ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ


Team Udayavani, Sep 26, 2020, 9:09 PM IST

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ

ಹಾನಗಲ್ಲ: ತಾಲೂಕಿನ ಕೆಲವು ಗ್ರಾಮಗಳಲ್ಲಿ 200 ಜಾನುವಾರುಗಳಿಗೆ ಚರ್ಮ ಗಂಟು (ಲಂಫಿ ಸ್ಕಿನ್‌ ಡಿಸೀಸ್‌) ರೋಗ ಕಾಣಿಸಿಕೊಳ್ಳುತ್ತಿದ್ದು, ತಾಲೂಕು ಪಶು ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ನಿತ್ಯ ಬೆಳಿಗ್ಗೆ ವಿವಿಧ ಗ್ರಾಮಗಳಿಗೆ ತೆರಳಿ ರೋಗದ ವಿರುದ್ಧ ಚಿಕಿತ್ಸೆ ನೀಡುತ್ತಿದ್ದಾರೆ. ರೋಗ ನಿಯಂತ್ರಣದಲ್ಲಿದ್ದು, ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ರೋಗ ಹೊಸದಾಗಿ ಕಾಣಿಸಿಕೊಳ್ಳುತ್ತಿದ್ದು, ವೈರಸ್‌ನಿಂದ ಹಸುಗಳು ಸೇರಿದಂತೆ ಎಲ್ಲ ಜಾನುವಾರುಗಳಿಗೆ ಬರುತ್ತದೆ. ಜಾನುವಾರುಗಳಿಗೆ ಕಚ್ಚುವ ನೊಣಗಳು ಹಾಗೂ ಉಣ್ಣೆಗಳಿಂದ ಮತ್ತು ರೋಗವಿರುವ ಪ್ರಾಣಿಗಳ ನೇರ ಸಂಪರ್ಕದಿಂದಲೂ ಈ ರೋಗ ಪ್ರಾಣಿಗಳಲ್ಲಿ ಹರಡುತ್ತದೆ. ಕೆಲವೊಮ್ಮೆ ಕಲುಷಿತ ನೀರು, ಮೇವಿನಿಂದಲೂ ಹರಡುತ್ತದೆ. ಆದರೆ, ಈ ರೋಗ ಮನುಷ್ಯರಿಗೆ ಹರಡುವುದಿಲ್ಲ ಎಂದು ತಿಳಿಸಿದ್ದಾರೆ.

ತಾಲೂಕಿನಲ್ಲಿ ಅಧಿಕ ರಾಸುಗಳಿಗೆ ಈ ರೋಗ ಭೀತಿ ಎದುರಾಗುತ್ತಿದ್ದು, ಆರಂಭದಲ್ಲಿ ಪ್ರಾಣಿಗಳಲ್ಲಿ ಜ್ವರ ಕಾಣಿಸಿಕೊಂಡು ನಂತರ ಚರ್ಮದ ಮೇಲೆ ಗಂಟುಗಳಾಗಿ ಒಡೆದು ಗಾಯಗಳಾಗುತ್ತವೆ. ಇದರಿಂದ ಹಸುಗಳಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾಗುತ್ತದೆ. ಎತ್ತು ಮತ್ತು ಹೋರಿಗಳಲ್ಲಿ ಹೂಡುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದಕಾರಣ ರೈತರು ಕೂಡಲೇ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ಜಾನುವಾರು ಸಾಕಣೆ ಮಾಡುವವರು ಪಶು ವೈದ್ಯಾಧಿಕಾರಿಗಳ ಸಲಹೆ ಪಡೆಯುವುದು ಉತ್ತಮ ಎಂದು ಸೂಚಿಸಿದ್ದಾರೆ.

ಹಾನಗಲ್ಲ ತಾಲೂಕಿನ ಪಶುಪಾಲನಾ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು ವಿವಿಧ ದರ್ಜೆಯ 21 ಪಶು ಚಿಕಿತ್ಸಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, 20 ನೇ ಜಾನುವಾರು ಗಣತಿ ಅನುಸಾರ ತಾಲೂಕಿನಲ್ಲಿ ಒಟ್ಟು 56,739 ದನ, 11,782 ಎಮ್ಮೆ, 23,050 ಕುರಿ, 17,505 ಮೇಕೆಗಳಿವೆ. ಹಾನಗಲ್ಲ ತಾಲೂಕು ಪಶು ಸಂಸ್ಥೆಯವರು ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದಲ್ಲದೆ, ಆರೋಗ್ಯ ರಕ್ಷಣೆ, ವಿಮಾ ಸೌಲಭ್ಯ ಮತ್ತು ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಮಾಡುತ್ತಿವೆ. ವಾರದಲ್ಲಿ ನಾಲ್ಕು ದಿನ ತಾಲೂಕಿನ ನಿಗ ಪಡಿಸಿದ ಗ್ರಾಮಗಳಿಗೆ ಭೇಟಿ ಕೊಟ್ಟು ಜಾನುವಾರುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಂಚಾರಿ ಚಿಕಿತ್ಸೆಯೂ ಕೂಡ ಜಾರಿಯಲ್ಲಿದೆ. ರೈತರು, ಜಾನುವಾರು ಹಾಗೂ ಸಾಕಣೆದಾರರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಿ.ಎಂ.ಉದಾಸಿ ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.