ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ
Team Udayavani, Jan 23, 2022, 12:51 PM IST
ಸವಣೂರ: ಲೌಕಿಕ ಜಂಜಾಟಗಳಿಂದ ಹೊರಬಂದು ಅಧ್ಯಾತ್ಮದ ಚಿಂತನೆ ಮಾಡಿದಾಗ ಮನುಷ್ಯನ ಭವದ ಬದುಕು ನಿಜ ಸಾರ್ಥಕತೆ ಹೊಂದಲು ಸಾಧ್ಯ ಎಂದು ಧಾರವಾಡದ ಮುರುಘಾ ಮಠದ ಮಲ್ಲಿಕಾರ್ಜುನ ತಿಳಿಸಿದರು. ಪಟ್ಟಣದ ಲಲಾಟೇಶ್ವರ ಮಂಗಲ ಭವನದಲ್ಲಿ ಜರುಗಿದ 182ನೇ ಮಾಸಿಕ ಶಿವಾನುಭವ ಕಾರ್ಯಕ್ರಮ ಹಾಗೂ ಲಿಂ| ಪೂಜ್ಯ ಸಿದ್ಧಲಿಂಗ ಸ್ವಾಮಿಗಳವರ ಮತ್ತು ಲಿಂ| ಪೂಜ್ಯ ಸಂಗನಬಸವ ಸ್ವಾಮಿಗಳ ಸಂಸ್ಮರಣ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಖೀಲ ಭಾರತ ಶಿವಾನುಭವ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಅಧ್ಯಾತ್ಮದ ಕುರಿತು ಪರೀಕ್ಷೆ ಬರೆದು ಜ್ಞಾನ ಪ್ರಶಸ್ತಿ ಗಳಿಸುವ ಕಾಲವೊಂದಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಟಿವಿ ಸೇರಿದಂತೆ ಎಲೆಕ್ಟ್ರಾನಿಕ ಮಾಧ್ಯಮಗಳಿಗೆ ಜನ ಮಾರುಹೋಗುತ್ತಿದ್ದಾರೆ. ಇದರಿಂದಾಗಿ ಆಧ್ಯಾತ್ಮ ಅಧ್ಯಯನದ ಸಂಸ್ಕೃತಿ ನಶಿಸುತ್ತಿರುವುದು ವಿಷಾದನೀಯ ಎಂದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಬಂಕಾಪುರ ದೇಸಾಯಿ ಮಠದಲ್ಲಿ ಕಾರ್ಯಕ್ರಮ ನಡೆಸಿಕೊಟ್ಟ ಕಾರ್ಯಕರ್ತರಿಗೆ ಹಾಗೂ ಸವಣೂರ ತಾಲೂಕು ಕಸಾಪ ನೂತನ ಅಧ್ಯಕ್ಷ ಸಿ.ಎನ್. ಪಾಟೀಲ ಹಾಗೂ ನಿಕಟಪೂರ್ವ ಅಧ್ಯಕ್ಷ ಪ್ರಭು ಅರಗೋಳ ಅವರನ್ನು ಕಲ್ಮಠದ ವತಿಯಿಂದ ಗೌರವಿಸಲಾಯಿತು. ನಂತರ ಸೃಜನಿ ನಾಟ್ಯ ಶಾಲೆ ವಿದ್ಯಾರ್ಥಿಗಳಿಂದ ವಚನ ನೃತ್ಯ ಕಾರ್ಯಕ್ರಮ ನಡೆಯಿತು.
ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ ಮೆಣಸಿನಕಾಯಿ, ಕರವೇ ತಾಲೂಕು ಘಟಕ ಅಧ್ಯಕ್ಷ ಪರಶುರಾಮ ಈಳಗೇರ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರವೀಣ ಚರಂತಿಮಠ, ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಮಲ್ಲಿಕಾರ್ಜುನ ಹಾವಣಗಿ, ಗಿರಿರಾಜ್ ಮಾಮ್ಲೆàದೇಸಾಯಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು. ಡಿ.ಎಫ್. ಬಿಂದಲಗಿ, ಎಸ್.ವಿ. ಹಿರೇಮಠ, ಸಿ.ವಿ. ಗುತ್ತಲ, ವಿದ್ಯಾಧರ ಕುತನಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು