ಶೀಘ್ರದಲ್ಲಿಯೇ ಮೆಡಿಕಲ್‌ ಕಾಲೇಜು ಕಾಮಗಾರಿ ಆರಂಭ


Team Udayavani, Oct 21, 2019, 3:08 PM IST

hv-tdy-1

ಹಾನಗಲ್ಲ: ಪ್ರಧಾನಮಂತ್ರಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪ್ರತಿ ಜಿಲ್ಲೆಗೆ ಒಂದು ಮೆಡಿಕಲ್‌ ಕಾಲೇಜು ಸ್ಥಾಪಿಸುವ ಸಂಕಲ್ಪ ಹೊಂದಿದ್ದು, ಹಾವೇರಿ ಜಿಲ್ಲೆಗೂ ಒಂದು ಮೆಡಿಕಲ್‌ ಕಾಲೇಜು ಮಂಜೂರಾಗಿದೆ. ಇದಕ್ಕೆ ಈಗಾಗಲೇ ಭೂಮಿ ಗುರುತಿಸಲಾಗಿದ್ದು, ಟೆಂಡರ್‌ ಕರೆದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ 21.40 ಕೋಟಿ ರೂ. ವೆಚ್ಚದಲ್ಲಿ ಹಾನಗಲ್ಲ ತಾಲೂಕು, ನವಲಗುಂದ-ಬನವಾಸಿ-ಮುಗವಳ್ಳಿ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಮಾರನಬೀಡನಲ್ಲಿ 8.25 ಕೋಟಿ ವೆಚ್ಚದಲ್ಲಿ ವಧಿ ಕ್ರಾಸ್‌ನಿಂದ ಕಾತೂರ ವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ, ಮಹರಾಜಪೇಟೆ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರನಲ್ಲಿ ಸುಸಜ್ಜಿತ ಎಪಿಎಂಸಿ ಮೆಘಾ ಮಾರ್ಕೆಟ್‌ ನಿರ್ಮಾಣ ಕಾಮಗಾರಿಗೆ 105 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ ಟೆಂಡರ್‌ ಹಾಲ್‌, ಸಿಸಿ ರಸ್ತೆಗಳು, ಒಳಚರಂಡಿ, ಪೊಲೀಸ್‌ ಸ್ಟೇಶನ್‌, ರೈತರ ವಿಶ್ರಾಂತಿ ಗೃಹ, ಪಾರ್ಕಿಂಗ್‌ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದರು.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ನೆರೆ ಹಾವಳಿ ನಡುವೆಯೂ ಅಭಿವೃದ್ಧಿಗೆ ಹಣ ಹರಿದು ಬರುತ್ತಿದೆ. ಮತ್ತೆ ಅಭಿವೃದ್ಧಿ ಪರ್ವ ಆರಂಭವಾಗಿದೆ. ನೀರಾವರಿಗೆ ಮೊದಲ ಆದ್ಯತೆ ನೀಡಿದ್ದು, ತಾಲೂಕಿನಾದ್ಯಂತ ಎಲ್ಲ ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ಚಾಲನೆಗೊಳ್ಳಲಿವೆ.

ಈಗಾಗಲೇ 504 ಕೋಟಿ ರೂ. ವೆಚ್ಚದಲ್ಲಿ ಬಾಳಂಬೀಡ ಹಾಗೂ ಶಿರಗೋಡ ಏತ ನೀರಾವರಿ ಯೋಜನೆಗಳು ಮಂಜೂರಾಗಿದ್ದು, ಇನ್ನೂ 50 ಕೋಟಿ ರೂ. ವೆಚ್ಚದಲ್ಲಿ ನರೇಗಲ್‌ ಹಾಗೂ ಹುಲಗಡ್ಡಿ ಏತ ನೀರಾವರಿ ಕಾಮಗಾರಿಗೆ ಹಣ ಮಂಜೂರಾಗಲಿದೆ. ಇದರೊಂದಿಗೆ ಮಾರನಬೀಡ ಗ್ರಾಮಕ್ಕೆ ಹೊಳಗಟ್ಟಿ ಕೆರೆ ಹೂಳು ತೆಗೆಯಲು 30 ಲಕ್ಷ ರೂ., ಎಎನ್‌ ಎಂ ಕೇಂದ್ರ ನಿರ್ಮಿಸಲು 35 ಲಕ್ಷ ರೂ., ಆಡೂರು ನೀರಲಗಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ., 12 ಲಕ್ಷ ರೂ. ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣ, ಮಾರನಬೀಡ-ಮಾಸನಕಟ್ಟಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ಬಿಡುಗಡೆ ಹಂತದಲ್ಲಿವೆ. ಇದರೊಂದಿಗೆ ನೆರೆ ಹಾವಳಿಯಿಂದ ಅತಿ ಹೆಚ್ಚು ಹಾನಿಗೊಳಗಾದ 10 ಗ್ರಾಪಂಗಳಿಗೆ ವಿಶೇಷ ಕ್ರಿಯಾ ಯೋಜನೆ ರಚಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ಜಿಪಂ ಸದಸ್ಯ ಮಾಲತೇಶ ಸೊಪ್ಪಿನ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯೆ ಶೀಲಾ ಗಡಿಯಪ್ಪನವರ, ಗ್ರಾಪಂ ಅಧ್ಯಕ್ಷ ವೀರಣ್ಣ ಮರಡಿ, ಗುತ್ತಿಗೆದಾರ ಅಶೋಕ ಪಾಟೀಲ, ಸಂತೋಷ ಹಿರೇಮಠ, ಮುಖಂಡರಾದ ಪದ್ಮನಾಭ ಕುಂದಾಪೂರ, ಎಂ.ಆರ್‌.ಪಾಟೀಲ, ಕಲ್ಯಾಣಕುಮಾರ ಶೆಟ್ಟರ, ಕುಮಾರ ಹತ್ತಿಕಾಳ, ಶಿವಕುಮಾರ ದೇಶಮುಖ, ಶಿವಲಿಂಗಪ್ಪ ತಲ್ಲೂರ, ರಾಜೂ ಗೌಳಿ ಇತರರಿದ್ದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.