ಕೋವಿಡ್ ಗೆ ಸಾಮಾಜಿಕ ಅಂತರವೇ ಮದ್ದು
Team Udayavani, Aug 1, 2020, 1:04 PM IST
ಹಿರೇಕೆರೂರು: ರಟ್ಟಿಹಳ್ಳಿ ತಾಲೂಕಿನ ಗುಡ್ಡದಮಾದಾಪುರ ಗ್ರಾಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಇತ್ತೀಚೆಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಕೃಷಿ ಸಚಿವರು, ಕೋವಿಡ್ನಿಂದಾಗಿ ಎಲ್ಲರಿಗೂ ಸಮಸ್ಯೆಯಾಗಿದೆ. ಕೊರೊನಾಕ್ಕೆ ಕಡಿವಾಣ ಬಿಳಬೇಕಾದರೆ ಸಾಮಾಜಿಕ ಅಂತರ ಹಾಗೂ ಸ್ವಚ್ಛತೆ ಮುಖ್ಯವಾಗಿದೆ. ಪ್ರತಿಯೊಬ್ಬರೂ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವ ಮೂಲಕ ಕೋವಿಡ್ ನಿಯಂತ್ರಣ ಮಾಡಬೇಕೆಂದು ಹೇಳಿದರು. ತಾಲೂಕಿನ ಜನರು ತೋರಿಸಿದ ಪ್ರೀತಿ-ವಿಶ್ವಾಸಕ್ಕೆ ಎಂದಿಗೂ ಚಿರರುಣಿಯಾಗಿದ್ದೇನೆ. ಗ್ರಾಮದ ಜನರ ಎಲ್ಲ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು. ಗ್ರಾಮದ ಬಹುದಿನಗಳ ಕನಸಾದ ಕೆರೆ ತುಂಬಿಸುವ ಯೋಜನೆಯು ಮುಕ್ತಾಯ ಹಂತಕ್ಕೆ ಬಂದಿದ್ದು, ಶೀಘ್ರದಲ್ಲಿ ಕೆರೆ ತುಂಬಿಸುವ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಗುರುಬಸವರಾಜ, ಎಪಿಎಂಸಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ತಾಪಂ ಅಧ್ಯಕ್ಷ ದಿಳ್ಳೆಪ್ಪ ಹಳ್ಳಳ್ಳಿ, ಸದಸ್ಯ ಚಂದ್ರಪ್ಪ ಸಾಸ್ವಿಹಳ್ಳಿ, ರೇಣಕಪ್ಪ ಭರಮಗೌಡ್ರ, ಮಂಜಣ್ಣ ಬೇವಿನಹಳ್ಳಿ, ಡಿ.ಸಿ.ಪಾಟೀಲ, ಮಹೇಂದ್ರ ಬಡಳ್ಳಿ, ಇಒ ಮೋಹನಕುಮಾರ, ಅಧಿಕಾರಿಗಳಾದ ಎಸ್ ವಿ.ಪುರಾಣಿಕ, ಬಿ.ಬಸವಣ್ಣೆಪ್ಪ, ವಿಷ್ಣುಕಾಂತ, ರಾಜೀವ್ ಮರಿಗೌಡ್ರ, ಪಿಎಸ್ಐ ಆರ್.ಆಶಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ