ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಬದಲು 13 ವಿದ್ಯಾರ್ಥಿಗಳು ಕಂಗಾಲು
Team Udayavani, Mar 25, 2018, 6:40 AM IST
ಹಾವೇರಿ: ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆ ಅದಲು ಬದಲಾಗಿ 13 ವಿದ್ಯಾರ್ಥಿಗಳು ತೊಂದರೆಗೊಳಗಾದ ಘಟನೆ ರಾಣಿಬೆನ್ನೂರಿನ ತುಮ್ಮಿನಕಟ್ಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಕೊಠಡಿ ಸಿಬ್ಬಂದಿ ಡಿಬಾರ್ ಬೆದರಿಕೆ ಹಾಕಿದ್ದರಿಂದ ಘಟನೆ ಶುಕ್ರವಾರ ಬೆಳಕಿಗೆ ಬಂದಿಲ್ಲ.
ತುಮ್ಮಿನಕಟ್ಟಿಯ ಪರೀಕ್ಷಾ ಕೇಂದ್ರದ ಕೊಠಡಿ ಸಂಖ್ಯೆ 12ರಲ್ಲಿ ಪರೀಕ್ಷಾ ಮುಖ್ಯ ಅಧೀಕ್ಷಕರು ವಿದ್ಯಾರ್ಥಿಗಳಿಗೆ ಸಿಸಿಇಆರ್ಎಫ್ (ಹೊಸ ಪಠ್ಯಕ್ರಮ) ಪ್ರಶ್ನೆಪತ್ರಿಕೆ ಬದಲು ಕೊಡದೇ ಸಿಸಿಇಆರ್ಆರ್ (ಹಳೆಯ ಪಠ್ಯಕ್ರಮ) ಪ್ರಶ್ನೆಪತ್ರಿಕೆಗಳನ್ನು ನೀಡಿದರು. ಇದನ್ನು ನೋಡುತ್ತಿದ್ದಂತೆಯೇ ವಿದ್ಯಾರ್ಥಿಗಳು ನಮಗೆ ಸಂಬಂಧಿಸಿಲ್ಲ ಎಂದು ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಸ್ಪಂದಿಸದ ಮೆಲ್ವಿಚಾರಕರು ಸಮಸ್ಯೆ ಪರಿಹರಿಸದೆ ವಿದ್ಯಾರ್ಥಿಗಳ ಬಾಯಿ ಮುಚ್ಚಿಸಿದ್ದಾರೆ.
ವಿದ್ಯಾಥಿಗಳಿಂದ ಉತ್ತರ ಪತ್ರಿಕೆಗಳನ್ನು ಮರಳಿ ಪಡೆವಾಗ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರಿಂದ ಮಧಾಹ್ನ 1ಕ್ಕೆ ಪುನಃ ವಿದ್ಯಾರ್ಥಿಗಳಿಗೆ ಸಿಸಿಇಆರ್ಎಫ್ ಪ್ರಶ್ನೆಪತ್ರಿಕೆ ನೀಡಿ 30 ನಿಮಿಷಗಳ ಕಾಲಾವಕಾಶ ನೀಡಿ ಕಾಟಾಚಾರಕ್ಕೆ ಪರೀಕ್ಷೆ ಮುಗಿಸಿದ್ದಾರೆ. ತಮ್ಮ ತಪ್ಪು ಮುಚ್ಚಿಡಲು ವಿದ್ಯಾರ್ಥಿಗಳಿಗೆ ಡಿಬಾರ್ ಮಾಡುವ ಬೆದರಿಕೆ ಹಾಕಿದ್ದಾರೆ. ವಿದ್ಯಾರ್ಥಿಗಳು ತಮಗಾದ ಅನ್ಯಾಯವನ್ನು ಸರಿಪಡಿಸಲು ಪತ್ರದ ಮೂಲಕ ಹಿರಿಯ ಅಧಿಕಾರಿಗೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ