ಶಿಕ್ಷಕರ ಜವಾಬ್ದಾರಿ ನಿಭಾಯಿಸಿದ ವಿದ್ಯಾರ್ಥಿಗಳು


Team Udayavani, Nov 15, 2019, 1:58 PM IST

hv-tdy-1

ಅಕ್ಕಿಆಲೂರು: ಪಟ್ಟಣದ ಶ್ರೀ ಚನ್ನವೀರೇಶ್ವರ ಪ್ರಸಾದ ನಿಲಯ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಗಂಗಪ್ಪ ಧಾರವಾಡ ಗ್ರಾಮೀಣ ಗುರುಕುಲದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿಶೇಷವಾಗಿ ಮಕ್ಕಳೇ ಶಿಕ್ಷಕರ ಸರದಿಯಲ್ಲಿ ನಿಂತು ಆಟ-ಪಾಠಗಳಲ್ಲಿ ತೊಡಗಿಕೊಂಡು ಸಂಭ್ರಮಿಸಿದರು.

ಪಟ್ಟಣದ ಜಿಡಿಜಿ ಗುರುಕುಲದಲ್ಲಿ ಗುರುವಾರ ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರು ಅವರ 130ನೇ ಜಯಂತಿ ಅಂಗವಾಗಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಶಾಲೆಯಲ್ಲಿ ಬೆಳಗ್ಗೆಯಿಂದಲೇ ಮಕ್ಕಳು ಶಿಕ್ಷಕರಾಗಿ ಪಾಠ ಮಾಡಿ, ಆಟೋಟಗಳಲ್ಲಿ ತೊಡಗಿಕೊಂಡು ಮಕ್ಕಳ ದಿನವನ್ನು ವಿಶೇಷವಾಗಿ ಆಚರಿಸಿದರು.

ಪ್ರಾರ್ಥನೆಯಲ್ಲಿ ಶಿಕ್ಷಕರನ್ನು ಸರದಿ ಸಾಲಿನಲ್ಲಿ ನಿಲ್ಲಿಸುವುದು, ಪಾಠದ ಕೋಣೆಗಳಲ್ಲಿ ಪಾಠ ಮಾಡುವುದು, ಆಟಗಳನ್ನು ಆಡಿಸುವುದು ಹೀಗೆ ಇಡೀ ದಿನ ಶಿಕ್ಷಕರ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಶಾಲೆಯ ಮಕ್ಕಳು ಗಮನ ಸೆಳೆದರು. ನಂತರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗುರುಕುಲದ ಅಧ್ಯಕ್ಷ ನಾಗರಾಜ ಪಾವಲಿ, ಆಧುನಿಕ ದಿನಗಳಲ್ಲಿ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಎಲ್ಲ ರೀತಿಯ ತರಬೇತಿಗಳನ್ನು ನೀಡಬೇಕಾದ್ದು  ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ.

ಮುಂದಿನ ಬದಲಾವಣೆಗಳಿಗೆ ವೇಗವಾಗಿ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳು ಎಲ್ಲ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಪಾಲಕರು ಮನೆಯಲ್ಲಿ ಮಕ್ಕಳಿಗೆ ಉತ್ತೇಜನ ನೀಡಬೇಕಿದೆ. ಎಲ್ಲ ಕ್ಷೇತ್ರಗಳ ಕುರಿತು ಮಕ್ಕಳಿಗೆ ಅರಿವು ಇದ್ದಾಗ ಮಾತ್ರ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮಕ್ಕಳು ಶಕ್ತರಾಗುತ್ತಾರೆ ಎಂದರು.

ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ವಿಶೇಷ ಆಟಗಳು ನಡೆದವು. ಈ ಸಂದರ್ಭದಲ್ಲಿ ಗುರುಕುಲದ ಗೌರವ ಕಾರ್ಯದರ್ಶಿ ಮಹೇಶ ಸಾಲವಟಗಿ, ನಿರ್ದೇಶಕ ಮಂಡಳಿಯ ಸಿದ್ಧಲಿಂಗೇಶ ತುಪ್ಪದ, ಅಶೋಕ ಸಣ್ಣವೀರಪ್ಪನವರ, ಆಡಳಿತಾಧಿ ಕಾರಿ ಸುರೇಂದ್ರ ಕರೆಮ್ಮನವರ, ಮುಖ್ಯೋಪಾಧ್ಯಾಯ ವಿಜಯ ಪರಶಿಕ್ಯಾತಣ್ಣನವರ, ಶಿಕ್ಷಕರಾದ ರಮೇಶ ಮಡಿವಾಳರ, ಜ್ಯೋತಿ ಯಳ್ಳೂರ, ಸುಶ್ಮಿತಾ ಶೆಟ್ಟಿ, ನಸೀಮ್‌ ಕುಂದಗೋಳ, ಪ್ರವೀಣ ಕಟಗಿ ಸೇರಿದಂತೆ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.