ತ್ಯಾಗ-ಸೇವಾ ಮನೋಭಾವ ಅಳವಡಿಸಿಕೊಳ್ಳಿ


Team Udayavani, Jan 27, 2019, 6:41 AM IST

shivabsava.jpg

ಅಕ್ಕಿಆಲೂರು: ಭಾರತದಲ್ಲಿ ಜನಿಸಿದ ಪ್ರತಿ ಪ್ರಜೆಗಳು ತ್ಯಾಗ ಮತ್ತು ಸೇವಾ ಮನೋಭಾವದಿಂದ ಬದುಕಿದರೆ ದೇಶ ಜಗತ್ತಿಗೆ ಜಗದ್ಗುರುವಾಗುವುದರಲ್ಲಿ ಸಂಶಯವಿಲ್ಲ ಎಂದು ವಿರಕ್ತಮಠದ ಶಿವಬಸವ ಶ್ರೀಗಳು ಹೇಳಿದರು.

ಪಟ್ಟಣದ ನರಸಿಂಗರಾವ್‌ ದೇಸಾಯಿ ಸಂಯುಕ್ತ ಪಪೂ ಕಾಲೇಜಿನ ಆವರಣದಲ್ಲಿ 70ನೇ ಗಣರಾಜ್ಯೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.

ಪ್ರತಿಯೊಬ್ಬರೂ ವೈಯಕ್ತಿಕ ಹಿತಾಸಕ್ತಿಗಾಗಿ ಮಾತ್ರ ಶ್ರಮಿಸದೇ ಭಾರತದ ಮೂಲ ಆಚರಣೆಗಳನ್ನು ಅರಿತು, ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಭಾರತ ಜಾಗತಿಕಮಟ್ಟದಲ್ಲಿ ಸ್ವಾವಲಂಬಿಯಾಗಿ ಮುನ್ನಡೆಯಬಲ್ಲದು. ವಿಶ್ವದಲ್ಲಿ ಅತೀ ಹೆಚ್ಚು ಯುವಜನಾಂಗ ಹೊಂದಿದ ನಮ್ಮ ದೇಶದಲ್ಲಿ ಬಹುತೇಕ ಯುವಕರಿಗೆ ಭಾರತದ ಸಂವಿಧಾನದ ಮಹತ್ವವೇ ತಿಳಿಯದಿರುವುದು ಬೇಸರದ ಸಂಗತಿ ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷ ಪ್ರದೀಪ ಶೇಷಗಿರಿ, ದೇಶವನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿ ಯುವಶಕ್ತಿಯದಾಗಿದ್ದು, ಎಲ್ಲ ರಂಗಗಳಲ್ಲಿ ಉತ್ತಮ ಜ್ಞಾನ ಸಂಪಾದಿಸಿ ದೇಶದ ಆಸ್ತಿಯಾಗಿ ಹೊರಹೊಮ್ಮಬೇಕಾದ ಅಗತ್ಯತೆ ಇಂದಿನ ವಿದ್ಯಾರ್ಥಿಗಳಿಗಿದೆ ಎಂದರು.

ನಂತರ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿಯ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಾರ್ಗಿಲ್‌ ವಿಜಯೋತ್ಸವದ ರೂಪಕ ನೆರೆದಿದ್ದ ಸಾವಿರಾರು ಜನರನ್ನು ಮಂತ್ರಮುಗ್ದಗೊಳಿಸಿತು. ದೇಶ ಕಾಯುವ ಯೋಧರು ವೀರ ಮರಣವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ನೆರವೇರಿಸುವ ದೃಶ್ಯವಂತೂ ನೆರೆದವರನ್ನು ಭಾವನಾತ್ಮವಾಗಿ ಕಟ್ಟಿ ಹಾಕಿತು. ಶಿರಸಿಯ ವಿಶೇಷ ಚೇತನ ಕಲಾವಿದರಿಂದ ನಡೆದ ಸಂಗೀತ ಕಾರ್ಯಕ್ರಮದಲ್ಲಿ ದೇಶಭಕ್ತಿಗಳನ್ನು ಹಾಡಲಾಯಿತು.

ಇದಕ್ಕೂ ಮುನ್ನ ಪಟ್ಟಣದ 20ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಧ್ವಜವಂದನೆ ಪರೇಡ್‌, ಆಕರ್ಷಕ ಪಥಸಂಚಲನ, ನೇತಾಜಿ ಸುಭಾಸಚಂದ್ರ ಭೋಸ ಯುವಕ ಮಂಡಳದ ಬೈಕ್‌ ಪರೇಡ್‌ ಗಣರಾಜ್ಯೋತ್ಸವದ ಕಳೆ ಹೆಚ್ಚಿಸಿದವು.

ಜಿಪಂ ಸದಸ್ಯ ಟಾಕನಗೌಡ ಪಾಟೀಲ, ಗ್ರಾಪಂ ಉಪಾಧ್ಯಕ್ಷೆ ಸರೋಜಾ ಪಾಟೀಲ, ಬಸನಗೌಡ ಪಾಟೀಲ, ಎಚ್.ಬಿ.ಉಮಾಪತಿ, ಪಿಡಿಒ ಪಿ.ಎಸ್‌.ಬಿಜ್ಜೂರ, ಪ್ರತಾಪ ಎನ್‌.ಎಂ., ಶಿವಕುಮಾರ ದೇಶಮುಖ, ಷಣ್ಮುಖಪ್ಪ ಮುಚ್ಚಂಡಿ, ಬಸವರಾಜ ಕೋರಿ, ನಾಗರಾಜ ಪಾವಲಿ, ಕೃಷ್ಣ ಈಳಗೇರ, ವಿಶ್ವನಾಥ ಭಿಕ್ಷಾವರ್ತಿಮಠ, ಫಕ್ಕೀರಗೌಡ ಪಾಟೀಲ ಸೇರಿದಂತೆ ಗ್ರಾಪಂ ಪದಾಧಿಕಾರಿಗಳು, ಶಾಲಾ-ಕಾಲೇಜು ಸಿಬ್ಬಂದಿವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.