ಮಠಾಧೀಶರು ಅಜ್ಞಾನಿಗಳಾದರೆ ಉದ್ಧಾರವಾಗದು ಮಠ 


Team Udayavani, Dec 26, 2018, 4:59 PM IST

26-december-13.gif

ಬಂಕಾಪುರ: ಜ್ಞಾನಿ ಸ್ವಾಮೀಜಿ, ನಿಸ್ವಾರ್ಥ ಸೇವೆ ಸಲ್ಲಿಸುವ ಭಕ್ತರಿದ್ದಾಗ ಮಾತ್ರ ಮಠ ಮಾನ್ಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಸುಂಕದಕೇರಿಯಲ್ಲಿರುವ ಶ್ರೀ ಗುರು ಬಸವೇಶ್ವರ ತಪೋವನ ದೇಸಾಯಿಮಠದ ಆವರಣದಲ್ಲಿ ನಡೆದ ಶಿವಾನುಭವ ಕಾರ್ಯಕ್ರಮ, ಬಸವೇಶ್ವರರ ನೂತನ ಮೂರ್ತಿ ಅನಾವರಣದ ಅಂಗವಾಗಿ ನಡೆದ ಧರ್ಮ ಸಮಾರಂಭದಲ್ಲಿ ಮಾತನಾಡಿದ ಅವರು, ಮಠದ ಸ್ವಾಮೀಜಿಗಳು ಅಜ್ಞಾನಿಗಳಾಗುತ್ತಿರುವುದರಿಂದ ಸ್ವಾರ್ಥಿ ಭಕ್ತರು ಹುಟ್ಟಿ ಮಠ ಮಾನ್ಯಗಳ ಹೆಸರು ಹಾಳುಮಾಡುತ್ತಿದ್ದಾರೆ. ಮಠಾಧೀಶರು ಜಾತಿ, ರಾಜಕೀಯ ಮೆಟ್ಟಿ ನಿಂತು ಮಾನವ ಧರ್ಮ ಪರಿಪಾಲನೆಗೆ ನಿಂತಾಗ ಮಾತ್ರ ಸರ್ವ ಜನಾಂಗದವರ ಹೃದಯ ಭಕ್ತಿ ಭಾವ ನೆಲೆಯೂರಲಿದೆ ಎಂದು ಹೇಳಿದರು.

ಬಸವಣ್ಣನವರು 12ನೇ ಶತಮಾನದಲ್ಲಿಯೇ ಸ್ತ್ರೀ, ಪುರುಷರಲ್ಲಿ ಸಮಾನತೆ ತರಲು ಶ್ರಮಿಸಿದವರಾಗಿದ್ದರು. ಅಂತರ್‌ಜಾತಿ ವಿವಾಹ ಮಾಡಿ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಶ್ರಮಿಸಿದ ಚಿಂತನಾಶೀಲ ಮಹಾನ ವ್ಯಕ್ತಿಗಳಾಗಿದ್ದರು. ಇತ್ತೀಚಿನ ದಿನಗಳಲ್ಲಿ ಶರಣರ, ಕವಿ, ಸಾಹಿತಿ, ಸಂತರು ರಚಿಸಿದ ವಚನ ಸಾಹಿತ್ಯವನ್ನು ತಮಗೆ ಬೇಕಾದಹಾಗೆ ಬದಲಿಸಿಕೊಳ್ಳುತ್ತಿರುವುದು ಖೇದಕರ ಎಂದು ವಿಷಾದ ವ್ಯಕ್ತಪಡಿಸಿದರು.

ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಸತ್ಯ ಭಕ್ತಿಯ ಸಂಕೇತವೇ ಬಸವಣ್ಣನವರಾಗಿದ್ದರು. ಉತ್ಕೃಷ್ಠ ಪ್ರೀತಿಯೆ ಭಕ್ತಿ ಎಂದು ತೊರಿಸಿಕೊಟ್ಟ ಮಹಾ ಚೇತನರಾಗಿದ್ದರು. ಅವರ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಹೇಳಿದರು. ಶ್ರೀಮಠದ ಎದುರಿಗೆ ಇರುವ ಪುರಾತನ ಅಯ್ಯನ ಹೊಂಡವನ್ನು ಅಭಿವೃದ್ಧಿ ಪಡೆಸಿ ವರದಾ ನದಿ ನೀರು ತುಂಬಿಸಲಾಗುವುದು ಈ ಮೂಲಕ ಸಾರ್ವಜನಿಕರಿಗೆ ಅನಕೂಲ ಕಲ್ಪಿಸುವೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ತೋಟಪ್ಪ ಉತ್ತಂಗಿ ಸಂಗಡಿಗರಿಂದ ಸಂಗೀತ ಸೇವೆ ನಡೆಯಿತು. ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ದೇಸಾಯಿಮಠದ ಮಹಾಂತ ಶ್ರೀಗಳು, ಮೋಹನ ಮೇಣಸಿನಕಾಯಿ ಮಾತನಾಡಿದರು.

ಸದಾಶಿವಪೇಟೆ ಗದಿಗೇಶ್ವರ ಶ್ರೀಗಳು, ಪ್ರಭು ಅರಗೋಳ,  ರಾಮಣ್ಣ ರಾನೋಜಿ, ಹೊನ್ನಪ್ಪ ಹೂಗಾರ, ಬಸವರಾಜ ದೇಸಾಯಿ, ಹುಚ್ಚಯ್ಯ ಹುಚ್ಚಯ್ಯನಮಠ, ಸುರೇಸಪ್ಪ ಹಂಡೆ, ಸಂಗಪ್ಪ ಹರವಿ, ಸಂಗಯ್ಯ ದೇಸಾಯಿಮಠ, ನಿಂಗನಗೌಡ ಪಾಟೀಲ, ಸಿದ್ದಲಿಂಗಪ್ಪ ಸಕ್ರಿ, ಚಂದ್ರಶೇಖರ ಅಂಕಲಕೋಟಿ, ರಾಘವೇಂದ್ರ ಮೇಲಗಿರಿ, ದುರಗಪ್ಪ ಗಿಡ್ಡಣ್ಣವರ ಇದ್ದರು. 

ಶರಣರು, ಮಹಾತ್ಮರನ್ನು ಸಮತಾ ದೃಷ್ಟಿಯಿಂದ ನೋಡುವಂತ ಮನೋಭಾವ ವೀರಶೈವ, ಲಿಂಗಾಯತ ಅನುಯಾಯಿಗಳಿಗೆ ಬರಬೇಕಿದೆ.  
ಬಾಲೇಹೊಸೂರಿನ ದಿಂಗಾಲೇಶ್ವರ ಶ್ರೀಗಳು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.