾ.15 ರಿಂದ 17ರ ವರೆಗೆ ನಡೆಯಲಿದೆ. ಮಾ. 15 ರಂದು ಬೆಳಗ್ಗ 9 ಗಂಟೆಗೆ ಭಾವೈಕ್ಯ ಧ್ವಜಾರೋಹಣ ಜರುಗಲಿದ್ದು, ಸಾಯಂಕಾಲ 4 ಗಂಟೆಗೆ ಶಿಶುನಾಳೀ ಶನ ದೇವಸ್ಥಾನದಿಂದ ಶರೀಫಗಿರಿಗೆ ವಾದ್ಯ ವೈಭವಗಳೊಂದಿಗೆ ತೇರಿನ ಕಳಸದ ಮೆರವಣಿಗೆ, ನಂತರ ಕಳಸಾರೋಹಣ ಜರುಗುವುದು. ಮಹಾರಥೋತ್ಸವವು ಮಾರ್ಚ್‌ 16 ರಂದು ಸಂಜೆ 6 ಗಂಟೆಗೆ ಜರುಗಲಿದ್ದು, ಮಾ. 17 ರಂದು ಕಡುಬಿನ ಕಾಳಗ ನಡೆಯಲಿದೆ. ಹುಬ್ಬಳ್ಳಿ ಬೇಕರಿ ಮಾಲೀಕ ವಿಶ್ವನಾಥಸಾ, ಅಶೋಕ ದಲಬಂಜನ್‌, ದಾವಣಗೆರೆ ಶಿಲ್ಪಿ ಗುರೂಜಿ, ಗಣೇಶ ಗುಡಿ ಭಜನಾ ಸಂಘ, ಶಿರಗುಪ್ಪಿ ಗುರುಲಿಂಗೇಶ್ವರ ದಾಸೋಹ ಸಮಿತಿ, ಯಲಿವಾಳ ಗ್ರಾಮಸ್ಥರಿಂದ ಅನ್ನ ದಾಸೋಹ ಸೇವೆ ಜರುಗಲಿದೆ. ಜಾತ್ರೆಗೆ ಬರುವ ಭಕ್ತರಿಗೆ ಹುಬ್ಬಳ್ಳಿ, ಹಾವೇರಿ, ಶಿಗ್ಗಾವಿ, ಸವಣೂರ, ಲಲಕ್ಷ್ಮೇಶ್ವರ, ಗುಡಗೇರಿಯಿಂದ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.