![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸರ್ಕಾರಿ ಶಾಲೆ ಪ್ರವೇಶಕ್ಕೆ ವಿಶೇಷ ಆಂದೋಲನ
Team Udayavani, May 16, 2019, 3:23 PM IST
![hav-1](https://www.udayavani.com/wp-content/uploads/2019/05/hav-1-7-620x279.jpg)
ಹಾವೇರಿ: ‘ಕೇಳ್ರಪ್ಪೋ ಕೇಳ್ರಿ… ನಿಮ್ಮ ಮಕ್ಕಳನ್ನ ನಮ್ ಸರ್ಕಾರಿ ಶಾಲಿಗೆ ಕಳಸ್ರಿ. ನಮ್ಮ ಶಾಲೆಲಿ ಗುಣಮಟ್ಟದ ಶಿಕ್ಷಣ ಕೊಡ್ತೇವಿ.. ಉಚಿತವಾಗಿ ವಿವಿಧ ಸೌಲಭ್ಯ ಕೊಡ್ತೇವಿ..’ ಹೀಗೆ ಊರಲ್ಲಿ ಡಂಗುರ ಸಾರಿ ಮಕ್ಕಳನ್ನು ತಮ್ಮ ಶಾಲೆಗೇ ಬರುವಂತೆ ಕೋರುತ್ತಿರುವವರು ಯಾವುದೇ ಖಾಸಗಿ ಶಾಲೆಯವರಲ್ಲ; ಸರ್ಕಾರಿ ಶಾಲೆಯವರು!
ಹೌದು, ಇದು ಆಶ್ಚರ್ಯವಾದರೂ ಸತ್ಯ. ಸರ್ಕಾರ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ತಾಲೂಕಿನ ಕಳ್ಳಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಮಕ್ಕಳ ಪ್ರವೇಶ ಸಂಖ್ಯೆ ಹೆಚ್ಚಿಸಲು ಈ ರೀತಿ ವಿಶೇಷ ಅಭಿಯಾನ ಆರಂಭಿಸಿರುವುದು ಎಲ್ಲರ ಗಮನಸೆಳೆದಿದೆ.
‘ಗುಣಾತ್ಮಕ ಶಿಕ್ಷಣದತ್ತ ಕಳ್ಳಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಿತ್ತ’ ಎಂಬ ಘೋಷವಾಕ್ಯದೊಂದಿಗೆ ಡಂಗುರ ಸಾರಲಾಗುತ್ತಿದೆ. ಗ್ರಾಮದ ಮನೆಮನೆಗೆ ಹೋಗಿ ಕರಪತ್ರ ಹಂಚಲಾಗುತ್ತಿದೆ. ಜತೆಗೆ ಮಕ್ಕಳನ್ನು ಸರ್ಕಾರಿ ಶಾಲೆಗೇ ಕಳುಹಿಸುವಂತೆ ಪಾಲಕರಲ್ಲಿ ಮನವೊಲಿಸುತ್ತಿರುವ ಕಳ್ಳಿಹಾಳ ಸರ್ಕಾರಿ ಶಾಲೆ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.
ಕರಪತ್ರ ಪ್ರಚಾರ: ಖಾಸಗಿ ಶಾಲೆಗಳು ಪತ್ರಿಕೆಗಳಲ್ಲಿ ಜಾಹೀರಾತು ಹಾಗೂ ಕರಪತ್ರಗಳ ಮೂಲಕ ತಮ್ಮ ಶಾಲೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸಿ, ಆಹ್ವಾನಿಸುವ ಮಾದರಿಯಲ್ಲಿಯೇ ಈ ಕಳ್ಳಿಹಾಳ ಸರ್ಕಾರಿ ಶಾಲೆಯವರು ಸಹ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗೆ ಆಕರ್ಷಿಸಲು ವಿಶೇಷ ಮಾಹಿತಿ ಇರುವ ಕರಪತ್ರ ಸಹ ಸಿದ್ಧಪಡಿಸಿದ್ದಾರೆ. ‘ಕಳ್ಳಿಹಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಪ್ರವೇಶ ಪ್ರಾರಂಭವಾಗಿದೆ. ಜೂನ್ 1ರಿಂದ 30ವರೆಗೆ ಸಾಮಾನ್ಯ ದಾಖಲಾತಿ ಆಂದೋಲನ ನಡೆಯಲಿದೆ. 1-8-2018ಕ್ಕೆ ಐದು ವರ್ಷ 10 ತಿಂಗಳು ಪೂರ್ಣಗೊಳ್ಳುವ ನಿಮ್ಮ ಮಕ್ಕಳನ್ನು ನಮ್ಮ ಶಾಲೆಗೆ ಒಂದನೇ ತರಗತಿಗೆ ಈಗಲೇ ಉಚಿತವಾಗಿ ದಾಖಲಾತಿ ಮಾಡಿರಿ’ ಎಂದು ಕರಪತ್ರದಲ್ಲಿ ಮುದ್ರಿಸಲಾಗಿದೆ.
ಉಚಿತ ಸೌಲಭ್ಯಗಳು: ‘ಸ್ಮಾರ್ಟ್ ಕ್ಲಾಸ್, ನಲಿ-ಕಲಿ ಮೂಲಕ ಗುಣಾತ್ಮಕ ಬೋಧನೆ, ಆನ್ಲೈನ್ನಲ್ಲಿ ವಿದ್ಯಾರ್ಥಿಗಳ ಸಮಗ್ರ ಮಾಹಿತಿ ದಾಖಲು, ಉಚಿತ ಕಂಪ್ಯೂಟರ್ ತರಬೇತಿ, ಉಚಿತ ಪಠ್ಯಪುಸ್ತಕ, ಉಚಿತ ಶೂ ಮತ್ತು ಸಾಕ್ಸ್, ಉಚಿತ ಸಮವಸ್ತ್ರ, ಉಚಿತ ಬಿಸಿಯೂಟ, ಉಚಿತ ಹಾಲು, ಉಚಿತ ಯೋಗ ಶಿಕ್ಷಣ, ಉಚಿತ ಶುಚಿ ಪ್ಯಾಡ್, ಹಾಜರಾತಿ ಪ್ರೋತ್ಸಾಹಧನ, ವಿದ್ಯಾರ್ಥಿ ವೇತನ, ಗ್ರಂಥಾಲಯ ವ್ಯವಸ್ಥೆ, ವಿಶೇಷ ಕ್ರೀಡಾ ತರಬೇತಿ, ಉಚಿತ ವಿಟಮಿನ್ ಹಾಗೂ ಜಂತುನಾಶಕ ಮಾತ್ರೆ ವಿತರಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ನೋಟ್ಬುಕ್, ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಚಿಕಿತ್ಸೆ, ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ, ಬೇಸಿಗೆಯಲ್ಲಿ ‘ಬೇಸಿಗೆ ಸಂಭ್ರಮ’ ಶಿಬಿರ ಕರ್ನಾಟಕ ದರ್ಶನ ಪ್ರವಾಸ ಸೇರಿ ಒಟ್ಟು 20 ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ಮಗುವಿಗೆ ಸಿಗುತ್ತವೆ’ ಎಂದು ಕರಪತ್ರದಲ್ಲಿ ಉಲ್ಲೇಖೀಸಲಾಗಿದೆ.
ಪ್ರವೇಶ ದಾಖಲೆಗಳು: ಮಗುವಿನ ಜನನ ಪ್ರಮಾಣ ಪತ್ರ, ಮಗು, ಮಗುವಿನ ತಂದೆ, ತಾಯಿ ಆಧಾರ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಮಗುವಿನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮಗುವಿನ ಬ್ಯಾಂಕ್ ಪಾಸ್ಬುಕ್, ಹೆಣ್ಣುಮಗುವಿನ ಭಾಗ್ಯಲಕ್ಷ್ಮೀಬಾಂಡ್ ಶಾಲಾ ದಾಖಲಾತಿ ಸಂದರ್ಭದಲ್ಲಿ ಕೊಡಬೇಕು ಎಂದು ಕರಪತ್ರದಲ್ಲಿ ತಿಳಿಸುವ ಮೂಲಕ ಸರ್ಕಾರಿ ಶಾಲಾ ಪ್ರವೇಶಕ್ಕೆ ಬೇಕಾಗುವ ಅವಶ್ಯ ಮಾಹಿತಿಯನ್ನೂ ಪಾಲಕರಿಗೆ ತಿಳಿಸುವ ಕಾರ್ಯ ಮಾಡಿದ್ದಾರೆ. ಒಟ್ಟಾರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳ ಪ್ರವೇಶಾತಿ ಹೆಚ್ಚಿಸಿಕೊಳ್ಳುವ ಚಟುವಟಿಕೆ ನಡೆದಿರುವುದು ಎಲ್ಲರ ಗಮನ ಸೆಳೆಯುತ್ತಿದೆ.
ಸರ್ಕಾರಿ ಶಾಲೆಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಹಾಗೂ ಸರ್ಕಾರಿ ಶಾಲೆಯಲ್ಲಿ ಆಧುನಿಕ ಸೌಲಭ್ಯ ಅಳವಡಿಸಬೇಕು ಎಂಬ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕರು ಹಾಗೂ ಗ್ರಾಮದ ದಾನಿಗಳಿಂದ ಹಣ ಸಂಗ್ರಹಿಸಿ 85,000ರೂ. ವೆಚ್ಚದಲ್ಲಿ ಸ್ಮಾರ್ಟ್ಕ್ಲಾಸ್ ಸೌಲಭ್ಯ ಕಲ್ಪಿಸಿದ್ದು 2019-20ನೇ ಸಾಲಿನಿಂದ ಸ್ಮಾರ್ಟ್ ಕ್ಲಾಸ್ ಆರಂಭವಾಗಲಿದೆ. ಇಂಗ್ಲೀಷ್ ಭಾಷೆಯ ವಿಶೇಷ ಬೋಧನೆಗಾಗಿ ಖಾಸಗಿಯಾಗಿ ಶಿಕ್ಷಕರನ್ನು ನೇಮಿಸಿಕೊಂಡು ಅವರಿಗೆ ಶಾಲಾಭಿವೃದ್ಧಿ ಸಮಿತಿಯಿಂದ ಗೌರವಧನ ನೀಡುತ್ತ ಬರಲಾಗಿದೆ.
ಫಕ್ಕೀರೇಶ ಕಾಳಿ,ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಕಳ್ಳಿಹಾಳ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.