- Monday 09 Dec 2019
ಶೀಘ್ರದಲ್ಲಿಯೇ ಮೆಡಿಕಲ್ ಕಾಲೇಜು ಕಾಮಗಾರಿ ಆರಂಭ
Team Udayavani, Oct 21, 2019, 3:08 PM IST
ಹಾನಗಲ್ಲ: ಪ್ರಧಾನಮಂತ್ರಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪ್ರತಿ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಸ್ಥಾಪಿಸುವ ಸಂಕಲ್ಪ ಹೊಂದಿದ್ದು, ಹಾವೇರಿ ಜಿಲ್ಲೆಗೂ ಒಂದು ಮೆಡಿಕಲ್ ಕಾಲೇಜು ಮಂಜೂರಾಗಿದೆ. ಇದಕ್ಕೆ ಈಗಾಗಲೇ ಭೂಮಿ ಗುರುತಿಸಲಾಗಿದ್ದು, ಟೆಂಡರ್ ಕರೆದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ 21.40 ಕೋಟಿ ರೂ. ವೆಚ್ಚದಲ್ಲಿ ಹಾನಗಲ್ಲ ತಾಲೂಕು, ನವಲಗುಂದ-ಬನವಾಸಿ-ಮುಗವಳ್ಳಿ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಮಾರನಬೀಡನಲ್ಲಿ 8.25 ಕೋಟಿ ವೆಚ್ಚದಲ್ಲಿ ವಧಿ ಕ್ರಾಸ್ನಿಂದ ಕಾತೂರ ವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ, ಮಹರಾಜಪೇಟೆ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಹಾವೇರಿ ಜಿಲ್ಲೆಯ ರಾಣಿಬೆನ್ನೂರನಲ್ಲಿ ಸುಸಜ್ಜಿತ ಎಪಿಎಂಸಿ ಮೆಘಾ ಮಾರ್ಕೆಟ್ ನಿರ್ಮಾಣ ಕಾಮಗಾರಿಗೆ 105 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ ಟೆಂಡರ್ ಹಾಲ್, ಸಿಸಿ ರಸ್ತೆಗಳು, ಒಳಚರಂಡಿ, ಪೊಲೀಸ್ ಸ್ಟೇಶನ್, ರೈತರ ವಿಶ್ರಾಂತಿ ಗೃಹ, ಪಾರ್ಕಿಂಗ್ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ನೆರೆ ಹಾವಳಿ ನಡುವೆಯೂ ಅಭಿವೃದ್ಧಿಗೆ ಹಣ ಹರಿದು ಬರುತ್ತಿದೆ. ಮತ್ತೆ ಅಭಿವೃದ್ಧಿ ಪರ್ವ ಆರಂಭವಾಗಿದೆ. ನೀರಾವರಿಗೆ ಮೊದಲ ಆದ್ಯತೆ ನೀಡಿದ್ದು, ತಾಲೂಕಿನಾದ್ಯಂತ ಎಲ್ಲ ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ಚಾಲನೆಗೊಳ್ಳಲಿವೆ.
ಈಗಾಗಲೇ 504 ಕೋಟಿ ರೂ. ವೆಚ್ಚದಲ್ಲಿ ಬಾಳಂಬೀಡ ಹಾಗೂ ಶಿರಗೋಡ ಏತ ನೀರಾವರಿ ಯೋಜನೆಗಳು ಮಂಜೂರಾಗಿದ್ದು, ಇನ್ನೂ 50 ಕೋಟಿ ರೂ. ವೆಚ್ಚದಲ್ಲಿ ನರೇಗಲ್ ಹಾಗೂ ಹುಲಗಡ್ಡಿ ಏತ ನೀರಾವರಿ ಕಾಮಗಾರಿಗೆ ಹಣ ಮಂಜೂರಾಗಲಿದೆ. ಇದರೊಂದಿಗೆ ಮಾರನಬೀಡ ಗ್ರಾಮಕ್ಕೆ ಹೊಳಗಟ್ಟಿ ಕೆರೆ ಹೂಳು ತೆಗೆಯಲು 30 ಲಕ್ಷ ರೂ., ಎಎನ್ ಎಂ ಕೇಂದ್ರ ನಿರ್ಮಿಸಲು 35 ಲಕ್ಷ ರೂ., ಆಡೂರು ನೀರಲಗಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ., 12 ಲಕ್ಷ ರೂ. ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣ, ಮಾರನಬೀಡ-ಮಾಸನಕಟ್ಟಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ಬಿಡುಗಡೆ ಹಂತದಲ್ಲಿವೆ. ಇದರೊಂದಿಗೆ ನೆರೆ ಹಾವಳಿಯಿಂದ ಅತಿ ಹೆಚ್ಚು ಹಾನಿಗೊಳಗಾದ 10 ಗ್ರಾಪಂಗಳಿಗೆ ವಿಶೇಷ ಕ್ರಿಯಾ ಯೋಜನೆ ರಚಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ಜಿಪಂ ಸದಸ್ಯ ಮಾಲತೇಶ ಸೊಪ್ಪಿನ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯೆ ಶೀಲಾ ಗಡಿಯಪ್ಪನವರ, ಗ್ರಾಪಂ ಅಧ್ಯಕ್ಷ ವೀರಣ್ಣ ಮರಡಿ, ಗುತ್ತಿಗೆದಾರ ಅಶೋಕ ಪಾಟೀಲ, ಸಂತೋಷ ಹಿರೇಮಠ, ಮುಖಂಡರಾದ ಪದ್ಮನಾಭ ಕುಂದಾಪೂರ, ಎಂ.ಆರ್.ಪಾಟೀಲ, ಕಲ್ಯಾಣಕುಮಾರ ಶೆಟ್ಟರ, ಕುಮಾರ ಹತ್ತಿಕಾಳ, ಶಿವಕುಮಾರ ದೇಶಮುಖ, ಶಿವಲಿಂಗಪ್ಪ ತಲ್ಲೂರ, ರಾಜೂ ಗೌಳಿ ಇತರರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ರಾಣಿಬೆನ್ನೂರ: ಸಂಸ್ಕಾರವು ಭಾರತದಜೀವಾಳವಾಗಿದ್ದು, ಅದರಲ್ಲಿ ಕರಿಬಸವೇಶ್ವರ ಕ್ಷೇತ್ರ ಒಂದಾಗಿದೆ. ಸ್ವಾಮಿಯು ನೊಂದು-ಬೆಂದು ಬಂದವರ ಬಾಳಿಗೆ ಅಭಯ ನೀಡುತ್ತಿದ್ದು,...
-
ಎಚ್.ಕೆ. ನಟರಾಜ ಹಾವೇರಿ: ಮಳೆ ಹಾಗೂ ನೆರೆ ಕಾರಣದಿಂದ ಈ ಬಾರಿ ಮಳೆಗಾಲದಲ್ಲಿ ಗ್ರಾಮೀಣ ರಸ್ತೆಗಳಿಗೆ ಹೆಚ್ಚು ಧಕ್ಕೆಯಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಂದಾಜು...
-
ಹಾವೇರಿ: ಹಿರೇಕೆರೂರು ಹಾಗೂ ರಾಣಿಬೆನ್ನೂರು ಉಪಚುನಾವಣೆ ಹಿನ್ನೆಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಒಂದು ತಿಂಗಳಿಂದ ಸುತ್ತಾಡಿದ ಅಭ್ಯರ್ಥಿಗಳು ಮತದಾನದ...
-
ಬ್ಯಾಡಗಿ: ಅರಿಯದೇ ಮಾಡಿದ ತಪ್ಪನ್ನು ಜವಾಬ್ದಾರಿಯುತ ನಾಗರಿಕ ಸಮಾಜ ಮನ್ನಿಸುತ್ತಿಲ್ಲ, ಹೀಗಾಗಿ ಎಚ್ಐವಿ(ಏಡ್ಸ್) ಸೋಂಕಿತರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ....
-
ಹಾವೇರಿ: ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ದೌರ್ಜನ್ಯ ವಿರೋಧಿ ಸಿ, ಪಶುವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಹತ್ಯಾಚಾರ...
ಹೊಸ ಸೇರ್ಪಡೆ
-
ಹರಪನಹಳ್ಳಿ: ಮುಂದಿನ ದಿನಗಳಲ್ಲಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರು...
-
ಲಕ್ನೋ: ಮದುವೆಯಾಗಬೇಕಾದ ಹುಡುಗ ತಡವಾಗಿ ಬಂದ ಎಂಬ ಕಾರಣಕ್ಕೆ ವಧು ಬೇರೆಯವನನ್ನೇ ಮದುವೆಯಾದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನಂಗಲ್ಜತ್ ಎಂಬಲ್ಲಿ...
-
ಮದ್ದೂರು: ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಹರಳಕೆರೆ ಗ್ರಾಮಸ್ಥರು ಘಟಕದ ಎದುರು ಪ್ರತಿಭಟನೆ...
-
ಮದ್ದೂರು: ಪಟ್ಟಣದಲ್ಲಿ 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಪುರಸಭೆ ವ್ಯಾಪ್ತಿಯಲ್ಲಿ 6ಕ್ಕೂ ಅಧಿಕ ಸ್ಮಶಾನಗಳು ಮೂಲ ಸೌಲಭ್ಯಗಳಿಲ್ಲದೆ ಬಣಗುಡುತ್ತಿವೆ. ಪುರಸಭೆ...
-
ಶಹಾಪುರ: ಸಮಾಜ ಈಗ ಆಧುನಿಕತೆಯತ್ತ ವೇಗವಾಗಿ ದಾಪುಗಾಲು ಹಾಕುತ್ತಿದೆ. ನಮ್ಮ ದೇಶದಲ್ಲಿ ನೆಂಟಸ್ಥನ ಮತ್ತು ಸಂಬಂಧಗಳಿಗೆ ಹೊಸ ಪರಿಭಾಷೆಗಳು ಹುಟ್ಟುತ್ತಿವೆ. ಇಂತಹ...