ಹೊಲದಲ್ಲಿ ಮಣ್ಣು ಪರೀಕ್ಷೆ -ರೈತರಿಗೆ ಅರಿವು ಕಾರ್ಯಾಗಾರ
ಭೂಮಿಯಲ್ಲಿ ಲವಣಾಂಶ ಹೆಚ್ಚಾದಾಗ ಬಸಿಗಾಲುವೆ ಮೂಲಕ ಉಪ್ಪನ್ನು ಹೊರಹಾಕಿ: ಡಾ| ರಾಜಕುಮಾರ
Team Udayavani, Apr 1, 2022, 5:13 PM IST
ರಾಣಿಬೆನ್ನೂರ: ಮಣ್ಣು ಪರೀಕ್ಷೆ ಏಕೆ ಮಾಡಿಸಬೇಕು. ಅದರ ಮಹತ್ವವೇನು ಹಾಗೂ ಮಣ್ಣು ಪರೀಕ್ಷೆ ಚೀಟಿ ಆಧಾರದ ಮೇಲೆ ಅವಶ್ಯಕತೆಗೆ ತಕ್ಕಂತೆ ರೈತರ ಜಮೀನಿನಲ್ಲಿ ಕೊರತೆ ಇರುವ ಪೋಷಕಾಂಶಗಳ ನಿರ್ವಹಣೆ ಹಾಗೂ ರಸಾಯನಿಕ ಗೊಬ್ಬರಗಳ ಬಳಕೆ ಹೇಗೆ ಮಾಡಬೇಕೆಂಬುದರ ಕುರಿತು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ| ರಾಜಕುಮಾರ ಜಿ.ಆರ್. ಮಾಹಿತಿ ನೀಡಿದರು.
ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಣ್ಣು ಪರೀಕ್ಷೆ ಮಹತ್ವದ ಅರಿವು ಮೂಡಿಸುವ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಮಣ್ಣಿನ ರಸಸಾರ ಹುಳಿ ಇದ್ದಾಗ ಭೂಮಿಗೆ ಸುಣ್ಣ ಹಾಗೂ ಕ್ಷಾರೀಯ ಇದ್ದಾಗ ಭೂಮಿಗೆ ಜಿಪ್ಸಂನ್ನು ಬೆರೆಸಬೇಕು. ನಂತರ ಬೆಳೆಗಳಿಗೆ ಗೊಬ್ಬರಗಳನ್ನು ಪೂರೈಸಬೇಕೆಂದರು.
ಭೂಮಿಯಲ್ಲಿ ಲವಣಾಂಶ ಹೆಚ್ಚಿದಾಗ ಬಸಿಗಾಲುವೆ ಮೂಲಕ ಉಪ್ಪನ್ನು ಹೊರಹಾಕಬೇಕು. ಸಾವಯವ ಗೊಬ್ಬರ ಮಣ್ಣಿನಲ್ಲಿ ಹೆಚ್ಚು ಸೇರಬೇಕಾದರೆ ಸಂಪೂರ್ಣ ಕಳಿತ ಗೊಬ್ಬರವನ್ನು ಮಣ್ಣಿಗೆ ಬಿತ್ತನೆ ಸಮಯದಲ್ಲಿ ಸಾಲಿನಲ್ಲಿ ನೀಡಬೇಕೆಂದರು.
ನಂತರ ಪ್ರಾತ್ಯಕ್ಷಿಕೆ ಮೂಲಕ ಮಣ್ಣು ಮಾದರಿ ಸಂಗ್ರಹಣೆ ವಿಧಾನವನ್ನು ರೈತರಿಗೆ ತೋರಿಸಿಕೊಟ್ಟರು.
ಹವಾಮಾನ ತಜ್ಞ ಡಾ|ಶಾಂತವೀರಯ್ಯ ಮಾತನಾಡಿ, ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿತವಾದ ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ರೈತರಿಗೆ ಪ್ರತಿ ಮಂಗಳವಾರ ಮತ್ತು ಶುಕ್ರವಾರದಂದು ತಾಲೂಕುವಾರು ಹವಾಮಾನ ಮುನ್ಸೂಚನೆ ಮತ್ತು ಹವಾಮಾನ ಆಧಾರಿತ ಕೃಷಿ ಸಲಹೆಗಳ ರವಾನೆ ಬಗ್ಗೆ ವಿವರಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ತಾಲೂಕುವಾರು ರೈತರ ವಾಟ್ಸಪ್ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಇವುಗಳ ಮುಖಾಂತರ ಹವಾಮಾನ ಆಧಾರಿತ ಕೃಷಿ ಸಂದೇಶಗಳನ್ನು ನೀಡಲಾಗುತ್ತಿದೆ. ರೈತರು ತಮ್ಮ ವಾಟ್ಸಪ್ ಮೊಬೈಲ್ ನಂಬರ್ಗಳನ್ನು ನೋಂದಾಯಿಸಲು ರೈತರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಹವಾಮಾನ ಮುನ್ಸೂಚನೆ ಆಧಾರಿತ ಮೇಘದೂತ ಮತ್ತು ಮಿಂಚಿನ ಮುನ್ಸೂಚನೆ ಆಧಾರಿತ ದಾಮಿನಿ ಆ್ಯಪ್ಗ್ಳನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಕೃಷಿ ಚಟುವಟಿಕೆಗಳಲ್ಲಿ ಬಳಕೆ ಮಾಡಲು ತಿಳಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮದ 25 ಜನ ರೈತರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್