ಶಿಗ್ಗಾವಿ: ಜೀವ ಭಯದಲ್ಲೇ ಹೆದ್ದಾರಿ ದಾಟುವ ದುಸ್ಥಿತಿ!

ಜನರು ಕೂಡ ದಿನವೂ ಅಪಾಯಕಾರಿ ರಸ್ತೆ ದಾಟುವುದನ್ನು ಬಿಟ್ಟಿಲ್ಲ

Team Udayavani, Jul 8, 2023, 6:40 PM IST

ಶಿಗ್ಗಾವಿ: ಜೀವ ಭಯದಲ್ಲೇ ಹೆದ್ದಾರಿ ದಾಟುವ ದುಸ್ಥಿತಿ!

ಶಿಗ್ಗಾವಿ: ಪಟ್ಟಣದ ಬಳಿ ಮೇಲ್ಸೇತುವೆ, ಕೆಳ ಸೇತುವೆ ಸಂಚಾರಕ್ಕೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ, ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ರಾಷ್ಟ್ರೀಯ ಹೆದ್ದಾರಿಯನ್ನು ಜನರು ದಿನನಿತ್ಯ ಜೀವ ಭಯದಲ್ಲೇ ದಾಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಹಶೀಲ್ದಾರ್‌ ಕಚೇರಿ, ಉಪ ನೋಂದಣಿ ಕಚೇರಿ, ಭೂ-ದಾಖಲೆ ಕಚೇರಿ, ಸಬ್‌ ಟ್ರಜರಿ ಅಲ್ಲದೇ, ಜೆಎಂಎಫ್‌ಸಿ ಹಿರಿಯ, ಕಿರಿಯ ನ್ಯಾಯಾಲಯಗಳಿಗೆ ಹೋಗಿ ಬರಲು ಸಿಬ್ಬಂದಿ ಕಿಲೋ ಮೀಟರ್‌ಗಟ್ಟಲೇ ಊರು ಸುತ್ತುವರೆದು ಹೋಗಬೇಕಾಗಿದೆ. ಇಲ್ಲವೇ, ಜನರು ಪ್ರಾಣಾಪಾಯದಲ್ಲಿ ತೀರಾ ಎಚ್ಚರದಿಂದಲೇ ರಾಷ್ಟ್ರೀಯ ಹೆದ್ದಾರಿ ದಾಟಬೇಕಾದ ಸ್ಥಿತಿ ಇದೆ.

ಶಿಗ್ಗಾವಿ ಪಟ್ಟಣದ ಬೆಳವಣಿಗೆಯ ವ್ಯಾಪ್ತಿ ವಿಸ್ತಾರವಾದಂತೆ ಜನರ ಸಮರ್ಪಕ ಹಾಗೂ ಅವಶ್ಯಕ ಬೇಡಿಕೆಗಳಿಗೆ ಅನುಗುಣವಾಗಿ ಷಟ³ಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಬೇಕಿತ್ತು. ಜನರ ಓಡಾಟ ಹೆಚ್ಚಾದಂತೆ ಕೆಳ ಸೇತುವೆ ಅಥವಾ ಮೇಲ್ಸೇತುವೆ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಿತ್ತು.ಆದರೆ, ಹೆದ್ದಾರಿ ಆರು ಪಥದಲ್ಲಿ ನಿರ್ಮಾಣವಾದ ಮೇಲೆ ಊರ ಪ್ರವೇಶಕ್ಕೆ “ಕೊಂಕಣ ಸುತ್ತಿ ಮೈಲಾರ’ಕ್ಕೆ ಬರುವಂತಾಗಿದೆ.

ದಿನ ಬೆಳಗಾದರೆ ಹಾವೇರಿ ಪಟ್ಟಣದ ಕಡೆಯಿಂದ ಸಾರಿಗೆ ಬಸ್‌ ಮೂಲಕ ಬರುವ ಪ್ರಯಾಣಿಕರು ಐಬಿ ಕ್ರಾಸ್‌ ರಸ್ತೆಯಲ್ಲಿ ಇಳಿಯಬೇಕು. ಇಲ್ಲವೇ, ಬಸ್‌ ನಿಲ್ದಾಣಕ್ಕೆ ಹೋಗಿ ನಂತರ ಕಿಲೋ ಮೀಟರ್‌ ಗಟ್ಟಲೇ ಊರು ಸುತ್ತಿ ಬರಬೇಕು. ಇಂತಹ ಅವಸರದ ಸನ್ನಿವೇಶದಲ್ಲಿ ಅವರು ಪ್ರಾಣಾಪಾಯ ಲೆಕ್ಕಿಸದೇ ರಸ್ತೆ ದಾಟಲು ಮುಂದಾಗುತ್ತಾರೆ. ಪಟ್ಟಣ ಪ್ರವೇಶಕ್ಕೆ
ರಾಷ್ಟ್ರೀಯ ಹೆದ್ದಾರಿ ಕ್ರಾಸ್‌ ಮಾಡಲೇಬೇಕಾದ ಅನಿವಾರ್ಯ ಪರಿಸ್ಥಿತಿ ಇಲ್ಲಿದೆ.

ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಶಿಕ್ಷಣಕ್ಕಾಗಿ ದಿನನಿತ್ಯ ಬರುವ ನೂರಾರು ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದು ಹೆದ್ದಾರಿ ದಾಟಬೇಕಾದ ಅನಿವಾರ್ಯತೆ ಎದುರಾಗಿದೆ. ಹೆದ್ದಾರಿ ದಾಟುವವರಿಗೆ ವಾಹನಗಳು ಡಿಕ್ಕಿ ಹೊಡೆದು ಹಲವರು ಪ್ರಾಣ ಕಳೆದುಕೊಂಡ ಪ್ರಕರಣಗಳು ಜರುಗಿವೆ. ಪಟ್ಟಣದ ನಾಗರಿಕರು ತಮ್ಮ ಜನಪ್ರತಿನಿಧಿಗಳಿಗೆ ಅಗಾಗ್ಗೆ ಮೇಲ್ಸೇತುವೆ ಮತ್ತು ಸಮರ್ಪಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ ಪತ್ರ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ, ಜನರ ಬೇಡಿಕೆಗಳು ಮಾತ್ರ ಇನ್ನೂ ಈಡೇರಿಲ್ಲ.

ಧಾರವಾಡ ಸಂಸದ ಪ್ರಲ್ಹಾದ ಜೋಶಿ, ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ತಿಳಿಸಿದ್ದಾರೆ.

2018 ರಲ್ಲಿಯೇ ಶಾಸಕ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರು ಹೆದ್ದಾರಿ ಪ್ರಾಧಿಕಾರದ ಅಭಿಯಂತರರಿಗೆ ಪತ್ರ ಬರೆದು ಕೈ ತೊಳೆದುಕೊಂಡಿದ್ದಾರೆ. ಅಪಘಾತ ಸಂಭವಿಸಿದಾಗ ರಕ್ಷಣೆಗೆ ಬರುವ ಪೊಲೀಸರು ಇಲ್ಲೊಂದು ಬ್ರಿಜ್‌ ಆಗಬೇಕಿತ್ತು. ಏನು ಮಡೋದು ಅಂತಾ ಉಸಿರು ಹಾಕುತ್ತಾರೆ. ಜನರ ಸಮಸ್ಯೆಗೆ ಪರಿಹಾರವಂತೂ ಇದುವರೆಗೂ ದೊರಕಿಲ್ಲ. ಜನರು ಕೂಡ ದಿನವೂ ಅಪಾಯಕಾರಿ ರಸ್ತೆ ದಾಟುವುದನ್ನು ಬಿಟ್ಟಿಲ್ಲ. ದಿನ ಸಾಯುವವರಿಗೆ ಅಳುವವರಾರು ಎಂಬಂತಾಗಿದೆ.

ಪಟ್ಟಣದ ಸಬ್‌ ರಜಿಸ್ಟ್ರಾರ್‌ ಕಚೇರಿಗೆ ತೆರಳಲು ರಸ್ತೆ ದಾಟುವಾಗ ಇಲ್ಲಿನ ದಸ್ತಾವೇಜು ಬರಹಗಾರ ನದಾಫ್‌ ಎನ್ನುವವರು ವಾಹನಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡರು. ಅಲ್ಲದೇ, ಇತ್ತೀಚೆಗೆ ತುರ್ತು ಚಿಕಿತ್ಸೆಗಾಗಿ ಕುಂದೂರು ಗ್ರಾಮದ ಮಹಿಳೆ ಶಿಗ್ಗಾವಿ ಆಸ್ಪತ್ರೆಗೆ ಬರಲು ರಸ್ತೆ ದಾಟುವಾಗ ವಾಹನಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡರು. ಇಲ್ಲಿನ ಶಾಲಾ- ಕಾಲೇಜುಗಳಿಗೆ ಹೋಗಲು ಪ್ರತಿದಿನ ಬೆಳಿಗ್ಗೆ-ಸಾಯಂಕಾಲ ವಿದ್ಯಾರ್ಥಿಗಳು ಇದೇ ಅಪಾಯಕಾರಿ ರಸ್ತೆ ದಾಟುತ್ತಾರೆ. ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವಿಭಾಗದ ಅಧಿಕಾರಿಗಳು ಅವೈಜ್ಞಾನಿಕ ರಸ್ತೆ ಕಾಮಗಾರಿ ಪುನಃ ಪರಿಶೀಲಿಸಬೇಕು.
ರವಿ ಗುಡಸಲಮನಿ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಚೇರ್ಮನ್‌, ಶಿಗ್ಗಾವಿ

ಶಿಗ್ಗಾವಿ ಪಟ್ಟಣ ವ್ಯಾಪ್ತಿಯಲ್ಲಿ ಹೊಸ ಫ್ಲೈ ಓವರ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಇಲಾಖೆಯಲ್ಲಿ ಹೊಸ ಪ್ರಸ್ತಾವನೆಯಿಲ್ಲ‌ . ಪಟ್ಟಣದ ಅರ್ಧ ಕಿಮೀ ದೂರದಲ್ಲಿ ಖುರ್ಷಾಪೂರ ಗ್ರಾಮದ ರಸ್ತೆಯ ತಿರುವಿಗೆ ಮೇಲ್ಸೇತುವೆ ನಿರ್ಮಾಣಕ್ಕೆ ಇಲಾಖೆಯ ಕ್ರಿಯಾಯೋಜನೆಯಿತ್ತು. ಅದನ್ನು ನಿರ್ಮಿಸಲು ಟೆಂಡರ್‌ ಪಡೆದ ಏಜೆನ್ಸಿಯ ತಕರಾರಿನ ಹಿನ್ನೆಲೆಯಲ್ಲಿ ಯೋಜನೆ ಕೈಬಿಡಲಾಯಿತು. ಪುನಃ ಎರಡನೇ ಬಾರಿಗೆ ಪ್ರಾ ಧಿಕಾರದ ತಾಂತ್ರಿಕ ಇಲಾಖೆಯಿಂದ ಟೆಂಡರ್‌ ಕರೆಯಲಾಗುವುದು.
ಕಿರಣ, ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರ, ಧಾರವಾಡ

ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಸ್ಥಳೀಯ ಶಾಸಕರು ಒತ್ತಾಯಿಸಿ ಮಂಜೂರಾತಿ ಪಡೆದಿಲ್ಲ. ಕೇಂದ್ರದಲ್ಲಿ ಅವರದೇ ಪಕ್ಷದ ಸಚಿವರು ಇದ್ದಾಗಲೂ ಹೆದ್ದಾರಿ ಅಭಿವೃದ್ಧಿ, ತಾಂತ್ರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿಲ್ಲ. ಸಾಕಷ್ಟು ಬಾರಿ ಇಲ್ಲಿನ ನಾಗರಿಕರು ರಸ್ತೆ ಅವಘಡ, ಪ್ರಾಣ ಹಾನಿಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದರೂ ಕೇವಲ ಪತ್ರ ಬರೆದು ಕೈತೊಳೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾಗಿದ್ದವರಿಗೆ ಹೆದ್ದಾರಿ ಅಭಿವೃದ್ಧಿಗೆ ಕ್ರಮ ವಹಿಸುವುದು ದೊಡ್ಡ ವಿಚಾರವೇ ಅಲ್ಲ.
ಮಂಜುನಾಥ ವಿ. ಮಣ್ಣನ್ನವರ,ಕಾಂಗ್ರೆಸ್‌ ವಕ್ತಾರ

*ಬಸವರಾಜ ಹೊನ್ನಣ್ಣವರ

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.