ಬೀದಿಬದಿ ವ್ಯಾಪಾರಸ್ಥ ಸಮಿತಿ ಚುನಾವಣೆ


Team Udayavani, Nov 11, 2019, 2:18 PM IST

hv-tdy-1

ಹಾವೇರಿ: ನಗರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥರ ಸಮಿತಿಗೆ ಸರ್ಕಾರ ಇದೇ ಮೊದಲ ಬಾರಿಗೆ ಚುನಾವಣೆ ಮೂಲಕ ಆಯ್ಕೆ ಮಾಡಲು ಮುಂದಾಗಿದ್ದು ಸ್ಥಳೀಯ ನಗರಸಭೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೀದಿ ಬದಿ ವ್ಯಾಪಾರಸ್ಥರ ಸಮಿತಿ ಚುನಾವಣೆಗೆ ನಗರಸಭೆ 822 ಬೀದಿಬದಿ ವ್ಯಾಪಾರಸ್ಥರರ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ಮತದಾರರ ಪಟ್ಟಿಯನ್ನು ಸರ್ಕಾರಕ್ಕೂ ಕಳುಹಿಸಿದೆ. ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 2ರಲ್ಲಿ ಮತದಾನ ನಡೆಸಲು ಸಹ ತೀರ್ಮಾನಿಸಿದೆ.

ಕೇಂದ್ರ ಸರ್ಕಾರ 2014-15ರಲ್ಲಿ ಜಾರಿಗೊಳಿಸಿರುವ ಈ ಸಮಿತಿಗೆ ಪೌರಾಯುಕ್ತರು ಅಧ್ಯಕ್ಷರಾಗಿದ್ದು, ಬೀದಿ ಬದಿ ವ್ಯಾಪಾರಸ್ಥರನ್ನು ಒಳಗೊಂಡಂತೆ 10 ನಾಮನಿರ್ದೇಶಿತ ಸದಸ್ಯರನ್ನು ನೇಮಿಸಿತ್ತು. ಬಳಿಕ ಕರ್ನಾಟಕ ಬೀದಿ ವ್ಯಾಪಾರಿಗಳ (ಜೀವನೋಪಾಯ ಮತ್ತು ಸಂರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) 2019ರ ನಿಯಮದನ್ವಯ ಹಾಗೂ ಅನುಸೂಚಿ (ಷೆಡ್ನೂಲ್‌) ಕ್ರಮ ಸಂಖ್ಯೆ 2ರ ಅನ್ವಯ ಬೀದಿ ಬದಿ ವ್ಯಾಪಾರಸ್ಥರ ಪಟ್ಟಣ ಮಾರಾಟ ಸಮಿತಿಗೆ 10 ಜನ (ಬೀದಿ ಬದಿ ವ್ಯಾಪಾರಸ್ಥರ ಪ್ರತಿನಿಧಿ ಗಳನ್ನು) ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಉದ್ದೇಶಿಸಿದೆ.

ನಗರದ ಪಿ.ಬಿ. ರಸ್ತೆ, ಬಸ್‌ನಿಲ್ದಾಣ ಎದುರಿನ ಹಾನಗಲ್ಲ ರಸ್ತೆ, ಎಂ.ಜಿ. ರಸ್ತೆ, ಜೆ.ಎಚ್‌.ಪಟೇಲ್‌ ರಸ್ತೆ, ಹುಕ್ಕೇರಿಮಠ ರಸ್ತೆ ಸೇರಿದಂತೆ ನಗರದ ವಿವಿಧ ವಾರ್ಡ್‌, ಬಡಾವಣೆಗಳಲ್ಲಿ ಹಣ್ಣು, ಹೂವು, ಬಟ್ಟೆ, ತರಕಾರಿ, ಲಘು ತಿನಿಸು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವ್ಯಾಪಾರಿಗಳಿದ್ದಾರೆ. ಅವರೆಲ್ಲರೂ ತಳ್ಳುವ ಗಾಡಿ, ತಾತ್ಕಾಲಿಕ ಗೂಡು, ಶೆಡ್‌, ಮರದ ನೆರಳುಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇವರೆಲ್ಲರೂ ನಗರಸಭೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಸ್ಥರ ಸಮಿತಿಯ ಸದಸ್ಯರಾಗಬಹುದಾಗಿದ್ದು ಇದಕ್ಕಾಗಿ ಚುನಾವಣೆ ನಡೆಯಲಿದೆ.

ನಗರಸಭೆಯಿಂದ ಈಗಾಗಲೇ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನಚೀಟಿ ನೀಡಲಾಗಿದ್ದು, ಗುರುತಿನಚೀಟಿ ಇರುವ ಬೀದಿ ಬದಿ ವ್ಯಾಪಾರಸ್ಥರು ಮಾತ್ರ ಈ ಚುನಾವಣೆಯಲ್ಲಿ ಸ್ಪರ್ಧಿಸುವ ಹಾಗೂ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ 2000ಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಸ್ಥರು ಇದ್ದರೂ ಇವರಲ್ಲಿ 822 ಜನ ಮಾತ್ರ ಗುರುತಿನಚೀಟಿ ಪಡೆದು ತಮ್ಮ ವ್ಯಾಪಾರ ವೃತ್ತಿಯನ್ನು ಅಧಿಕೃತಗೊಳಿಸಿಕೊಂಡಿದ್ದಾರೆ. ಹೀಗಾಗಿ ಈ 822 ಬೀದಿ ಬದಿ ವ್ಯಾಪಾರಸ್ಥರು ಮಾತ್ರ ಈ ಚುನಾವಣೆಯಲ್ಲಿ ಮತದಾನ ಮಾಡುವ ಹಾಗೂ ಸ್ಪಧಿಸುವ ಹಕ್ಕು ಹೊಂದಿದ್ದಾರೆ.

ಬೀದಿಬದಿ ವ್ಯಾಪಾರಸ್ಥರ ಸಮಿತಿಗೆ ಆಯ್ಕೆಯಾಗುವ ಸದಸ್ಯರ ಅಧಿಕಾರಾವ  ಐದು ವರ್ಷಗಳ ವರೆಗೆ ಇರುತ್ತದೆ. ಬೀದಿಬದಿ ವ್ಯಾಪಾರಸ್ಥರ ಬೇಡಿಕೆ, ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಸಮಿತಿ ಇದಾಗಿದ್ದು, ಇದರಲ್ಲಿ ನಗರಸಭೆ ಪೌರಾಯುಕ್ತರು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಹ ಇರುತ್ತಾರೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.