ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
Team Udayavani, Jan 18, 2020, 2:57 PM IST
ಹಾವೇರಿ: ಹಾವೇರಿ ಪೌರತ್ವ ತಿದ್ದುಪಡಿ ಕಾಯ್ದೆ-2019 ಬೆಂಬಲಿಸಿ ನಗರದ ಜಿಎಚ್ ಕಾಲೇಜ್ ವಿದ್ಯಾಲಯದ ಮುಂಭಾಗದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಜ ಕಲಕೋಟಿ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿರೋಧ ಪಕ್ಷಗಳು ಸುಳ್ಳು ಮಾಹಿತಿ ನೀಡುವ ಮೂಲಕ ರಾಷ್ಟ್ರದ ಅಲ್ಪಸಂಖ್ಯಾತರಲ್ಲಿ ಬಿಜೆಪಿ ಕುರಿತು ದ್ವೇಷ ಭಾವನೆ ಮೂಡಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದರಿಂದ ಭಾರತೀಯ ಮುಸ್ಲಿಮರಿಗೆ ಕಿಂಚಿತ್ತೂ ತೊಂದರೆ ಇಲ್ಲ ಎಂದರು.
ಇಂದಿನ ವಿದ್ಯಾರ್ಥಿಗಳು ಸರ್ಕಾರ ಜಾರಿಗೆ ತರುವ ಕಾಯ್ದೆ ಹಾಗೂಯೋಜನೆಗಳ ಕುರಿತು ಸಂಪೂರ್ಣ ತಿಳಿದುಕೊಂಡು ಸಮಾಜದ ಇತರರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ ಅಭಿಯಾನದ ಜಿಲ್ಲಾ ಸಂಚಾಲಕ ಡಾ| ಸಂತೋಷ ಆಲದಕಟ್ಟಿ, ಪ್ರವೀಣ ಸವಣೂರು, ಸತೀಶ ತಿಮ್ಮಣ್ಣನವರ, ವಿವೇಕಾನಂದ ಇಂಗಳಗಿ, ನಾಗರಾಜ ಹುರುಳಿಕೊಪ್ಪಿ, ಶಶಿ ಮುಗದೂರು,ನಿಖೀಲ್ ದೊಗ್ಗಳ್ಳಿ, ಸುನೀಲ ರಾಯ್ಕರ್, ಕಿರಣ ಕೋಣನವರ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ