ಲಯನ್ಸ್‌ ನವಭಾರತ ವಿದ್ಯಾಸಂಸ್ಥೆಗೆ ರಜತ ಸಂಭ್ರಮ


Team Udayavani, Feb 7, 2019, 11:40 AM IST

february-24.jpg

ಬಂಕಾಪುರ: ಇಲ್ಲಿನ ಲಯನ್ಸ್‌ ನವಭಾರತ ವಿದ್ಯಾಸಂಸ್ಥೆ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷರಾದ ಡಾ|ಆರ್‌.ಎಸ್‌. ಅರಳೆಲೆಮಠ ನೇತೃತ್ವದಲ್ಲಿ 25 ಸದಸ್ಯರನ್ನು ಹೊಂದಿ ಸೇವಾ ಮನೋಭಾವನೆ ಪ್ರತೀಕವಾಗಿ 1994ರಲ್ಲಿ ಪ್ರಾರಂಭಗೊಂಡ ಈ ಶಿಕ್ಷಣ ಸಂಸ್ಥೆ ರಜತ ಮಹೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿದೆ.

ಸಂಸ್ಥೆ ಜಿ.ಐ. ಸಜ್ಜನಗೌಡರ ಅಧ್ಯಕ್ಷತೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಎಲ್‌ಕೆಜಿ 17 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡ ಶಾಲೆ 2002ರಲ್ಲಿ ಬಸ್‌ ನಿಲ್ದಾಣ ಸಮೀಪ ಒಂದೂವರೆ ಏಕರೆ ಸ್ವಂತ ಜಾಗೆಯಲ್ಲಿ 8 ಸುಸಜ್ಜಿತ ಕೊಠಡಿ ನಿರ್ಮಿಸಿ 7ನೇ ವರ್ಗ ವರೆಗೆ ಶಿಕ್ಷಣ ನೀಡಲಾರಂಭಿಸಿತು.

2013-14 ರಲ್ಲಿ ಪ್ರೌಢಶಾಲೆಯಾಗಿ ಬಡ್ತಿಹೊಂದಿದ ಈ ಶಾಲೆ 22 ನುರಿತ ಶಿಕ್ಷಕ ವೃಂದದವರನ್ನು ಹೊಂದಿದ್ದು, 700 ವಿದ್ಯಾರ್ಥಿಗಳ ಸಂಖ್ಯಾಬಲದೊಂದಿಗೆ ಇಂದು ಮುನ್ನಡೆಯುತ್ತಲಿದೆ. 17 ವಿಶಾಲ ಕೊಠಡಿ ಪ್ರತೇಕ ಸ್ಮಾರ್ಟ್‌ಕ್ಲಾಸ್‌,ಅಭಾಕಸ್‌, ಸ್ಟಾಪ್‌ ರೂಂ, ಕಚೇರಿ, ವಿಶಾಲ ಆಟದ ಮೈದಾನ, ಶಾಲಾ ಸುತ್ತಲು ಗೀಡ, ಮರ, ಉದ್ಯಾನವನ ಹೊಂದಿರುವದರಿಂದ ಶಿಕ್ಷಣ ಸಂಸ್ಥೆ ಪರಿಸರ ಪ್ರೇಮ ಮೆರೆಯುತ್ತಿದೆ.

ಹಳೆಯ ವಿದ್ಯಾರ್ಥಿಗಳೊಂದಿಗೆ ತನ್ನ ವೈಭವದ ರಜತ ಮಹೋತ್ಸವ, ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ ಫೆ. 7 ಮತ್ತು 8 ರಂದು ಹಮ್ಮಿಕೊಳ್ಳಲಾಗಿದೆ.

ಫೆ. 7 ಬೆಳಗ್ಗೆ 10 ಗಂಟೆಗೆ ಗುರು ವಂದನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ಆರ್‌.ಎಸ್‌. ಅರಳೆಲೆಮಠ ವಹಿಸುವರು. ಉದ್ಘಾಟಕರಾಗಿ ಜಿಲ್ಲಾ ಲಯನ್ಸ್‌ ಗೌವರ್ನರ್‌ ಮೋನಿಕಾ ಸಾವಂತ, ಮುಖ್ಯ ಅತಿಥಿಗಳಾಗಿ ವಿಪ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಬಸವರಾಜ ಬೊಮ್ಮಾಯಿ, ಜನಪದ ಸಾಹಿತಿ ಡಾ| ಶಂಭು ಬಳಿಗಾರ ಸೇರಿದಂತೆ ಮತ್ತಿತರರು ಆಗಮಿಸುವರು.

ಫೆ. 8 ರಂದು ಬೆಳಗ್ಗೆ 10ಗಂಟೆಗೆ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಧ್ಯಕ್ಷತೆಯನ್ನು ಲಯನ್ಸ್‌ ನವಭಾರತ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಕೆ.ಎಂ.ಬಮ್ಮನಹಳ್ಳಿ ವಹಿಸಲಿದ್ದು, ಸಾರ್ವಜನಿಕ ಶಿಕ್ಷಣ ಸಂಸ್ಥೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಶಾಬಿರಾಬಿ ಯಲಗಚ್ಚ, ಬಿಇಒ ಶಿವಾನಂದ ಹೆಳವರ, ಪಿಎಸ್‌ಐ ಸಂತೋಷ ಪಾಟೀಲ, ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಸೇರಿದಂತೆ ಮತ್ತಿತರ ಗಣ್ಯ ಮಾನ್ಯರು ಆಗಮಿಸುವರು.

ಸದಾಶಿವ ಹಿರೇಮಠ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.